ಯಾವ ಪಕ್ಷಕ್ಕೆ ಯಾರು ದಾನಿ, ಈಗ ತಿಳಿಯಲು ಸಾಧ್ಯ: ಸುಪ್ರೀಂಗೆ ಎಸ್‌ಬಿಐ ಅಫಿಡವಿಟ್‌!

Published : Mar 22, 2024, 07:35 AM IST
ಯಾವ ಪಕ್ಷಕ್ಕೆ ಯಾರು ದಾನಿ, ಈಗ ತಿಳಿಯಲು ಸಾಧ್ಯ: ಸುಪ್ರೀಂಗೆ ಎಸ್‌ಬಿಐ ಅಫಿಡವಿಟ್‌!

ಸಾರಾಂಶ

ತನ್ನ ಬಳಿಯಿರುವ ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ಚುನಾವಣಾ ಆಯೋಗಕ್ಕೆ ಒದಗಿಸಿರುವುದಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗುರುವಾರ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.

ನವದೆಹಲಿ (ಮಾ.22): ತನ್ನ ಬಳಿಯಿರುವ ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ಚುನಾವಣಾ ಆಯೋಗಕ್ಕೆ ಒದಗಿಸಿರುವುದಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗುರುವಾರ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ. ಅದರ ಬೆನ್ನಲ್ಲೇ ಆಯೋಗವು ಈ ಮಾಹಿತಿಯನ್ನು ತನ್ನ ವೆಬ್‌ಸೈಟ್‌ಗೆ ಹಾಕಿದ್ದು, ಯಾರಿಂದ ಯಾವ ಪಕ್ಷಕ್ಕೆ ಎಷ್ಟು ಹಣ ಸಂದಾಯವಾಗಿದೆ ಎಂಬ ನೇರ ಮಾಹಿತಿ ಬಹಿರಂಗವಾಗಿದೆ. ಇತ್ತೀಚೆಗೆ ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, 'ಬಾಂಡ್ ಖರೀದಿದಾರರು ಹಾಗೂ ಪಕ್ಷಗಳಿಗೆ ಹರಿದುಬಂದ ದೇಣಿಗೆಯ ಮಾಹಿತಿಯನ್ನಷ್ಟೇ ನೀವು ನೀಡಿದ್ದೀರಿ. 

ನೇರವಾಗಿ ಯಾವ ಸಂಸ್ಥೆ/ ವ್ಯಕ್ತಿಯೊಬ್ಬನಿಂದ ಯಾವ ಪಕ್ಷ ಎಷ್ಟು ಹಣ ಪಡೆದಿದೆ ಎಂಬ ಮಾಹಿತಿ ಇಲ್ಲ. ಅದನ್ನೂ ನೀಡಬೇಕು' ಎಂದು ಆದೇಶಿಸಿತ್ತು. ಈ ಪ್ರಕಾರ, ಬಾಂಡ್ ಖರೀದಿಸಿದವರ ಹೆಸರು, ಅದರ ಮುಖಬೆಲೆ ಮತ್ತು ನಿರ್ದಿಷ್ಟ ಸಂಖ್ಯೆ, ಅದನ್ನು ಎನ್‌ಕ್ಯಾಶ್ ಮಾಡಿದ ಪಕ್ಷದ ಹೆಸರು, ರಿಡೀಮ್ ಮಾಡಿದ ರಾಜಕೀಯ ಪಕ್ಷಗಳ ಬ್ಯಾಂಕ್ ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕಿಗಳನ್ನು ತೋರಿಸುವ ಮಾಹಿತಿ ಹಾಗೂ ಎನ್‌ಕ್ಯಾಶ್ ಮಾಡಿದ ಬಾಂಡ್‌ನ ಮುಖಬೆಲೆ ಮತ್ತು ವಿಶಿಷ್ಟ ಸಂಖ್ಯೆಯನ್ನು ಗುರುವಾರ ಎಸ್‌ಬಿಐ, ಚುನಾವಣಾ ಆಯೋಗಕ್ಕೆ ನೀಡಿದೆ. 

ಹೀಗಂತ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಎಸ್‌ಬಿಐ ಅಧ್ಯಕ್ಷ ಬ್ಯಾಂಕ್‌ ಅಧ್ಯಕ್ಷ ದಿನೇಶಕುಮಾರ ಖಾರಾ ಮಾಹಿತಿ ನೀಡಿದ್ದಾರೆ. ಕೆವೈಸಿ, ಬ್ಯಾಂಕ್ ಖಾತೆ ಸಂಖ್ಯೆ ಬಹಿರಂಗವಿಲ್ಲ: ರಾಜಕೀಯ ಪಕ್ಷಗಳ ಸಂಪೂರ್ಣ ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಕೆವೈಸಿ ವಿವರಗಳನ್ನು ಸೈಬರ್ ಭದ್ರತೆಯ ಕಾರಣ ಸಂಪೂರ್ಣ ಸಾರ್ವಜನಿಕ ಮಾಡಿಲ್ಲ. ಆದರೆ ರಾಜಕೀಯ ಪಕ್ಷಗಳು ಯಾವವ್ಯಕ್ತಿಯಿಂದ ಎಷ್ಟು ಹಣಪಡೆದವು ಎಂಬ ಮಾಹಿತಿ ಪಡೆಯಲು ಇವು ಅಗತ್ಯವಲ್ಲ ಎಂದು ಎಸ್‌ಬಿಐ ಸ್ಪಷ್ಟಪಡಿಸಿದೆ. 

ಒಂದು ದೇಶ, ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಬಿಜೆಪಿ ಪ್ರಣಾಳಿಕೆ ಭಾಗ?

ಫೆ.15ರಂದು ನೀಡಿದ ಮಹತ್ವದ ತೀರ್ಪಿನಲ್ಲಿ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಅನಾಮಧೇಯ ರಾಜಕೀಯ ನಿಧಿಯನ್ನು ಅನುಮತಿಸುವ ಕೇಂದ್ರದ ವಿವಾದಾತ್ಮಕ ಚುನಾವಣಾ ಬಾಂಡ್‌ಗಳ ಯೋಜನೆಯನ್ನು 'ಅಸಾವಿಧಾನಿಕ' ಎಂದು ಟೀಕಿಸಿ ರದ್ದುಗೊಳಿಸಿತ್ತು. ದಾನಿಗಳು ನೀಡಿದ ಮೊತ್ತ ಹಾಗೂ ಪಕ್ಷಗಳು ಗಳಿಸಿದ ಬಾಂಡ್ ಆದಾಯವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು ಎಂದು ಎಸ್‌ಬಿಐಗೆ ಆದೇಶಿಸಿತ್ತು. ಎಸ್‌ಬಿಐನಿಂದ ಪಡೆದ ಮಾಹಿತಿಯನ್ನು ವೆಬ್‌ಸೈಟ್‌ಗೆ ಹಾಕಬೇಕು ಎಂದು ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ