₹12 ಕೋಟಿ, ಮನೆ, ಬಿಎಂಡಬ್ಲ್ಯು ಜೀವನಾಂಶ ಕೇಳಿದವಳಿಗೆ ಚಾಟಿ

Kannadaprabha News   | Kannada Prabha
Published : Jul 23, 2025, 04:56 AM IST
Supreme Court Questions Rs 12 Crore Alimony Demand From MBA Graduate Woman

ಸಾರಾಂಶ

‘ಸುಶಿಕ್ಷಿತರಾಗಿರುವ ನೀವು ಜೀವನಾಂಶವನ್ನೇಕೆ ಅವಲಂಬಿಸುತ್ತೀರಾ? ನೀವೇ ಯಾಕೆ ದುಡಿಯಬಾರದು’ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾ। ಬಿ.ಆರ್‌. ಗವಾಯಿ ಅವರು, ವಿಚ್ಛೇದಿತ ಮಹಿಳೆಯೊಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನವದೆಹಲಿ: ‘ಸುಶಿಕ್ಷಿತರಾಗಿರುವ ನೀವು ಜೀವನಾಂಶವನ್ನೇಕೆ ಅವಲಂಬಿಸುತ್ತೀರಾ? ನೀವೇ ಯಾಕೆ ದುಡಿಯಬಾರದು’ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾ। ಬಿ.ಆರ್‌. ಗವಾಯಿ ಅವರು, ವಿಚ್ಛೇದಿತ ಮಹಿಳೆಯೊಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇವಲ ಒಂದೂವರೆ ವರ್ಷದ ದಾಂಪತ್ಯದ ಬಳಿಕ ವಿಚ್ಛೇದನ ಪಡೆದಿದ್ದ ಮಹಿಳೆಯೊಬ್ಬರು, ಪತಿಯಿಂದ 12 ಕೋಟಿ ರು. ಜೀವನಾಂಶ, ಮುಂಬೈನಲ್ಲೊಂದು ಮನೆ ಮತ್ತು ಬಿಎಂಡಬ್ಲ್ಯು ಕಾರ್‌ಗೆ ಬೇಡಿಕೆ ಇಟ್ಟಿದ್ದರು. ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾ। ಗವಾಯಿ, ‘ನೀವು ಎಂಬಿಎ ಪದವೀಧರೆ ಮತ್ತು ಅನುಭವಿ ಐಟಿ ಉದ್ಯೋಗಿ. ಹೀಗಿರುವಾಗ ಖುದ್ದಾಗಿ ಸಂಪಾದಿಸಬೇಕೇ ಹೊರತು, ಹಣವನ್ನು ಕೇಳಬಾರದು. 18 ತಿಂಗಳ ದಾಂಪತ್ಯಕ್ಕೆ ಪ್ರತಿಯಾಗಿ ನಿಮಗೆ ಪ್ರತಿ ತಿಂಗಳು 1 ಕೋಟಿ ರು. ಕೊಡಬೇಕೇ’ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಆ ಮಹಿಳೆಯ ಹೆಸರಲ್ಲಿ ಮುಂಬೈನಲ್ಲಿ ಈಗಾಗಲೇ ಫ್ಲ್ಯಾಟ್‌ ಇರುವುದನ್ನು ಗಮನಿಸಿದ ಅವರು, ‘ಒಂದೋ ಆ ಮನೆಯನ್ನು ಇಟ್ಟುಕೊಂಡು ಸುಮ್ಮನಿದ್ದುಬಿಡಿ. ಇಲ್ಲವೇ, 4 ಕೋಟಿ ರು. ಪರಿಹಾರ ಪಡೆದು, ಬೆಂಗಳೂರು, ಪುಣೆ, ಹೈದರಾಬಾದ್‌ನಂತಹ ನಗರಗಳಲ್ಲಿ ಕೆಲಸಕ್ಕೆ ಸೇರಿಕೊಳ್ಳಿ. ಅಲ್ಲಿ ಐಟಿ ಉದ್ಯೋಗಿಗಳಿಗೆ ಭಾರೀ ಬೇಡಿಕೆಯಿದೆ’ ಎಂದು ಸೂಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಭಾರತದಲ್ಲಿ ಟಿ20 ವಿಶ್ವಕಪ್‌ ಆಡಲ್ಲ - ಪಟ್ಟು ಹಿಡಿದು ಎರಡನೇ ಬಾರಿಗೆ ಐಸಿಸಿಗೆ ಪತ್ರ ಬರೆದ ಬಾಂಗ್ಲಾದೇಶ!
ಸ್ಟಾರ್‌ವಾರ್‌ ರೀತಿ ಲೇಸರ್‌ ಅಸ್ತ್ರ ರಾಜ್ಯದಲ್ಲಿ ಅಭಿವೃದ್ಧಿ!