ಕೇರಳ ದುರಂತದಲ್ಲಿ ಸಾವಿಗೀಡಾಗಿದ್ದ ಪೈಲಟ್‌ ಪತ್ನಿಗೆ ಗಂಡು ಮಗು!

Published : Sep 07, 2020, 03:00 PM IST
ಕೇರಳ ದುರಂತದಲ್ಲಿ ಸಾವಿಗೀಡಾಗಿದ್ದ ಪೈಲಟ್‌ ಪತ್ನಿಗೆ ಗಂಡು ಮಗು!

ಸಾರಾಂಶ

ಕೇರಳದ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಾವಿಗೀಡಾದ ಸಹ ವಿಮಾನದ ಸಹ ಪೈಲಟ್‌ | ಉತ್ತರ ಪ್ರದೇಶ ಮೂಲದ ಅಖಿಲೇಶ್‌ ಶರ್ಮಾ ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ

ಮಥುರಾ(ಸೆ.07): ಕೇರಳದ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಾವಿಗೀಡಾದ ಸಹ ವಿಮಾನದ ಸಹ ಪೈಲಟ್‌ ಉತ್ತರ ಪ್ರದೇಶ ಮೂಲದ ಅಖಿಲೇಶ್‌ ಶರ್ಮಾ ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತನ್ಮೂಲಕ ಅಖಿಲೇಶ್‌ ಅವರ ಅಗಲಿಕೆಯಿಂದ ದುಃಖದ ಮಡುವಿನಲ್ಲಿ ಸಿಲುಕಿದ್ದ ಕುಟುಂಬಕ್ಕೀಗ ಗಂಡು ಮಗುವಿನ ಜನನವು ಕೊಂಚ ಖುಷಿ ತರಿಸಿದೆ.

ಗಂಡು ಮಗುವಿಗೆ ಜನ್ಮ ನೀಡಿದ ಅಖಿಲೇಶ್‌ ಅವರ ಪತ್ನಿ ಮೇಘಾ ಹಾಗೂ ನವಜಾತ ಶಿಶು ಆರೋಗ್ಯವಾಗಿದ್ದು, ಆಸ್ಪತ್ರೆಯಲ್ಲೇ ನಿಗಾವಣೆಯಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಆ.7ರಂದು ದುಬೈನಿಂದ 190 ಪ್ರಯಾಣಿಕರ ಹೊತ್ತು ತಂದಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಪತನಗೊಂಡು, ಎರಡು ಹೋಳಾಗಿತ್ತು. ಈ ದುರ್ಘಟನೆಯಲ್ಲಿ ಈ ವಿಮಾನದ ಪೈಲಟ್‌ಗಳಾದ ದೀಪಕ್‌ ಸಾಠೆ ಹಾಗೂ ಅಖಿಲೇಶ್‌ ಸೇರಿದಂತೆ 21 ಮಂದಿ ಸಾವಿಗೀಡಾಗಿದ್ದರು.

ಮೊದಲ ವಂದೇಭಾರತ್‌ ವಿಮಾನ ಇಳಿಸಿದವರು ಅಖಿಲೇಶ್‌

ಕೊರೋನಾ ಲಾಕ್‌ಡೌನ್‌ ವೇಳೆ ದುಬೈನಲ್ಲಿ ಸಿಲುಕಿದ್ದ ಹಲವು ಭಾರತೀಯರನ್ನು ವಂದೇ ಭಾರತ್‌ ಯೋಜನೆಯಡಿ ಮೇ 8ರಂದು ಕೇರಳದ ಇದೇ ಕಲ್ಲಿಕೋಟಿ ವಿಮಾನ ನಿಲ್ದಾಣಕ್ಕೆ ತಲುಪಿಸಿದ್ದ ಪೈಲಟ್‌ಗಳ ತಂಡದಲ್ಲಿ ಅಖಿಲೇಶ್‌ ಕುಮಾರ್‌ ಸಹ ಒಬ್ಬರಾಗಿದ್ದರು. 

ವಿಮಾನ ತುಂಡಾದ ಕೂಡಲೇ ಎಲ್ಲರ ಆಕ್ರಂದನ!

ಆ ವೇಳೆ, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿ ಹಾಗೂ ಪ್ರಯಾಣಿಕರು ಇವರನ್ನು ಸುತ್ತುವರಿದು ಚಪ್ಪಾಳೆ ತಟ್ಟುವ ಮೂಲಕ ಗೌರವದ ಸ್ವಾಗತ ನೀಡಿದ್ದರು. ಆದರೆ, ಇದೀಗ ವಿಮಾನ ದುರಂತದಲ್ಲಿ ಮಡಿದ ಅಖಿಲೇಶ್‌ ಸೇರಿ 18 ಮಂದಿಗಾಗಿ ಇಡೀ ದೇಶವೇ ದುಃಖತಪ್ತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ
Holi Special Trains: ಹೋಳಿ ಹಬ್ಬಕ್ಕೆ ಊರಿಗೆ ಹೋಗ್ತೀರಾ? ರೈಲ್ವೆ ಇಲಾಖೆಯಿಂದ ಭರ್ಜರಿ ವ್ಯವಸ್ಥೆ, ಇಲ್ಲಿದೆ ಡೀಟೇಲ್ಸ್