
ನವದೆಹಲಿ(ಮಾ.18): ಬಳಕೆದಾರರ ಖಾಸಗಿತನ ನಿಯಮಾವಳಿಗಳ ಪರಿಷ್ಕರಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಿಕೊಳ್ಳುವಂತೆ ವಾಟ್ಸಾಪ್ ಸಂಸ್ಥೆಗೆ ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.
ಈ ಬಗ್ಗೆ ಬುಧವಾರ ಲೋಕಸಭೆ ಕಲಾಪದಲ್ಲಿ ಉತ್ತರಿಸಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಇಲಾಖೆಯ ರಾಜ್ಯ ಸಚಿವರ ಸಂಜಯ್ ಧೋತ್ರೆ, ‘ಭಾರತ ಸೇರಿದಂತೆ ಇನ್ನಿತರ ದೇಶಗಳಲ್ಲಿ ತನ್ನ ಬಳಕೆದಾರರ ಮಾಹಿತಿಗಳನ್ನು ತನ್ನ ಮಾಲಿಕತ್ವದ ಫೇಸ್ಬುಕ್ನೊಂದಿಗೆ ಹಂಚಿಕೊಳ್ಳಬೇಕೆಂಬ ವಾಟ್ಸಾಪ್ ಪ್ರಸ್ತಾವನೆಯನ್ನು ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಭಾರತೀಯರ ಹಿತಾಸಕ್ತಿ ರಕ್ಷಣೆಗಾಗಿ ಈ ಕುರಿತಾದ ಪ್ರಸ್ತಾವನೆ ಪರಿಶೀಲನೆ ಮತ್ತು ತನ್ನ ತೀರ್ಮಾನವು ನ್ಯಾಯಸಮ್ಮತವಾದದ್ದು ಎಂಬುದನ್ನು ವಿವರಿಸುವಂತೆ ವಾಟ್ಸಾಪ್ಗೆ ನಿರ್ದೇಶಿಸಲಾಗಿದೆ’ ಎಂದು ಹೇಳಿದ್ದಾರೆ.
ಫೇಸ್ಬುಕ್ನಲ್ಲಿ ನಕಲಿ ಖಾತೆ : ನಂಬಿಸಿ ಲಕ್ಷಾಂತರ ಹಣ ಪಡೆದು ಹಲವರ ವಂಚಿಸುತ್ತಿದ್ದ ಯುವತಿ ಬಂಧನ
ವಾಟ್ಸಾಪ್ ಬಳಕೆದಾರರ ಮಾಹಿತಿಗಳನ್ನು ತನ್ನ ಮಾಲಿಕತ್ವದ ಫೇಸ್ಬುಕ್ನೊಂದಿಗೆ ಹಂಚಿಕೊಳ್ಳಬೇಕೆಂಬ ನೂತನ ನಿಯಮಾವಳಿಗಳಿಗೆ ಮಾ.15ರ ಒಳಗಾಗಿ ಒಪ್ಪಿಕೊಳ್ಳಬೇಕು. ಇಲ್ಲದಿದ್ದರೆ, ವಾಟ್ಸಾಪ್ ಸೇವೆ ಲಭ್ಯವಿರುವುದಿಲ್ಲ ಎಂದು ವಾಟ್ಸಾಪ್ ಹೇಳಿತ್ತು. ಇದಕ್ಕೆ ಭಾರತ ಸೇರಿದಂತೆ ವಿಶ್ವಾದ್ಯಂತ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ