
ಜೈಪುರ(ಮಾ.30): ರಾಜಸ್ಥಾನದ ಅಳ್ವರ್ನಲ್ಲಿರುವ ಸಾರಿಸ್ಕಾ ಹುಲಿ ರಕ್ಷಿತಾರಣ್ಯ ಭಾರಿ ಪ್ರಮಾಣದ ಕಾಡ್ಗಿಚ್ಚಿಗೆ ತುತ್ತಾಗಿದೆ. ಸೋಮವಾರ ಸಾಯಂಕಾಲ ಕಾಣಿಸಿಕೊಂಡ ಬೆಂಕಿ ಸುಮಾರು 10 ಚದರ ಕಿ.ಮೀ ಅರಣ್ಯವನ್ನು (ಸುಮಾರು 1800 ಫುಟ್ಬಾಲ್ ಮೈದಾನದ ವ್ಯಾಪ್ತಿಯ ಪ್ರದೇಶ) ವ್ಯಾಪಿಸಿದೆ. ಈ ಬೆಂಕಿ ನಂದಿಸಲು ಐಎಎಫ್ನ 2 ಹೆಲಿಕಾಪ್ಟರ್ಗಳು ಸತತ ಪ್ರಯತ್ನ ನಡೆಸುತ್ತಿವೆ.
ಈ ರಕ್ಷಿತಾರಣ್ಯದಲ್ಲಿ ಸುಮಾರು 20 ಹೆಚ್ಚು ಹುಲಿಗಳು ವಾಸ ಮಾಡುತ್ತಿವೆ ಎಂದು ಅಂದಾಜಿಸಲಾಗಿದೆ. ಬೆಂಕಿಯಿಂದಾಗಿ ಎಲ್ಲೆಡೆ ಹೊಗೆ ಆವರಿಸಿರುವುದರಿಂದ ಇದು ಹುಲಿಗಳ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಬೃಹತ್ತಾಗಿ ಹಬ್ಬಿರುವ ಬೆಂಕಿಯನ್ನು ನಂದಿಸಲು ವಾಯುಪಡೆಯ 2 ಎಂ.ಐ-17 ಹೆಲಿಕಾಪ್ಟರ್ಗಳು 43 ಕಿ.ಮೀ ದೂರದಲ್ಲಿರುವ ಸಿಲಿಸೇರ್ ಜಲಾಶಯದಿಂದ ನೀರನ್ನು ಹೊತ್ತು ತಂದು ಸುರಿಯುತ್ತಿವೆ. ಅರಣ್ಯದ ಅಕ್ಕಪಕ್ಕದಲ್ಲಿ ವಾಸಿಸುತ್ತಿರುವ ಜನರಿಗೆ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಸೂಚಿಸಲಾಗಿದೆ.
ಸೋಮವಾರ ಸಾಯಂಕಾಲ ಅರಣ್ಯಕ್ಕೆ ಬೆಂಕಿ ಬಿದ್ದಿರುವುದನ್ನು ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ಗಾಳಿ ಬೀಸುತ್ತಿದ್ದ ಕಾರಣ ಬೆಂಕಿ ವೇಗವಾಗಿ ಹರಡಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ