ನಿಮ್ಮ ಮಗುವಿನ ಭವಿಷ್ಯಕ್ಕಾಗಿ ನಾಳೆ ಕೇಂದ್ರದಿಂದ ಹೊಸ ಯೋಜನೆಗೆ ಚಾಲನೆ; ಏನಿದು ಎನ್‌ಪಿಎಸ್ ವಾತ್ಸಲ್ಯ ಸ್ಕೀಂ?

Published : Sep 17, 2024, 11:03 PM ISTUpdated : Jan 13, 2025, 02:36 PM IST
ನಿಮ್ಮ ಮಗುವಿನ ಭವಿಷ್ಯಕ್ಕಾಗಿ ನಾಳೆ ಕೇಂದ್ರದಿಂದ ಹೊಸ ಯೋಜನೆಗೆ ಚಾಲನೆ; ಏನಿದು ಎನ್‌ಪಿಎಸ್ ವಾತ್ಸಲ್ಯ ಸ್ಕೀಂ?

ಸಾರಾಂಶ

ನಿಮ್ಮ ಮಗುವಿನ ಭವಿಷ್ಯಕ್ಕಾಗಿ ಕೇಂದ್ರ ಹೊಸ ಯೋಜನೆಗೆ ನಾಳೆ ಚಾಲನೆ ನೀಡಲಿರುವ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್. ಏನಿದು ಎನ್‌ಪಿಎಸ್ ಯೋಜನೆ, ಯಾರು ಅರ್ಹರು, ಫಲಾನುಭವಿಯಾಗುವುದು ಹೇಗೆ ತಿಳಿಯಿರಿ  

NPS Vatsalya Scheme: ಪಿಂಚಣಿ ಯೋಜನೆಗಳು ಕೇವಲ ವಯಸ್ಕರಿಗೆ ಮಾತ್ರ ಎಂಬ ತಪ್ಪು ಕಲ್ಪನೆ ಅನೇಕರಲ್ಲಿದೆ. ಆದರೆ ವಯಸ್ಕರಿಗೆ ಮಾತ್ರವಲ್ಲ ಮಕ್ಕಳಿಗೂ ಲಭ್ಯವಿದೆ. ಮಕ್ಕಳ ಭವಿಷ್ಯ ದೃಷ್ಟಿಯಿಂದ ಕೆಲವು ಖಾಸಗಿ ಕಂಪನಿಗಳು ಈಗಾಗಲೇ ಮಾರುಕಟ್ಟೆಯಲ್ಲಿ ಇಂತಹ ಯೋಜನೆಗಳನ್ನು ಪ್ರಾರಂಭಿಸಿವೆ. ಇದೀಗ ಅವರಿಗೆ ಪೈಪೋಟಿ ನೀಡಲು ಕೇಂದ್ರ ಸರ್ಕಾರ ಸಹ ಎನ್‌ಪಿಎಸ್‌ನಲ್ಲಿ (ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ) ಹೊಸ ಯೋಜನೆಯನ್ನು ಪ್ರಾರಂಭಿಸುತ್ತಿದೆ. 

ಹೌದು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25 ರ ಹಣಕಾಸು ವರ್ಷದ ಸಾಮಾನ್ಯ ಬಜೆಟ್ ಅನ್ನು ಮಂಡಿಸಿ, ಎನ್‌ಪಿಎಸ್ ವಾತ್ಸಲ್ಯ ಯೋಜನೆಯನ್ನು ಪರಿಚಯಿಸುವುದಾಗಿ ಘೋಷಿಸಿದ್ದರು. ಇದೀಗ ಮಾತುಕೊಟ್ಟಂತೆ ಕಾರ್ಯಗತಗೊಳಿಸುವ ಮುಂದಾಗಿದ್ದಾರೆ. ಕೇಂದ್ರ ಹಣಕಾಸು ಸಚಿವರು NPS ವಾತ್ಸಲ್ಯ ಯೋಜನೆಯನ್ನು ನಾಳೆಯೇ (18 ಸೆಪ್ಟೆಂಬರ್ 2024 ರಂದು) ಬುಧವಾರ ಪ್ರಾರಂಭಿಸಲಿದ್ದಾರೆ. 

ಅಪ್ರಾಪ್ತ ಮಕ್ಕಳ ಭವಿಷ್ಯ ಭದ್ರ, ನಾಳೆಯಿಂದ ಶುರುವಾಗಲಿದೆ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ

ಯೋಜನೆಯ ಫಲಾನುಭವಿಯಾಗಲು ಸಚಿವರು ನಾಳೆಯೇ ಆನ್‌ಲೈನ್ ವ್ಯವಸ್ಥೆಗೂ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಯೋಜನೆಯ ಸಂಪೂರ್ಣ ವಿವರಗಳನ್ನು ಬಿಡುಗಡೆ ಮಾಡಲಿದ್ದಾರೆ. ಯೋಜನೆಯು ಅಪ್ರಾಪ್ತ (18 ವರ್ಷದೊಳಗಿನ) ಫಲಾನುಭವಿಗಳಿಗೆ ಶಾಶ್ವತ ನಿವೃತ್ತಿ ಖಾತೆ ಸಂಖ್ಯೆ ಅಥವಾ PRAN (Permanent Retirement Account Number) ಅನ್ನು ಸಹ ನೀಡಲಿದ್ದಾರೆ.

ನಾಳೆ ಬುಧವಾರ 75 ನಗರಗಳಲ್ಲಿ ಎನ್‌ಪಿಎಸ್ ವಾತ್ಸಲ್ಯ ಯೋಜನೆ ಉದ್ಘಾಟನಾ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಪ್ರಮುಖ ಕಾರ್ಯಕ್ರಮ ನವದೆಹಲಿಯಲ್ಲಿ ನಡೆಯಲಿದೆ. ಇತರೆ ಪ್ರದೇಶಗಳ ಜನರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಬಹುದಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!