
ಕೋಲ್ಕತಾ: ಪಶ್ಚಿಮ ಬಂಗಾಳ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆ ವಾರಕ್ಕೊಮ್ಮೆ ಚಿಕನ್ ಹಾಗೂ ಋುತುಕಾಲಿಕ ಹಣ್ಣುಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪಂಚಾಯತ್ ಚುನಾವಣೆ ಮುನ್ನವೇ ಈ ಘೋಷಣೆ ಹೊರಬಿದ್ದಿದೆ. ಜನವರಿಯಿಂದ ಏಪ್ರಿಲ್ವರೆಗೆ ನಾಲ್ಕು ತಿಂಗಳ ಅವಧಿಗೆ ಸದ್ಯ ಮಕ್ಕಳಿಗೆ ನೀಡುತ್ತಿರುವ ತರಕಾರಿ ಊಟ ಹಾಗೂ ಮೊಟ್ಟೆಯೊಂದಿಗೆ ಹೆಚ್ಚಿನ ಪೋಷಣೆ ಒದಗಿಸುವ ಸಲುವಾಗಿ ಚಿಕನ್ ನೀಡುವುದಾಗಿ ಸರ್ಕಾರ ತಿಳಿಸಿದೆ. ಇದಕ್ಕಾಗಿ 371 ಕೋಟಿ ರು. ವೆಚ್ಚದಲ್ಲಿ ಹೆಚ್ಚುವರಿ ಪೋಷಕಾಂಶ ಯೋಜನೆ ರೂಪಿಸಲಾಗಿದೆ. ಆದರೆ ಏಪ್ರಿಲ್ನ ನಂತರ ಈ ಯೋಜನೆ ಮುಂದುವರೆಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ರಾಜ್ಯದಲ್ಲಿ ಒಟ್ಟು 1.6 ಕೊಟಿ ವಿದ್ಯಾರ್ಥಿಗಳು ಪ್ರತಿನಿತ್ಯ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದಾರೆ.
Karwar: ಇಲಿ ಬಿದ್ದ ಸಾಂಬಾರನ್ನೇ ಬಡಿಸಿದ ಅಡುಗೆ ಸಹಾಯಕರು, ಶಾಲಾ ಬಿಸಿಯೂಟ ತಿಂದು ವಿದ್ಯಾರ್ಥಿಗಳು ಅಸ್ವಸ್ಥ
PM-POSHAN Scheme: ಶಾಲಾ ಮಕ್ಕಳಿಗೆ ವಿಶೇಷ ಭೋಜನ ಯೋಜನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ