ರಾಮಮಂದಿರ ದೇಣಿಗೆ ಸ್ವೀಕಾರಕ್ಕೆ ಧರ್ಮ ನೋಡಲ್ಲ: ಪೇಜಾವರ ಶ್ರೀ

Published : Jul 27, 2020, 07:50 AM ISTUpdated : Jul 27, 2020, 10:28 AM IST
ರಾಮಮಂದಿರ ದೇಣಿಗೆ ಸ್ವೀಕಾರಕ್ಕೆ ಧರ್ಮ ನೋಡಲ್ಲ: ಪೇಜಾವರ ಶ್ರೀ

ಸಾರಾಂಶ

ರಾಮಮಂದಿರ ದೇಣಿಗೆ ಸ್ವೀಕಾರಕ್ಕೆ ಧರ್ಮ ನೋಡಲ್ಲ| ರಾಮ ಭಕ್ತಿ ಇರುವ ಯಾರು ಕೊಟ್ಟರೂ ಸ್ವೀಕಾರ: ಪೇಜಾವರ ಶ್ರೀ

ಬೆಂಗಳೂರು(ಜು.27): ‘ಹಿಂದೂಗಳಷ್ಟೇ ಅಲ್ಲ, ರಾಮಮಂದಿರ ನಿರ್ಮಾಣಕ್ಕೆ ಯಾವುದೇ ಸಮುದಾಯದವರು ದೇಣಿಗೆ ನೀಡಿದರೂ ಸ್ವೀಕರಿಸಲಾಗುವುದು’ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸದಸ್ಯರೂ ಆದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ ಸಿದ್ಧಗಂಗಾ ಮಠದ ಮಣ್ಣು..!

ಭಾನುವಾರ ಪಿಟಿಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು ಈ ವಿಷಯ ಸ್ಪಷ್ಟಪಡಿಸಿದರು. ‘ರಾಮಮಂದಿರಕ್ಕೆ ಎಲ್ಲ ಧರ್ಮಗಳ ದೇಣಿಗೆಯನ್ನೂ ಸ್ವೀಕರಿಸಲಾಗುತ್ತದೆಯೇ’ ಎಂದು ಸಂದರ್ಶಕರು ಪ್ರಶ್ನಿಸಿದಾಗ, ‘ರಾಮನಲ್ಲಿ ಯಾರಿಗೆ ಭಕ್ತಿ ಹಾಗೂ ನಂಬಿಕೆ ಇದೆಯೋ, ಅವರು ನೀಡುವ ದೇಣಿಗೆಯನ್ನು ಸ್ವೀಕರಿಸಲಾಗುವುದು. ಇಂಥದ್ದೇ ಧರ್ಮದಿಂದ ಸ್ವೀಕರಿಸಲಾಗುವುದು, ಇಂಥ ಧರ್ಮದಿಂದ ಸ್ವೀಕರಿಸುವುದಿಲ್ಲ ಎಂಬ ನಿಯಮವೇನೂ ಇಲ್ಲ’ ಎಂದು ಪ್ರತಿಕ್ರಿಯಿಸಿದರು.

‘ಮಂದಿರ ನಿರ್ಮಾಣಕ್ಕಾಗಿ ತಲಾ ವ್ಯಕ್ತಿಯಿಂದ 10 ರು. ಹಾಗೂ ಮನೆಯೊಂದರಿಂದ 100 ರು. ದೇಣಿಗೆ ಸ್ವೀಕರಿಸುವ ಸಲಹೆ ಬಂದಿದೆ. ಇದೊಂದು ಸಲಹೆ ಮಾತ್ರ. ಇದು ತೆರಿಗೆ ಅಲ್ಲ. 1 ಕೋಟಿ ರು. ಕೊಟ್ಟರೂ ಟ್ರಸ್ಟ್‌ ಸ್ವೀಕರಿಸಲಿದೆ. 1 ರು. ನೀಡಿದರೂ ಸ್ವೀಕರಿಸುತ್ತದೆ. ಮಂದಿರ ನಿರ್ಮಾಣದಲ್ಲಿ ಯಾರು ಭಾಗಿಯಾಗಲು ಬಯಸುವರೋ ಅವರಿಗೆ ಒಂದು ಅವಕಾಶವಿದು’ ಎಂದು ಶ್ರೀಗಳು ನುಡಿದರು.

12.30ಕ್ಕೆ ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ ರಾಮ ಮಂದಿರದ ಭೂಮಿ ಪೂಜೆ!

‘ಕಾರ್ಪೋರೆಟ್‌ ಸಾಮಾಜಿಕ ಸಹಭಾಗಿತ್ವದ ಅಡಿಯೂ ದೇಣಿಗೆ ಸಂಗ್ರಹಿಸುವ ಇರಾದೆ ಟ್ರಸ್ಟ್‌ಗೆ ಇದೆ. ಮಂದಿರ ನಿರ್ಮಾಣಕ್ಕೆ 300 ಕೋಟಿ ರು. ಹಾಗೂ ಸುತ್ತಲಿನ ಸ್ಥಳದ ಅಭಿವೃದ್ಧಿಗೆ 1000 ಕೋಟಿ ರು.ಬೇಕಾಗಬಹುದು. ದೇಣಿಗೆ ಸಂಗ್ರಹಕ್ಕೆ 1 ತಿಂಗಳ ಅಭಿಯಾನ ನವೆಂಬರ್‌ 25ರ ಸುಮಾರಿಗೆ ನಡೆಯುವ ಸಾಧ್ಯತೆ ಇದೆ’ ಎಂದು ಅವರು ಮಾಹಿತಿ ನೀಡಿದರು.

ಮಂದಿರ ನಿರ್ಮಾಣಕ್ಕೆ ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಭೂಮಿಪೂಜೆ ನೆರವೇರಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!