ಬಂಗಾಳ ವೈದ್ಯರ ಮುಷ್ಕರ ಭಾಗಶಃ ಅಂತ್ಯ; ಇಂದಿನಿಂದ ಕರ್ತವ್ಯಕ್ಕೆ ಹಾಜರು

Published : Sep 20, 2024, 09:23 AM IST
ಬಂಗಾಳ ವೈದ್ಯರ ಮುಷ್ಕರ ಭಾಗಶಃ ಅಂತ್ಯ; ಇಂದಿನಿಂದ ಕರ್ತವ್ಯಕ್ಕೆ ಹಾಜರು

ಸಾರಾಂಶ

ಕಳೆದ 41 ದಿನಗಳಿಂದ ಸತತವಾಗಿ ಮುಷ್ಕರ ನಡೆಸುತ್ತಿದ್ದ ಕಿರಿಯ ವೈದ್ಯರು, ತಮ್ಮ ಪ್ರತಿಭಟನೆಯನ್ನು ಭಾಗಶಃ ಕೈಬಿಡಲು ನಿರ್ಧರಿಸಿದ್ದಾರೆ.

ಕೋಲ್ಕತಾ: ಇಲ್ಲಿನ ಆರ್‌ಜೆ ಕರ್‌ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ಕಳೆದ 41 ದಿನಗಳಿಂದ ಸತತವಾಗಿ ಮುಷ್ಕರ ನಡೆಸುತ್ತಿದ್ದ ಕಿರಿಯ ವೈದ್ಯರು, ತಮ್ಮ ಪ್ರತಿಭಟನೆಯನ್ನು ಭಾಗಶಃ ಕೈಬಿಡಲು ನಿರ್ಧರಿಸಿದ್ದಾರೆ.

ಸರ್ಕಾರದೊಂದಿಗೆ ನಡೆದ ಮಾತುಕತೆ ಫಲ ಕೊಟ್ಟಿದ್ದು, ಬೇಡಿಕೆ ಈಡೇರಿಸಲು ಸರ್ಕಾರ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮುಷ್ಕರ ಹಿಂಪಡೆದು, ಶನಿವಾರದಿಂದ ಸೀಮಿತ ಪ್ರಮಾಣದಲ್ಲಿ ಕರ್ತವ್ಯಕ್ಕೆ ಹಾಜರಾಗುವುದಾಗಿ ಸಾವಿರಾರು ಕಿರಿಯ ವೈದ್ಯರು ಪ್ರಕಟಿಸಿದ್ದಾರೆ.

ಹೀಗಾಗಿ ಕಳೆದ ಒಂದೂವರೆ ತಿಂಗಳಿನಿಂದ ರಾಜ್ಯವ್ಯಾಪಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಅನುಭವಿಸಿದ್ದ ಸಂಕಷ್ಟ ಅಂತ್ಯಗೊಳುವ ಭರವಸೆ ವ್ಯಕ್ತವಾಗಿದೆ. ವೈದ್ಯರ ಮುಷ್ಕರದ ಪರಿಣಾಮ ಸೂಕ್ತ ಚಿಕಿತ್ಸೆ ಸಿಗದೇ 25ಕ್ಕೂ ಹೆಚ್ಚು ರೋಗಿಗಳು ಸಾವನ್ನಪ್ಪಿದ್ದರು. ಸುಪ್ರೀಂಕೋರ್ಟ್‌ ಸೂಚನೆ ಹೊರತಾಗಿಯೂ ವೈದ್ಯರು ಮುಷ್ಕರ ಕೈಬಿಡಲು ನಿರಾಕರಿಸಿದ್ದರು.

ಕೇರಳ ಮದ್ಯದ ಮಳಿಗೆ ಸಿಬ್ಬಂದಿ ಪೈಕಿ ಶೇ.50ರಷ್ಟು ಮಹಿಳೆಯರು : ಸ್ತ್ರೀಯರ ಪಾಲು ಇಷ್ಟು ಇನ್ನೆಲ್ಲೂ ಇಲ್ಲ

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರು ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ಸೋಮವಾರ ರಾತ್ರಿ ಕೊನೆಗೂ ಸಂಧಾನ ಸಭೆ ನಡೆದಿದ್ದು, ಬಹುತೇಕ ಫಲಪ್ರದವಾಗಿತ್ತು ಎಂದು ವರದಿಯಾಗಿತ್ತು. ಮಮತಾರ ಕಾಳಿಘಾಟ್ ಪ್ರದೇಶದ ನಿವಾಸದಲ್ಲಿ ಸೋಮವಾರ 1.45 ತಾಸು ಸಂಧಾನ ಸಭೆ ನಡೆದು, ಕೆಲವು ವಿಷಯಗಳ ಬಗ್ಗೆ ಒಮ್ಮತಕ್ಕೆ ಬರಲಾಯಿತು. ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಬೇಕು ಹಾಗೂ ತಮಗೆ ಕೆಲಸದ ವೇಳೆ ಭದ್ರತೆ ನೀಡಬೇಕು ಎಂಬ ಕಿರಿಯ ವೈದ್ಯರ ಪ್ರಮುಖ ಬೇಡಿಕೆಯನ್ನು ಪ. ಬಂಗಾಳ ಸರ್ಕಾರ ಒಪ್ಪಿಕೊಂಡಿದೆ ಎಂದು ತಿಳಿದು ಬಂದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?