ಅನಾಥ ಶವಕ್ಕೆ ಹೆಗಲು ಕೊಟ್ಟ ಮಹಿಳಾ PSI: 2 ಕಿ. ಮೀ ಹೊತ್ತೊಯ್ದು ಅಂತ್ಯಸಂಸ್ಕಾರ!

By Suvarna NewsFirst Published Feb 2, 2021, 4:58 PM IST
Highlights

ಮಹಿಳಾ ಪೊಲೀಸ್ ಅಧಿಕಾರಿಯ ಮಾನವೀಯ ನಡೆ| ಅನಾಥ ಶವಕ್ಕೆ ಹೆಗಲು ಕೊಟ್ಟ ಮಹಿಳಾ ಪಿಎಸ್‌ಐ| ಪೊಲೀಸ್ ಅಧಿಕಾರಿಯ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ

ಅಮರಾವತಿ(ಜ.02): ಸರ್ಕಾರಿ ಅಧಿಕಾರಿಗಳು ಜನರ ಕಷ್ಟಕ್ಕೆ ಸ್ಪಂದಿಸುವ, ಅವರ ಕಷ್ಟದಲ್ಲಿ ಭಾಗಿಯಾಗಿ ಮಾನವೀಯತೆ ತೋರುವ ಘಟನೆಗಳು ಆಗಾಗ ಸದ್ದು ಮಾಡುತ್ತಿರುತ್ತವೆ. ಹೀಗಿರುವಾಗ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಅನಾಥ ಶವಕ್ಕೆ ಹೆಗಲು ಕೊಟ್ಟು, ವಿಧಿ ವಿಧಾನದಂತೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಸದ್ಯ ಅವರ ಈ ಮಾನವೀಯ ನಡೆಯ ಪೋಟೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಮಹಿಳಾ ಅಧಿಕಾರಿಯ ನಡೆಗೆ ಸೆಲ್ಯೂಟ್ ಎಂದಿದ್ದಾರೆ.

ಹೌದು ಈ ಘಟನೆ ನಡೆದದ್ದು ಆಂಧ್ರದ ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ. ಈ ಪೊಲೀಸ್​ ಠಾಣೆಯ ಮಹಿಳಾ ಪಿಎಸ್​ಐ ಕೆ. ಸಿರಿಶಾ ತಮ್ಮ ಕಾರ್ಯ ವೈಖರಿಯಿಂದ ಪ್ರತಿಯೊಬ್ಬರಿಗೂ ಮಾದರಿಯಾಗಿದ್ದಾರೆ. ಸುಮಾರು 2 ಕಿ.ಮೀ ವರೆಗೆ ಈ ಪೊಲೀಸ್ ಅಧಿಕಾರಿ ಇತರ ಇಬ್ಬರು ವ್ಯಕ್ತಿಗಳ ಜೊತೆ ಸೇರಿ, ಅಪರಿಚಿತ ವ್ಯಕ್ತಿಯ ಶವವನ್ನು ಹೊತ್ತೊಯ್ದು, ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

Salute to Kasibugga SI K. Sirisha, who went a step ahead while performing her duties and carried an old woman’s dead body for 2kms & helped in performing her last rites.
Along with performing the duties of a public officer, she’s shown public responsibility too. pic.twitter.com/zMwxwKBDti

— Sunil Deodhar (@Sunil_Deodhar)

ಇನ್ನು ಈ ಅಪರಿಚಿತ ವ್ಯಕ್ತಿ ಭಿಕ್ಷುಕನಾಗಿದ್ದು, ಅನಾರೋಗ್ಯದಿಂದಾಗಿ ರಸ್ತೆ ಬದಿಯಲ್ಲೇ ಕೊನೆಯುಸಿರೆಳೆದಿದ್ದ. ಅನಾಥನಾಗಿದ್ದ ಈತನ ಬಳಿಗೆ ಯಾರೂ ಸುಳಿದಾಡಿರಲಿಲ್ಲ. ಈ ಮಾಹಿತಿ ಪಡೆದ ಮಹಿಳಾ ಪಿಎಸ್​ಐ ಸಿರಿಶಾ ಸ್ಥಳಕ್ಕೆ ತೆರಳಿ, ಸ್ವತಃ ಮುಂದೆ ಬಂದು ಕೆಲ ಸ್ಥಳೀಯರ ಜತೆಗೂಡಿ ಮೃತದೇಹಕ್ಕೆ ಹೆಗಲು ಕೊಟ್ಟಿದ್ದಾರೆ. ಬಳಿಕ ಲಲಿತಾ ಚಾರಿಟಬಲ್​ ಟ್ರಸ್ಟ್​ ಸಹಕಾರದೊಂದಿಗೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

I appreciate the efforts of Kasibugga SI, K.Sirisha who carried a body on her shoulders for 2kms & helped in performing the last rites.
Going a step ahead in her official duties & helping in last rites, shows the depth of humane values possessed by every policeman in our country. pic.twitter.com/Ju5Jorcvcb

— G Kishan Reddy (@kishanreddybjp)

ಸೋಮವಾರ ನಡೆದ ಈ ಘಟನೆಯ ವಿಡಿಯೋ ಹಾಗೂ ಫೋಟೋಗಳು ಸದ್ಯ ಸೋಶಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿವೆ. ಸಂಬಂಧಿಕರೇ ವ್ಯಕ್ತಿಯೊಬ್ಬ ಮೃತಪಟ್ಟಾಗ ಹೆಗಲು ಕೊಡಲು ಹಿಂದೆ ಮುಂದೆ ನೋಡುವ ಸಂದರ್ಭದಲ್ಲಿ, ಅನಾಥ ಶವವೊಂದನ್ನು ಹೊತ್ತುಕೊಂಡು ಹೋಗಿ ಅಂತ್ಯಕ್ರಿಯೆ ನೇರವೇರಿಸಿರುವ ಸಿರಿಶಾರವರ ನಡೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

click me!