'ಕೊರೋನಾ ಸ್ಫೋಟಕ್ಕೆ ವಲಸೆ ಕಾರ್ಮಿಕರೇ ಕಾರಣ'

Published : Apr 07, 2021, 08:16 AM IST
'ಕೊರೋನಾ ಸ್ಫೋಟಕ್ಕೆ ವಲಸೆ ಕಾರ್ಮಿಕರೇ ಕಾರಣ'

ಸಾರಾಂಶ

ವಲಸಿಗ ಕಾರ್ಮಿಕರ ವಿರುದ್ಧ ಸದಾ ಕಿಡಿಕಾರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್‌ ಠಾಕ್ರೆ| 'ಕೊರೋನಾ ಸ್ಫೋಟಕ್ಕೆ ವಲಸೆ ಕಾರ್ಮಿಕರೇ ಕಾರಣ'

ಮುಂಬೈ(ಏ.07): ವಲಸಿಗ ಕಾರ್ಮಿಕರ ವಿರುದ್ಧ ಸದಾ ಕಿಡಿಕಾರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್‌ ಠಾಕ್ರೆ, ಇದೀಗ ಮಹಾರಾಷ್ಟ್ರದಲ್ಲಿ ಸೋಂಕು ಸ್ಫೋಟಕ್ಕೂ ವಲಸಿಗ ಕಾರ್ಮಿಕರೇ ಕಾರಣ ಎಂದು ದೂರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರ ಪ್ರಮುಖ ಕೈಗಾರಿಕೆಗಳನ್ನು ಹೊಂದಿರುವ ರಾಜ್ಯವಾಗಿರುವುದರಿಂದ ದೊಡ್ಡ ಪ್ರಮಾಣದಲ್ಲಿ ಬೇರೆ ರಾಜ್ಯಗಳ ವಲಸೆ ಕಾರ್ಮಿರನ್ನು ಆಕರ್ಷಿಸುತ್ತದೆ. ಆದರೆ ಈ ಕಾರ್ಮಿಕರು ಬರುವ ರಾಜ್ಯಗಳಲ್ಲಿ ಸರಿಯಾಗಿ ಕೊರೋನಾ ಪರೀಕ್ಷೆ ನಡೆಸುತ್ತಿಲ್ಲ.

ಕಳೆದ ವರ್ಷ ಲಾಕ್ಡೌನ್‌ನಲ್ಲಿ ತವರು ರಾಜ್ಯಗಳಿಗೆ ಹೊರಟ ವಲಸೆ ಕಾರ್ಮಿಕರ ಕೊರೋನಾ ಟೆಸ್ಟ್‌ ಮಾಡಬೇಕೆಂದು ಸಲಹೆ ನೀಡಿದ್ದೆ. ಆದರೆ ಅದು ನಡೆಯಲಿಲ್ಲ’ ಎಂದು ಹೇಳಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ