ಆ ಒಂದು ಅಂಶ ಬಯಲಾಗುವವರೆಗೆ ಚೀನಾ ಬೆದರಿತು ಎನ್ನುವುದು ತಪ್ಪಾದೀತು!

Published : Jul 10, 2020, 05:38 PM IST
ಆ ಒಂದು ಅಂಶ ಬಯಲಾಗುವವರೆಗೆ ಚೀನಾ ಬೆದರಿತು ಎನ್ನುವುದು ತಪ್ಪಾದೀತು!

ಸಾರಾಂಶ

ಗಡಿ ಭಾಗಗಳ ಮುಂದಿರುವ ಬಫರ್‌ ಜೋನ್‌ ದಾಟಿ ಒಳಗೆ ಬಂದಿದ್ದ ಚೀನಿ ಸೈನಿಕರು| ಗಡಿ ಘರ್ಷಣೆಯಿಂದ ಚೀನಾ ಸಾಧಿಸಿದ್ದೇನು?| ಚೀನಿ ಸೇನೆ ಯಾವಾಗ ಮನಸ್ಸು ಬದಲಾಯಿಸುತ್ತದೆ ಎಂದು ಹೇಳುವುದು ಕಷ್ಟ

ನವದೆಹಲಿ(ಜು.10): ಲಡಾಖ್‌ನ ಬಹುತೇಕ ಹತ್ತು ಕಡೆಗಳಲ್ಲಿ ಗಡಿ ಭಾಗಗಳ ಮುಂದಿರುವ ಬಫರ್‌ ಜೋನ್‌ ದಾಟಿ ಒಳಗೆ ಬಂದಿದ್ದ ಚೀನಿ ಸೈನಿಕರು, ಸಾಮಾನು ಮತ್ತು ವಾಹನಗಳ ಜೊತೆ ಹಿಂದೆ ಹೊರಟಿದ್ದಾರೆ. ಬಹುತೇಕ ಕಡೆಗಳಲ್ಲಿ ಭಾರತೀಯ ಸೈನಿಕರೇ ಹೋಗಿ ಪರಿಶೀಲನೆ ನಡೆಸಿದ್ದಾರೆ.

ಸೋಮವಾರ ಗಲ್ವಾನ್‌ ನದಿಯ ಪೆಟ್ರೋಲಿಂಗ್‌ ಪಾಯಿಂಟ್‌-14, ಮಂಗಳವಾರ ಹಾಟ್‌ಸ್ಟ್ರಿಂಗ್ಸ್‌ ಬಳಿಯ ಪಾಯಿಂಟ್‌-15 ಮತ್ತು ಗೋಗ್ರಾ ಪೋಸ್ಟ್‌ ಬಳಿಯ ಪಾಯಿಂಟ್‌ ನಂಬರ್‌ 17ರಿಂದ 1.8ರಿಂದ 2 ಕಿಲೋಮೀಟರ್‌ನಷ್ಟುಚೀನಿ ಸೈನಿಕರು ಹಿಂದೆ ಸರಿದಿದ್ದಾರೆ.

ಬಫರ್‌ ಜೋನ್‌ನ 2 ಕಿಲೋಮೀಟರ್‌ ಹಿಂದೆ 30ಕ್ಕೂ ಕಡಿಮೆ ಸೈನಿಕರು, 4 ಕಿಲೋಮೀಟರ್‌ ಹಿಂದೆ 50ಕ್ಕೂ ಕಡಿಮೆ ಸೈನಿಕರು ಮತ್ತು ಅದರ 2 ಕಿಲೋಮೀಟರ್‌ ಹಿಂದೆ ಸಾಮಾನ್ಯ ಗಡಿ ಪೋಸ್ಟ್‌ಗಳು ಇರಬೇಕೆಂದು ಮಾತುಕತೆಯಲ್ಲಿ ಒಪ್ಪಂದವಾಗಿತ್ತು. ಅದರಂತೆ ಎರಡೂ ಸೇನೆಗಳು ಹಿಂದೆ ಸರಿಯುತ್ತಿವೆ. ಆದರೆ ಗಲ್ವಾನ್‌ಗಿಂತ ಮೊದಲು ಘರ್ಷಣೆ ನಡೆದ ಉಪ್ಪು ನೀರಿನ ಸರೋವರ ಪೆಂಗೊಂಗ್‌ ತ್ಸೋನಲ್ಲಿ ಮಾತ್ರ ಚೀನಿ ಸೇನೆ ಫಿಂಗರ್‌ 4ನಿಂದ 5 ವರೆಗೆ ಮಾತ್ರ ಹಿಂದೆ ಸರಿದಿದ್ದು, 8ರ ವರೆಗೆ ಹೋಗುವುದಾಗಿ ನೀಡಿದ್ದ ಭರವಸೆ ಕಾರ್ಯರೂಪಕ್ಕೆ ಬಂದಿಲ್ಲ.

ಕಳೆದ ಒಂದು ತಿಂಗಳಲ್ಲಿ 40 ಸಾವಿರ ಸೈನಿಕರನ್ನು ದೂರದ ಪ್ರದೇಶಗಳಿಂದ ಅಕ್ಸಾಯ್‌ಚಿನ್‌ ಬಳಿ ತಂದಿರುವ ಚೀನಿ ಸೇನೆ ಯಾವಾಗ ಮನಸ್ಸು ಬದಲಾಯಿಸುತ್ತದೆ ಎಂದು ಹೇಳುವುದು ಕಷ್ಟ. ಹೀಗಾಗಿ ಭಾರತೀಯ ಸೇನೆ 2 ಬ್ರಿಗೇಡ್‌ಗಳನ್ನು ಚಳಿಗಾಲದವರೆಗೆ ಅಲ್ಲೇ ಮುಂದುವರೆಸಲು ತೀರ್ಮಾನ ತೆಗೆದುಕೊಂಡಿದೆ. ಆದರೆ ಘರ್ಷಣೆ ತಳ್ಳಿಹಾಕಲು ಬಫರ್‌ ಝೋನ್‌ನಲ್ಲಿ ಸದ್ಯಕ್ಕೆ ಪೆಟ್ರೋಲಿಂಗ್‌ ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ. ಆದರೆ ನಿರ್ದಿಷ್ಟವಾಗಿ ಗಡಿ ಘರ್ಷಣೆಯಿಂದ ಚೀನಾ ಸಾಧಿಸಿದ್ದೇನು ಎಂದು ಸ್ಪಷ್ಟವಾಗುವವರೆಗೆ ನಾವು ಗೆದ್ದೆವು, ಸೋತೆವು ಅಥವಾ ಮೋದಿ ಹೇಳಿಕೆಯಿಂದ ಚೀನಾ ಬೆದರಿತು ಎಂದೆಲ್ಲ ಹೇಳುವುದು ತಪ್ಪಾದೀತು.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ

ಇಂಡಿಯಾ ಗೇಟ್, ದೆಹಲಿಯಿಂದ ಕಂಡ ರಾಜಕಾರಣ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!