ದುರ್ಗಾ ವಿಸರ್ಜನೆ ವೇಳೆ ದಿಢೀರ್ ಪ್ರವಾಹ, 7 ಭಕ್ತರ ಸಾವು ಹಲವರು ನಾಪತ್ತೆ!

Published : Oct 05, 2022, 11:25 PM ISTUpdated : Oct 05, 2022, 11:45 PM IST
ದುರ್ಗಾ ವಿಸರ್ಜನೆ ವೇಳೆ ದಿಢೀರ್ ಪ್ರವಾಹ, 7 ಭಕ್ತರ ಸಾವು ಹಲವರು ನಾಪತ್ತೆ!

ಸಾರಾಂಶ

ದಿಢೀರ್ ಪ್ರವಾಹ ಸೃಷ್ಟಿಯಾದ ಕಾರಣ ನದಿ ದಂಡೆಯಲ್ಲಿ ನಿಂತಿದ್ದ ಭಕ್ತರು ಕೊಚ್ಚಿ ಹೋಗಿದ್ದಾರೆ. ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಭಕ್ತರು ಕಾಣೆಯಾಗಿದ್ದಾರೆ. ಮೂವರ ಮೃತದೇಹ ಪತ್ತೆಯಾಗಿದೆ.

ಜಲ್‌ಪೈಗುರಿ(ಅ.05):  ಪಶ್ಚಿಮ ಬಂಗಳಾದಲ್ಲಿ ದುರ್ಗಾ ವಿಸರ್ಜನೆ ವೇಳೆ ದಿಢೀರ್ ಸೃಷ್ಟಿಯಾದ ಪ್ರವಾಹದಿಂದ ಹಲವು ಭಕ್ತರು ಕೊಚ್ಚಿ ಹೋದ ಘಟನೆ ನಡೆದಿದೆ. ಜಲ್‌ಪೈಗುರಿ ಜಿಲ್ಲೆಯ ನಿಯೋರಾ ನದಿ ದಂಡೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಈ ಅವಘಡ ಸಂಭವಿಸಿದೆ. ಕಳೆದೆರಡು ದಿನದಿಂದ ಸತತ ಮಳೆಯಾಗುತ್ತಿದ್ದ ಕಾರಣ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ ಸೃಷ್ಟಿಯಾಗಿದೆ.ಇದರಿಂದ ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಭಕ್ತರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. 7 ಮಂದಿ ಮೃತದೇಹ ಹೊರಕ್ಕೆ ತೆಗೆಯಲಾಗಿದೆ. 60ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ರಕ್ಷಿಸಿದ ಭಕ್ತರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಅತೀ ದೊಡ್ಡ ಹಬ್ಬವಾಗಿದೆ. ದುರ್ಗಾ ಮೂರ್ತಿ ಆರಾಧಿಸಿ ವಿಸರ್ಜನೆ ಮಾಡುವುದು ಸಂಪ್ರದಾಯ. ಹೀಗೆ ಮಾಲ್‌ಬಜಾರ್‌ನಲ್ಲಿನ ದುರ್ಗಾ ಪೂಜೆಗೆ ಇಡೀ ಗ್ರಾಮವೇ ಸೇರಿತ್ತು. ದುರ್ಗಾ ಮೂರ್ತಿ ವಿಸರ್ಜನೆ ಮಾಡುವ ವೇಳೆ ಹಲವು ಭಕ್ತರು ನದಿ ದಂಡೆಯಲ್ಲಿ ನಿಂತಿದ್ದರು. ಈ ವೇಳೆ ದಿಢೀರ್ ಪ್ರವಾಹ ಸೃಷ್ಟಿಯಾಗಿದೆ. ಇದರಿಂದ ಮಕ್ಕಳು, ಮಹಳೆಯರು, ವೃದ್ಧರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ.

ಮಾಲ್‌ಬಜಾರ್‌ನ ಖ್ಯಾತ ಬಟ್ಟೆ ವ್ಯಾಪಾರಿ ತನ್ನ ಮೊಮ್ಮಗನೊಂದಿಗೆ ದುರ್ಗಾ ಮೂರ್ತಿ ವಿಸರ್ಜನೆಗೆ ತೆರಳಿದ್ದರು. ಮಗುವನ್ನು ತೊಡೆಯಲ್ಲಿ ಕುಳ್ಳಿರಿಸಿ ವಿಸರ್ಜನೆ ನೋಡುತ್ತಾ ಕುಳಿತಿದ್ದಾರೆ. ಈ ವೇಳೆ ಪ್ರವಾಹ ಬಂದ ಕಾರಣ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಆದರೆ ಮಗುವನ್ನು ದಡಕ್ಕೆ ಎಸೆದ ಬಟ್ಟೆ ವ್ಯಾಪಾರಿ ಮಾತ್ರ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಮಗುವನ್ನು ರಕ್ಷಿಸಲಾಗಿದೆ. ಆದರೆ ಬಟ್ಟೆ ವ್ಯಾಪಾರಿ ನಾಪತ್ತೆಯಾಗಿದ್ದಾರೆ.

ಭಾರತಕ್ಕೆ ಮತ್ತೆ ಕಾಡಿದ ಮೇಘಸ್ಫೋಟ, ಹಿಮಾಚಲ ಪ್ರದೇಶ ಪ್ರವಾಹಕ್ಕೆ 15 ಸಾವು, 8 ಮಂದಿ ನಾಪತ್ತೆ!

ಸದ್ಯದ ಮಾಹಿತಿ ಪ್ರಕಾರ 7 ಭಕ್ತರ ಮೃತದೇಹ ಪತ್ತೆಯಾಗಿದೆ. 50ಕ್ಕೂ ಹೆಚ್ಚೂ ಮಂದಿಯನ್ನು ರಕ್ಷಿಸಲಾಗಿದೆ. ದಿಢೀರ್ ಪ್ರವಾಹ ಸೃಷ್ಟಿಯಾದ ಸಂದರ್ಭದಲ್ಲಿ ಸಾವಿರಕ್ಕೂ ಹೆಚ್ಚು ಭಕ್ತರು ನದಿ ದಂಡೆಯಲ್ಲಿದ್ದರು. ಇದರಲ್ಲಿ ಬಹುತೇಕರು ಕೊಚ್ಚಿ ಹೋಗಿದ್ದಾರೆ. ನದಿ ಕಳೆಗಿನ ಪ್ರದೇಶದಲ್ಲಿ ಶೋಧ ಕಾರ್ಯ ಮುಂದುವರಿದಿದೆ. ರಕ್ಷಣಾ ಪಡೆ, ತಜ್ಞರು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!