Viral VIdeo: ಅಂಗಡಿಯಲ್ಲಿ ಕೆಲಸ ಮಾಡೋ ಯುವತಿಗೆ ಅಶ್ಲೀಲ ವಿಡಿಯೋ ಕಳಿಸಿದ ಮಾಲೀಕ, ಚಪ್ಪಲಿ ಪುಡಿ ಮಾಡಿದ ಲೇಡಿ!

Published : Sep 13, 2025, 09:06 PM IST
Pune Women publicly thrashing her boss with a slipper

ಸಾರಾಂಶ

woman thrashes shop owner harassment ಕಲ್ಯಾಣ್‌ನಲ್ಲಿ ಅಂಗಡಿ ಮಾಲೀಕನ ಕಿರುಕುಳಕ್ಕೆ ಒಳಗಾದ ಯುವತಿ ಆತನಿಗೆ ಚಪ್ಪಲಿಯಿಂದ ಹೊಡೆದ ಘಟನೆ ವೈರಲ್. ಸಾರ್ವಜನಿಕವಾಗಿ ಕ್ಷಮೆಯಾಚಿಸಿದರೂ ಯುವತಿಯನ್ನು ವಜಾ ಮಾಡಲಾಗಿದೆ.

ಥಾಣೆ (ಸೆ.13): ಇಲ್ಲಿನ ಕಲ್ಯಾಣ್ ಪೂರ್ವದ ಕೊಲ್ಸೆವಾಡಿ ಪ್ರದೇಶದಲ್ಲಿ ಶನಿವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಯುವತಿಯೊಬ್ಬಳು ತನ್ನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ ಆರೋಪದ ಮೇಲೆ ತನ್ನ ಮಾಲೀಕನಿಗೆ ಸಾರ್ವಜನಿಕವಾಗಿ ಥಳಿಸಿದ ಘಟನೆ ನಡೆದಿದೆ. ಈ ಇಡೀ ಘಟನೆಯನ್ನು ವಿಡಿಯೋದಲ್ಲಿ ಸೆರೆಹಿಡಿಯಲಾಗಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಂಗಡಿಗೆ ನುಗ್ಗಿ ಚಪ್ಪಲಿಯಲ್ಲಿ ಬಾರಿಸಿದ ಯುವತಿ

ಯುವತಿ ಕೋಲ್ಸೆವಾಡಿಯ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿದ್ದು,ಈ ಅಂಗಡಿಯ ಮಾಲೀಕ ನಿರಂತರವಾಗಿ ಆಕೆಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳಿಸೋದನ್ನು ಮಾಡುತ್ತಿದ್ದ. ಆಕೆಯ ಡ್ರೆಸ್‌ಗಳ ಬಗ್ಗೆ ಕಾಮೆಂಟ್‌ ಮಾಡುತ್ತಿದ್ದ ಎನ್ನಲಾಗಿದೆ. ನಿರಂತರವಾಗಿ ನಡೆಯುತ್ತಿದ್ದ ಕಿರುಕುಳವನ್ನು ಸಹಿಸಲಾಗದೆ, ಯುವತಿ ಶನಿವಾರ ಮಾಲೀಕನನ್ನು ತರಾಟೆಗೆ ತೆಗೆದುಕೊಂಡಿದ್ದು ಮಾತ್ರವಲ್ಲದೆ, ಕೋಪದಿಂದ ಅಂಗಡಿಯೊಳಗೆ ನುಗ್ಗಿ ಆತನಿಗೆ ಚಪ್ಪಲಿಯಲ್ಲಿ ಬಾರಿಸಿದ್ದಾಳೆ.

ಈ ನಾಟಕೀಯ ಬೆಳವಣಿಗೆ ಹಲವರು ಜನರ ಮುಂದೆಯೇ ನಡೆದಿದೆ. ಅವರಲ್ಲಿ ಹಲವರು ಲೇಡಿ ಚಪ್ಪಲಿ ಪುಡಿ ಮಾಡಿದ ವಿಡಿಯೋವನ್ನು ತಮ್ಮ ಫೋನ್‌ಗಳಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದಾರೆ. ಕಿರುಕುಳದಿಂದ ಸ್ಪಷ್ಟವಾಗಿ ನೊಂದಿದ್ದಂತೆ ಕಂಡಿದ್ದ ಯುವತಿ, ಅಂಗಡಿ ಮಾಲೀಕನಿಗೆ ಅಳುತ್ತಲೇ ತನ್ನ ಚಪ್ಪಲಿಯಿಂದ ಪದೇ ಪದೇ ಹೊಡೆದಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಸಾರ್ವಜನಿಕರ ಆಕ್ರೋಶ ಮತ್ತು ಕ್ಷಮೆಯಾಚನೆ

ಘಟನೆ ದೊಡ್ಡದಾಗುತ್ತಿದ್ದಂತೆ, ಅಂಗಡಿಯ ಹೊರಗಡೆ ಭಾರೀ ಜನಸಮೂಹ ಜಮಾಯಿಸಿತ್ತು. ಕೆಲವು ಸಾರ್ವಜನಿಕರು ಮತ್ತು ಹುಡುಗಿಯ ಸಂಬಂಧಿಕರು ಸ್ಥಳದಲ್ಲೇ ನ್ಯಾಯಕ್ಕಾಗಿ ಒತ್ತಾಯಿಸಿದರು. ಅವರು, ಅಂಗಡಿ ಮಾಲೀಕ, ಯುವತಿಯ ಕಾಲಿಗೆ ಬಿದ್ದು ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು ಎಂದು ವರದಿಯಾಗಿದೆ.

ಇನ್ನೂ ಯಾವುದೇ ಪೊಲೀಸ್ ಕ್ರಮ ಕೈಗೊಂಡಿಲ್ಲ: ಸಾರ್ವಜನಿಕ ಆಕ್ರೋಶ ಮತ್ತು ವೈರಲ್ ವೀಡಿಯೊದ ಹೊರತಾಗಿಯೂ, ವರದಿ ಮಾಡುವ ಸಮಯದಲ್ಲಿ ಅಂಗಡಿಯವನ ವಿರುದ್ಧ ಯಾವುದೇ ಅಧಿಕೃತ ಪೊಲೀಸ್ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆಘಾತಕಾರಿಯಾಗಿ, ಈ ಘಟನೆಯ ನಂತರ ಯುವತಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಇನ್ನೂ ಔಪಚಾರಿಕ ಹೇಳಿಕೆ ನೀಡಿಲ್ಲ ಅಥವಾ ಪ್ರಕರಣ ದಾಖಲಿಸಿಲ್ಲ. ವೈರಲ್ ಆಗಿರುವ ಪುರಾವೆಗಳು ಮತ್ತು ಸಾರ್ವಜನಿಕರ ಆಕ್ರೋಶವನ್ನು ಗಮನಿಸಿದರೆ, ಅಂಗಡಿ ಮಾಲೀಕರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ನೋಡಲು ಅನೇಕರು ಈಗ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು