
ಚೆನ್ನೈ(ಮಾ.20): ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದರೆ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ) ನಲ್ಲಿ ಕಾಪಿ ಹೊಡೆಯಲು ಅವಕಾಶ ಮಾಡಿಕೊಡುವುದಾಗಿ ಮಾಜಿ ಸಚಿವ ಕೆ.ಎನ್.ನೆಹರೂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತಿರುಚಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಭಾಷಣ ಮಾಡುತ್ತಿದ್ದ ಅವರು, ‘ಬಿಹಾರ ಮತ್ತು ಮಧ್ಯಪ್ರದೇಶದ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ವೇಳೆ ಕಾಪಿ ಹೊಡೆಯುತ್ತಾರೆ. ಅಲ್ಲಿ ಅದಕ್ಕೆ ಅವಕಾಶ ಇದೆ. ಹಾಗಿದ್ದಾಗ ತಮಿಳುನಾಡು ವಿದ್ಯಾರ್ಥಿಗಳು ಮಾತ್ರ ಏಕೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆಯಬೇಕು.
ರಾಜ್ಯದಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದರೆ ಇಲ್ಲಿನ ವೈದ್ಯ ವಿದ್ಯಾರ್ಥಿಗಳಿಗೂ ಕಾಪಿ ಹೊಡೆಯಲು ಅವಕಾಶ ಮಾಡಿಕೊಡುತ್ತೇವೆ’ ಎಂದು ಹೇಳಿದ್ದಾರೆ. ಇದೀಗ ವಿವಾದಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ