
ಕೋಲ್ಕತ್ತಾ[ಜ.27]: ಕೇವಲ 1 ರೂಪಾಯಿಗೆ ಬಡ ರೋಗಿಗಳಿಗೆ ಚಿಕಿತ್ಸೆ ನೀಡುವ ಡಾಕ್ಟರ್ ಎಂದೇ ಪ್ರಸಿದ್ಧರಾಗಿರುವ ಪಶ್ಚಿಮ ಬಂಗಾಳದ ಬೋಲ್ಪುರದ ವೈದ್ಯ ಡಾಕ್ಟರ್ ಸುಶೋವನ್ ಬ್ಯಾನರ್ಜಿ ಈ ಬಾರಿಯ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತಮ್ಮ ಹೆಸರಿಗೆ ಪದ್ಮ ಪ್ರಶಸ್ತಿ ಘೋಷಣೆಯಾದ ಬೆನ್ನಲ್ಲೇ ಸುಶೋವನ್ ಇದನ್ನು ಬೇರೆಯವರಿಗೆ ಸಮರ್ಪಿಸಿದ್ದಾರೆ. ಯಾರಿಗೆ ಮುಂದಿದೆ ವಿವರ.
ಈ ಬಾರಿಯೂ ತೆರೆಮರೆ ಸಾಧಕರಿಗೆ ಗೌರವ!
ಈ ಬಾರಿ ಪಶ್ಚಿಮ ಬಂಗಾಳದಿಂದ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ನಾಲ್ವರು ಸಾಧಕರಲ್ಲಿ ಡಾಕ್ಟರ್ ಸುಶೋವನ್ ಕೂಡಾ ಒಬ್ಬರು. ಶನಿವಾರ ಈ ಸಂಬಂಧ ಪ್ರತಿಕ್ರಿಯಿಸುತ್ತಾ ಮಾತನಾಡಿದ ಡಾಕ್ಟರ್'ನಾನು 57 ವರ್ಷಗಳಿಂದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದೇನೆ. ಅವರಿಲ್ಲದಿದ್ದರೆ ಈ ಪದ್ಮಶ್ರೀ ಪ್ರಶಸ್ತಿ ಬರುತ್ತಿರಲಿಲ್ಲ. ಹೀಗಾಗಿ ಈ ಪ್ರಶಸ್ತಿಯನ್ನು ನಾನು ಅವರಿಗೆ ಸಲ್ಲಿಸುತ್ತೇನೆ' ಎಂದಿದ್ದಾರೆ
ಬ್ಯಾನರ್ಜಿ ಹೊರತುಪಡಿಸಿ ಪಶ್ಚಿಮ ಬಂಗಾಳದಲ್ಲಿ ಡಾ. ಅರುಣೋದಯ್ ಮಂಡಲ್, ಖಾಜಿ ಮಾಸೂಮ್ ಅಖ್ತರ್ ಹಾಗೂ ಮಣಿಲಾಲ್ ನಾಗ್ ರವರ ಹೆಸರೂ ಘೋಷಣೆಯಾಗಿದೆ.
ಪದ್ಮಶ್ರೀ ಪಡೆದ ಈ ಲಂಗರ್ ಬಾಬಾ ನಿಮಗೆ ಗೊತ್ತಾ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ