
ನವದೆಹಲಿ(ಸೆ.14): ದೇಶದಲ್ಲಿ ದಿನಕ್ಕೆ ಸರಾಸರಿ 90 ಸಾವಿರಕ್ಕಿಂತ ಹೆಚ್ಚು ಕೊರೋನಾ ಪ್ರಕರಣ ಸಂಖ್ಯೆ ದಾಖಲಾಗುತ್ತಿರುವ ಬೆನ್ನಲ್ಲೇ, ಈ ವ್ಯಾಧಿಯ ನಿಗ್ರಹಕ್ಕೆ 2021ರ ಮೊದಲ ತ್ರೈಮಾಸಿಕ ಅವಧಿಯ ಒಳಗಾಗಿ ದೇಶೀ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭರವಸೆ ನೀಡಿದ್ದಾರೆ.
ಅಲ್ಲದೆ, ಹೊಸ ಆವಿಷ್ಕಾರದ ಲಸಿಕೆಯ ಸುರಕ್ಷತೆ ಬಗ್ಗೆ ಜನರಲ್ಲಿನ ಭೀತಿ ನಿವಾರಣೆಗಾಗಿ ಆ ಲಸಿಕೆಯನ್ನು ಮೊದಲೇ ತಾವೇ ಸ್ವೀಕರಿಸುವುದು ಹರ್ಷದಾಯಕ ಸಂಗತಿಯಾಗಿದೆ ಎಂದಿದ್ದಾರೆ. ಸಾಮಾಜಿಕ ಜಾಲತಾಣದ ವೇದಿಕೆಯಲ್ಲಿ ಭಾನುವಾರ ನಡೆದ ‘ಜನ ಸಂವಾದ’ ಕಾರ್ಯಕ್ರಮದಲ್ಲಿ ಕೊರೋನಾ ಹಾಗೂ ಲಸಿಕೆಗೆ ಸಂಬಂಧಿಸಿದಂತೆ ಜನರು ಕೇಳಿದ ಹಲವು ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.
ಈ ವೇಳೆ ಭಾರತ ಸಿದ್ಧಪಡಿಸಿ ಪ್ರಯೋಗದ ಹಂತದಲ್ಲಿರುವ ಔಷಧಿಯ ಬಿಡುಗಡೆಗೆ ನಿರ್ದಿಷ್ಟದಿನಾಂಕ ಗುರಿಪಡಿಸಲಾಗಿಲ್ಲ. ಆದರೆ, 2021ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಈ ಕೊರೋನಾ ಲಸಿಕೆಯು ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ. ಜೊತೆಗೆ, ಮೊದಲ ಹಂತದಲ್ಲಿ ಕೊರೋನಾದಿಂದ ಬಡವರು ಮತ್ತು ಶ್ರೀಮಂತರು ಎಂಬ ಯಾವುದೇ ಬೇಧವಿಲ್ಲದೆ ತೀವ್ರವಾಗಿ ಜರ್ಜರಿತರಾದವರಿಗೆ ಈ ಲಸಿಕೆ ಬಳಕೆಯಾಗುವಂತೆ ನೋಡಿಕೊಳ್ಳಲಾಗುತ್ತದೆ. ಈ ಪ್ರಕಾರ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಹಿರಿಯ ನಾಗರಿಕರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ