
ಚಂಡೀಗಢ(ಸೆ.10): ರೈತರ ಮೇಲೆ ಲಾಠಿ ಪ್ರಹಾರಕ್ಕೆ ಆದೇಶಿಸಿದ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ನಡುವೆಯೇ, ಕರ್ನಾಲ್ ಜಿಲ್ಲೆಯಲ್ಲಿ ನಡೆದ ಎಲ್ಲಾ ಘಟನಾವಳಿಗಳ ಬಗ್ಗೆ ತನಿಖೆ ಕೈಗೊಳ್ಳಲಾಗುತ್ತದೆ ಎಂದು ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ತಿಳಿಸಿದ್ದಾರೆ.
ಈ ಬಗ್ಗೆ ಗುರುವಾರ ಮಾತನಾಡಿದ ಅವರು, ‘ತನಿಖೆ ನಡೆಸದೆಯೇ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗದು. ಹೀಗಾಗಿ ಕೇವಲ ಅಧಿಕಾರಿ ಆಯುಷ್ ಸಿನ್ಹಾ ವಿರುದ್ಧವಷ್ಟೇ ಅಲ್ಲದೆ, ಈ ಇಡೀ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತದೆ. ಈ ವೇಳೆ ರೈತ ಮುಖಂಡರು ತಪ್ಪಿತಸ್ಥರು ಎಂಬುದು ಕಂಡುಬಂದಲ್ಲಿ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮಿನಿ ವಿಧಾನಸೌಧದ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೂ ಎಚ್ಚರಿಕೆ ನೀಡಿದ್ದಾರೆ.
ಆಗಸ್ಟ್ 28ರಂದು ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಲಾಠಿ ಪ್ರಹಾರದ ವೇಳೆ ರೈತನೋರ್ವ ಬಲಿಯಾಗಿದ್ದ. ಜೊತೆಗೆ ಐಎಎಸ್ ಅಧಿಕಾರಿ ಹದ್ದು ಮೀರಿ ವರ್ತಿಸುವ ರೈತರ ತಲೆ ಒಡೆಯಿರಿ ಎಂದು ಹೇಳಿದಂತಿದ್ದ ವಿಡಿಯೋ ವೈರಲ್ ಆಗಿತ್ತು. ಆ ಬಳಿಕ ಆ ಅಧಿಕಾರಿಯನ್ನು ಮತ್ತೊಂದು ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಆದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ರೈತರ ಆಗ್ರಹ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ