ಮೋದಿ ಕನಸು ಈಡೇರಿಸಲು ನಾನು ಬದ್ಧ: ರೈತರಿಗೆ ಸಾಲದಿಂದ ಮುಕ್ತಿ ಕೊಡಿಸಲು ಯತ್ನ

Suvarna News   | Asianet News
Published : Jul 09, 2021, 09:47 AM ISTUpdated : Jul 09, 2021, 10:57 AM IST
ಮೋದಿ ಕನಸು ಈಡೇರಿಸಲು ನಾನು ಬದ್ಧ: ರೈತರಿಗೆ ಸಾಲದಿಂದ ಮುಕ್ತಿ ಕೊಡಿಸಲು ಯತ್ನ

ಸಾರಾಂಶ

ಕೇಂದ್ರ ಸಚಿವೆಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆಯಾಗಿ ಅಧಿಕಾರ ಸ್ವೀಕಾರ ರೈತರನ್ನು ಸಾಲದಿಂದ ಮುಕ್ತಿಗೊಳಿಸುವುದು ಮತ್ತು ಅವರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಕೆಲಸ

 ನವದೆಹಲಿ (ಜು.09):  ಕೇಂದ್ರ ಸಚಿವೆಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದ ಶೋಭಾ ಕರಂದ್ಲಾಜೆ ಅವರು ಗುರುವಾರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದರು. ರೈತರನ್ನು ಸಾಲದಿಂದ ಮುಕ್ತಿಗೊಳಿಸುವುದು ಮತ್ತು ಅವರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಭರವಸೆಯನ್ನು ಈ ಸಂದರ್ಭದಲ್ಲಿ ಶೋಭಾ ನೀಡಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿದೆ. ರೈತರ ಆದಾಯ ದ್ವಿಗುಣಗೊಳಿಸುವುದು ಮೋದಿ ಅವರ ಕನಸು. ಇದಕ್ಕೆ ನಾವು ಕಟಿಬದ್ಧವಾಗಿದ್ದೇವೆ. ರೈತರನ್ನು ಸಾಲದಿಂದ ಮುಕ್ತಿ ಮಾಡುವ ಮತ್ತು ಅವರ ಸಂಕಷ್ಟಕ್ಕೆ ಸ್ಪಂದಿಸುವ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಇದರ ಜತೆಗೆ, ಮೂರು ಹೊಸ ಕಾಯ್ದೆಗಳ ಕುರಿತು ರೈತರಿಗೆ ಅರಿವೂ ಮೂಡಿಸಬೇಕಿದೆ. ಅವರ ಭಾವನೆ ಅರಿತು ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಮಗಳು ಕೇಂದ್ರ ಮಂತ್ರಿ : ಕನಸು ಈಡೇರಿದ ಖುಷಿಯಲ್ಲಿ ಶೋಭಾ ತಾಯಿ .

ಸಿಹಿ ತಿನ್ನಿಸಿದ ತಾಯಿ:  ಶೋಭಾ ಕರಂದ್ಲಾಜೆ ಕೇಂದ್ರ ಸಚಿವೆಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ತಾಯಿ ಪೂವಕ್ಕ ಅವರು ಪುತ್ರಿಗೆ ಸಿಹಿ ತಿನ್ನಿಸಿ ಶುಭ ಕೋರಿದರು. ಈ ವೇಳೆ ಶೋಭಾ ಅವರು ತಾಯಿಯ ಕಾಲುಮುಟ್ಟಿಆಶೀರ್ವಾದ ಪಡೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್