ಮುಸ್ಲಿಮರು ಜನಸಂಖ್ಯೆ ಹೆಚ್ಚಿಸಿಕೊಂಡು ಬಹುಸಂಖ್ಯಾತರ ಮೀರಿಸಬೇಕು: ಟಿಎಂಸಿ ನಾಯಕ ಫಿರ್ಹದ್‌ ಹಕೀಂ

Published : Dec 16, 2024, 10:47 AM ISTUpdated : Dec 16, 2024, 10:48 AM IST
 ಮುಸ್ಲಿಮರು ಜನಸಂಖ್ಯೆ ಹೆಚ್ಚಿಸಿಕೊಂಡು ಬಹುಸಂಖ್ಯಾತರ ಮೀರಿಸಬೇಕು: ಟಿಎಂಸಿ ನಾಯಕ  ಫಿರ್ಹದ್‌ ಹಕೀಂ

ಸಾರಾಂಶ

ಕೋಲ್ಕತಾ ಮೇಯರ್ ಫಿರ್ಹದ್ ಹಕೀಂ, ಮುಸ್ಲಿಂ ಸಮುದಾಯವು ತಮ್ಮ ಜನಸಂಖ್ಯೆಯನ್ನು ಹೆಚ್ಚಿಸಿಕೊಂಡು ಬಹುಸಂಖ್ಯಾತರನ್ನು ಮೀರಿಸಬೇಕೆಂಬ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಬಿಜೆಪಿ ತೀವ್ರವಾಗಿ ಟೀಕಿಸಿದೆ.

ಕೋಲ್ಕತಾ: ನಮ್ಮನ್ನು ಅಲ್ಪಸಂಖ್ಯಾತರೆಂದರೆ ನಾವು ಒಪ್ಪುವುದಿಲ್ಲ. ಅಲ್ಲಾನ ಕೃಪೆ ಇದ್ದರೆ ಮುಂದೊಂದು ದಿನ ಭಾರತದಲ್ಲಿ ಮುಸ್ಲಿಮರೇ ಬಹುಸಂಖ್ಯಾತರಾಗಲಿದ್ದಾರೆ. ಇದಕ್ಕಾಗಿ ಮುಸ್ಲಿಂ ಸಮುದಾಯ ತಮ್ಮ ಜನಸಂಖ್ಯೆ ವೃದ್ಧಿಸಬೇಕು ಮತ್ತು ಬಹುಸಂಖ್ಯಾತರನ್ನು ಹಿಂದಿಕ್ಕಬೇಕು ಎಂದು ಟಿಎಂಸಿ ನಾಯಕ, ಕೋಲ್ಕತಾದ ಮೇಯರ್‌ ಫಿರ್ಹದ್‌ ಹಕೀಂ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ನಾಯಕ, ಕೇಂದ್ರ ಸಚಿವ ಸುಕಾಂತ ಮಜುಂದಾರ್‌, ಬಂಗಾಳವನ್ನು ಬಾಂಗ್ಲಾದೇಶದಂತೆ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ನಾಯಕರು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಹಕೀಂ ಹೇಳಿದ್ದೇನು?:
ಮುಸ್ಲಿಂ ವಿದ್ಯಾರ್ಥಿಗಳ ಸಭೆ ಉದ್ದೇಶಿಸಿ ಮಾತನಾಡಿದ ಫಿರ್ಹದ್‌ ಹಕೀಂ, ಮುಸ್ಲಿಮರು ಸಶಕ್ತರಾಗುವ ಮೂಲಕ ತಮ್ಮ ದನಿಯನ್ನು ಕೇಳುವಂತೆ ಮಾಡಬೇಕು ಮತ್ತು ಅಭಿವೃದ್ಧಿ ಹಾಗೂ ನ್ಯಾಯದ ಬೇಡಿಕೆಗಳು ಈಡೇರುವಂತೆ ನೋಡಿಕೊಳ್ಳಬೇಕು ಎಂದರು.

ಪ. ಬಂಗಾಳದಲ್ಲಿ ನಾವು ಶೇ.33ರಷ್ಟಿದ್ದೇವೆ ಮತ್ತು ದೇಶದಲ್ಲಿ ಮುಸ್ಲಿಮರ ಪಾಲು ಶೇ.17ರಷ್ಟಿದೆ. ನಮ್ಮನ್ನು ಅಲ್ಪಸಂಖ್ಯಾತರೆಂದು ಕರೆಯಲಾಗುತ್ತದೆ. ಆದರೆ ನಮ್ಮನ್ನು ನಾವು ಹಾಗೆ ಅಂದುಕೊಂಡಿಲ್ಲ. ಅಲ್ಲಾನ ದಯೆ ಮತ್ತು ಬೋಧನೆಗಳು ನಮ್ಮೊಂದಿಗಿದ್ದರೆ ನಾವು ಬಹುಸಂಖ್ಯಾತರಿಗಿಂತಲೂ ದೊಡ್ಡವರಾಗುತ್ತೇವೆ. ನ್ಯಾಯಾಂಗದಲ್ಲಿ ನಮ್ಮ ಪಾಲು ಹೆಚ್ಚಾಗಬೇಕಾದ ತುರ್ತು ಅಗತ್ಯವಿದೆ ಎಂದರು.


ನಾನು ಕ್ರಿಸ್ಮಸ್ ವಿಶ್ ಮಾಡಿದಾಗ ಸೋನಿಯಾ ನಾನು ಕ್ರೈಸ್ತಳಲ್ಲ ಎಂದರು: ಅಯ್ಯರ್

ಪ್ರಣಬ್‌ರನ್ನು ಪ್ರಧಾನಿ ಮಾಡದಿದ್ದುದೇ ಯುಪಿಎ ಸೋಲಿಗೆ ಕಾರಣ : ಮಣಿಶಂಕರ ಅಯ್ಯರ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು