ಕೊರೋನಾ ಲಸಿಕೆ ವಿತರಣೆ ಜತೆಗೆ ಮತ್ತೊಂದು ದೊಡ್ಡ ಕೆಲಸಕ್ಕೆ ಕೈ ಹಾಕಿದ ಕೇಂದ್ರ!

Published : Dec 21, 2020, 04:05 PM IST
ಕೊರೋನಾ ಲಸಿಕೆ ವಿತರಣೆ ಜತೆಗೆ ಮತ್ತೊಂದು ದೊಡ್ಡ ಕೆಲಸಕ್ಕೆ ಕೈ ಹಾಕಿದ ಕೇಂದ್ರ!

ಸಾರಾಂಶ

ಕೊರೋನಾ ಲಸಿಕೆ ವಿತರಣೆ ಜತೆಗೆ ಸಿಎಎ ಕಾನೂನು ರಚನೆ ಮತ್ತು ಅನುಷ್ಠಾನ/ ಕೇಂದ್ರ ಗೃಹ ಸಚಿವ ಅಮಿತ್  ಶಾ ಹೇಳಿಕೆ/ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ವಾಗ್ದಾಳಿ / ಕೊರೋನಾ ಪರಿಸ್ಥಿತಿ ನಿಯಂತ್ರಣಕ್ಕೆ ತಂದ ನಂತರ ಕೆಲಸ

ನವದೆಹಲಿ(ಡಿ.  21)   ಸಿಎಎಗೆ (ಪೌರತ್ವ ತಿದ್ದುಪಡಿ) ಸಂಬಂಧಿಸಿದ ರೀತಿ ರಿವಾಜು ಮತ್ತು ಕಾನೂನುಗಳ ತಿದ್ದುಪಡಿಗೆ ಕೊರೋನಾ ಪರಿಸ್ಥಿತಿ ಸುಧಾರಣೆಯಾದ ನಂತರದಲ್ಲಿ ಚಾಲನೆ ನೀಡಲಾಗುವುದು  ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕೊರೋನಾ ಕಾರಣಕ್ಕೆ ರೂಲ್ಸ್ ಸಿದ್ಧಮಾಡಲು ಸಾಧ್ಯವಾಗಿಲ್ಲ. 'ಕೊರೋನಾ ಲಸಿಕೆ ವಿತರಣೆ ಒಂದು ಕಡೆ ಆರಂಭವಾದ ತಕ್ಷಣ ಇನ್ನೊಂದು ಕಡೆ ಸಿಎಎಗೆ ಸಂಬಂಧಿಸಿದ ಕಾನೂನುಗಳ ರೂಪುರೇಷೆ ಸಿದ್ಧತೆಯನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಮಮತಾಗೆ ಸದ್ದಿಲ್ಲದೆ ಅಮಿತ್ ಶಾ ಶಾಕ್

ಪಶ್ಚಿಮ ಬಂಗಾಳದ ಬೋಲ್ ಪುರದಲ್ಲಿ ಮಾತನಾಡಿದ ಕೇಂದ್ರ ಸಚಿವರು,  ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಮಮತಾ ಸರ್ಕಾರ ಒಳನುಸುಳುವಿಕೆ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದ್ದು ಬಿಜೆಪಿಯಿಂದ ಮಾತ್ರ ಅದಕ್ಕೆ ಬ್ರೇಕ್ ಹಾಕಲು ಸಾಧ್ಯ ಎಂದು ಹೇಳಿದರು.

ಅಸ್ಸಾಂನಂತೆ ಪಶ್ಚಿಮ ಬಂಗಾಳದಲ್ಲಿಯೂ  ಎನ್‌ಆರ್‌ಸಿ  ಮತ್ತು ಸಿಎಎ ಅನುಷ್ಠಾನದ ಬಗ್ಗೆ ಕೇಂದ್ರ ಸರ್ಕಾರ ಆಲೋಚನೆ ಮಾಡಿದೆ ಎಂದುಬಿಜೆಪಿ ನಾಯಕ ಕೈಲಾಶ್ ವಿಜಯ್ ವರ್ಗೀಯ ಹೇಳಿದ್ದರು.

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು  ಬಿಜೆಪಿ ತಳಮಟ್ಟದಿಂದ ಪಕ್ಷ ಸಂಘಟನೆ  ಮಾಡಿಕೊಳ್ಳುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Viral Video: ಶಾಲಾ ಸಮವಸ್ತ್ರದಲ್ಲಿಯೇ ನದಿಗೆ ಹಾರಿದ ಬಾಲಕಿ- ಬೆಚ್ಚಿಬೀಳೋ ವಿಡಿಯೋ ವೈರಲ್​
ಭಾರತೀಯ ರೈಲ್ವೆ ಇಲಾಖೆಯ ಭರ್ಜರಿ ಉದ್ಯೋಗ, ಬರೋಬ್ಬರಿ 22,000 ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ