ಭಾರತದಲ್ಲಿ 4.8 ಲಕ್ಷ ಅಲ್ಲ, 47 ಲಕ್ಷ ಕೋವಿಡ್‌ ಸಾವು: ಶಾಕ್ ಕೊಟ್ಟ WHO ವರದಿ

Published : May 06, 2022, 04:42 AM IST
ಭಾರತದಲ್ಲಿ 4.8 ಲಕ್ಷ ಅಲ್ಲ, 47 ಲಕ್ಷ ಕೋವಿಡ್‌ ಸಾವು: ಶಾಕ್ ಕೊಟ್ಟ WHO ವರದಿ

ಸಾರಾಂಶ

* ವಿಶ್ವಾದ್ಯಂತ 60 ಲಕ್ಷ ಅಲ್ಲ, 1.5 ಕೋಟಿ ಬಲಿ * ಭಾರತದಲ್ಲಿ 4.8 ಲಕ್ಷ ಅಲ್ಲ, 47 ಲಕ್ಷ ಕೋವಿಡ್‌ ಸಾವು * 2020-21ರ ಸಾವಿನ ಬಗ್ಗೆ ಡಬ್ಲ್ಯುಎಚ್‌ಒ ವರದಿ

ನವದೆಹಲಿ(ಮೇ.06) ‘ಭಾರತದಲ್ಲಿ 2020ರ ಜನರಿಯಿಂದ ಡಿಸೆಂಬರ್‌ 2021ರ 2 ವರ್ಷದ ಅವಧಿಯಲ್ಲಿ ಕೋವಿಡ್‌ನಿಂದ ಬಲಿಯಾದವರು ಸರ್ಕಾರ ಹೇಳಿದಂತೆ 4.8 ಲಕ್ಷ ಅಲ್ಲ, 47 ಲಕ್ಷ’ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ಹೇಳಿದೆ. ಡಬ್ಲ್ಯುಎಚ್‌ಒ ವರದಿಯನ್ನು ಗಮನಿಸಿದಾಗ ಅಧಿಕೃತ ಸಾವಿನ ಅಂಕಿ-ಅಂಶಗಳಿಗಿಂತ 10 ಪಟ್ಟು ಹೆಚ್ಚು ಕೋವಿಡ್‌ ಸಂಬಂಧಿ ಸಾವು ಸಂಭವಿಸುರುವುದು ಕಂಡುಬರುತ್ತದೆ.

ಇನ್ನು ಇದೇ ಅವಧಿಯಲ್ಲಿ ವಿಶ್ವದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 60 ಲಕ್ಷ ಅಲ್ಲ. 1.5 ಕೋಟಿ ಎಂದೂ ಅದು ತಿಳಿಸಿದೆ. ಅತಿ ಹೆಚ್ಚು ಸಾವು ಸಂಭವಿಸಿದ್ದು ಆಗ್ನೇಯ ಏಷ್ಯಾ, ಯುರೋಪ್‌ ಹಾಗೂ ಅಮೆರಿಕದಲ್ಲಿ ಎಂದು ಅದು ತಿಳಿಸಿದೆ.

ಯಾವ ಮಾನದಂಡ?:

ಆರೋಗ್ಯ ಸಂಸ್ಥೆಯ ಸಾವಿನ ವರದಿಯು ಬರೀ ಕೋವಿಡ್‌ನಿಂದ ನೇರವಾಗಿ ಸಂಭವಿಸಿದ ಸಾವುಗಳಷ್ಟೇ ಅಲ್ಲದೆ, ಕೋವಿಡ್‌ನಿಂದ ಆರೋಗ್ಯ ವ್ಯವಸ್ಥೆಯಲ್ಲಾದ ಹಾಗೂ ಸಮಾಜದಲ್ಲಿ ಆದ ಏರುಪೇರಿನಿಂದ ಆದ ಸಾವಿನ ಸಂಖ್ಯೆಯನ್ನೂ ಒಳಗೊಂಡಿದೆ. ಇದೇ ಆಧಾರದಲ್ಲಿ ಅಧ್ಯಯನ ನಡಸಲಾಗಿದೆ.

ಡಬ್ಲ್ಯುಎಚ್‌ಒ ವರದಿ ಪ್ರಶ್ನಾರ್ಹ: ಭಾರತ

ನವದೆಹಲಿ: ‘ವಿಶ್ವ ಆರೋಗ್ಯ ಸಂಸ್ಥೆಯು ಭಾರತದಲ್ಲಿ 2020-21ರ ಅವಧಿಯಲ್ಲಿ 47 ಲಕ್ಷ ಸಾವು ಸಂಭವಿಸಿವೆ ಎಂದು ನೀಡಿದ ವರದಿ ಪ್ರಶ್ನಾರ್ಹ. ಅವರ ಅಧ್ಯಯನ ವಿಧಾನವೇ ಸರಿಯಿಲ್ಲ. ಭಾರತದ ಅಭಿಪ್ರಾಯವನ್ನು ಹಾಗೂ ಪರಿಸ್ಥಿತಿಯನ್ನು ಅವಲೋಕಿಸದೇ ಹೆಚ್ಚು ಸಾವು ಸಂಭವಿಸಿದೆ ಎಂಬ ವರದಿ ಬಿಡುಗಡೆ ಮಾಡಿದೆ’ ಎಂದು ಭಾರತದ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.

‘ವೈಜ್ಞಾನಿಕ ತಳಹದಿಯಿಲ್ಲದ ಪ್ರಶ್ನಾರ್ಹ ಅಧ್ಯಯನ ವಿಧಾನವನ್ನು ಆರೋಗ್ಯ ಸಂಸ್ಥೆ ಅನುಸರಿಸಿದೆ. ಕೆಲವು ಮಾಧ್ಯಮ ವರದಿಗಳು ಹಾಗೂ ತನ್ನದೇ ಆದ ಗಣಿತ ಮಾದರಿಯನ್ನು ಅನುಸರಿಸಿ ಅದು ಅಧ್ಯಯನ ನಡೆಸಿದೆ’ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..