
ಕಣ್ಣೂರು (ಡಿ.12): ನಿರ್ಮಾಣ ಹಂತದಲ್ಲಿದ್ದ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳನ್ನು ಕದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಪಾಚಿಯಮ್ಮ ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ನಿರ್ಮಾಣ ಹಂತದ ಮನೆಯಲ್ಲಿನ ಸಿಸಿಟಿವಿ ಕ್ಯಾಮೆರಾ, ಎಲೆಕ್ಟ್ರಿಕ್ ಕೇಬಲ್ಗಳು, ಬಾತ್ರೂಮ್ ಫಿಟ್ಟಿಂಗ್ ಸೇರಿದಂತೆ ಹಲವು ವಸ್ತುಗಳನ್ನು ಈಕೆ ಕದ್ದಿದ್ದಾರೆ ಎನ್ನಲಾಗಿದೆ. ಕಳೆದ ಶನಿವಾರ ಸಂಜೆ ಕಳ್ಳತನ ನಡೆದಿದೆ. ಪಯ್ಯನ್ನೂರು ರೈಲ್ವೆ ನಿಲ್ದಾಣದ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಪಾಚಿಯಮ್ಮ, ಕುತಿರುಮ್ಮಲದ ವಿನೀತ್ ಎಂಬುವವರ ನಿರ್ಮಾಣ ಹಂತದ ಮನೆಗೆ ಹೋಗಿ ಅಂದಾಜು 15 ಲಕ್ಷ ರೂಪಾಯಿ ಮೌಲ್ಯದ ನಿರ್ಮಾಣ ಸಾಮಗ್ರಿಗಳನ್ನು ಕದ್ದಿದ್ದಾರೆ.
Bengaluru : ಕರ್ನಾಟಕದಲ್ಲಿ ಗರಿಷ್ಠ ಆದಾಯ ತರುವ ಟೋಲ್ ಪ್ಲಾಜಾ ಇದು, ಒಂದೇ ವರ್ಷದಲ್ಲಿ 308 ಕೋಟಿ ಕಲೆಕ್ಷನ್!
ಕದ್ದ ಸಾಮಾನುಗಳ ಪೈಕಿ ಕೆಲವನ್ನು ಕಬ್ಬಿಣದ ಅಂಗಡಿಗೆ ಮಾರಿ ಹಣ ಪಡೆದು ಏನೂ ತಿಳಿಯದವರಂತೆ ವಾಪಸ್ಸಾಗಿದ್ದರು. ದೂರು ದಾಖಲಾದ ನಂತರ ಪಯ್ಯನ್ನೂರು ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪಾಚಿಯಮ್ಮಳನ್ನು ಪತ್ತೆ ಹಚ್ಚಲಾಗಿದೆ. ಕೆಲವು ಸಾಮಗ್ರಿಗಳನ್ನು ಸ್ಥಳೀಯ ಪಾನ್ಶಾಪ್ನಲ್ಲಿ ಮಾರಾಟ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಈ ಕಳ್ಳತನದಲ್ಲಿ ಇನ್ನೂ ಹೆಚ್ಚಿನ ಜನರು ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇಷ್ಟೊಂದು ಸಾಮಗ್ರಿಗಳನ್ನು ಒಬ್ಬರೇ ಕದಿಯಲು ಸಾಧ್ಯವಿಲ್ಲ ಎಂಬುದು ಪೊಲೀಸರ ಅಭಿಪ್ರಾಯ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ರಿಮಾಂಡ್ಗೆ ಕಳುಹಿಸಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್-ರೋಸ್ನೆಫ್ಟ್ ಡೀಲ್: ರಷ್ಯಾದ ಜೊತೆ ಭಾರತದ ಅತಿದೊಡ್ಡ ತೈಲ ಪೂರೈಕೆ ಒಪ್ಪಂದ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ