ಕೇಂದ್ರಕ್ಕೆ ದಾದಾಗಿರಿ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ!

Suvarna News   | Asianet News
Published : Oct 29, 2021, 01:42 PM ISTUpdated : Oct 29, 2021, 01:59 PM IST
ಕೇಂದ್ರಕ್ಕೆ ದಾದಾಗಿರಿ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ!

ಸಾರಾಂಶ

*ಗೋವಾ ರಾಜ್ಯಕ್ಕೆ ಮೂರು ದಿನ ಪ್ರವಾಸ ಕೈಗೊಂಡಿರುವ ಮಮತಾ ಬ್ಯಾನರ್ಜಿ *ಕೇಂದ್ರಕ್ಕೆ ದಾದಾಗಿರಿ ಮಾಡಲು ಬಿಡುವುದಿಲ್ಲ : ದೀದಿ *ನಾನು ಭಾರತೀಯಳು, ನಾನು ಎಲ್ಲಿ ಬೇಕಾದರೂ ಹೋಗಬಹುದು: ಪ.ಬ ಸಿಎಂ

ಗೋವಾ (ಅ.  29) : ಗೋವಾ ರಾಜ್ಯಕ್ಕೆ ಮೂರು ದಿನ ಪ್ರವಾಸ ಕೈಗೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ "ನಾನು  ಸಿಎಂ ಆಗಲು ಇಲ್ಲಿ ಬಂದಿಲ್ಲ, ಆದರೆ ಕೇಂದ್ರಕ್ಕೆ ದಾದಾಗಿರಿ ಮಾಡಲು ಬಿಡುವುದಿಲ್ಲ" ಎಂದು ಹೇಳಿದ್ದಾರೆ.  ಗುರುವಾರ ಸಂಜೆ ಮಮತಾ ಬ್ಯಾನರ್ಜಿ ಗೋವಾ ತಲುಪಿದ್ದರು.

"ಮೀನು ಮತ್ತು ಫುಟ್ಬಾಲ್" ಬಂಗಾಳ ಮತ್ತು ಗೋವಾವನ್ನು ಸಂಪರ್ಕಿಸುವ ಎರಡು ವಿಷಯಗಳಾಗಿವೆ ಎಂದು ಹೇಳಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ರಾಜ್ಯದಲ್ಲಿ ಕೇಂದ್ರದ "ದಾದಾಗಿರಿ" ನಡೆಯಲು ಬಿಡುವುದಿಲ್ಲ ಎಂದು ಹೇಳಿದರು. ಆದಾಗ್ಯೂ, ಅಧಿಕಾರ ಹಿಡಿಯಲು ಅಥವಾ ಗೋವಾದ ಮುಖ್ಯಮಂತ್ರಿಯಾಗಲು ರಾಜ್ಯಕ್ಕೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ. "ದೆಲ್ಲಿಚಿ ದಾದಾಗಿರಿ ಅನಿಕ್ ನಾಕಾ (ಇನ್ನು ಮುಂದೆ ದೆಹಲಿಯಿಂದ ದಬ್ಬಾಳಿಕೆ ಬೇಡ). ನಾನು ಹೊರಗಿನವಳಲ್ಲ, ಗೋವಾದ ಸಿಎಂ ಆಗಲು ಬಯಸುವುದಿಲ್ಲ" ಎಂದು ಕೊಂಕಣ ಭಾಷೆಯಲ್ಲಿ ಪಣಜಿಯಲ್ಲಿ  ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ.

ಮಮತಾಗೆ ಬಿಜೆಪಿ ವಿರೋಧ!

"ನಾನು ಭಾರತೀಯಳು, ನಾನು ಎಲ್ಲಿ ಬೇಕಾದರೂ ಹೋಗಬಹುದು, ಬಂಗಾಳ ನನ್ನ ತಾಯಿನಾಡು, ಗೋವಾ ಕೂಡ ನನ್ನ ತಾಯಿನಾಡು, ನಾನು ಗೋವಾಕ್ಕೆ ಬರುತ್ತೇನೆ, ಅವರು ನನ್ನ ಪೋಸ್ಟರ್‌ಗಳನ್ನು ಹಾಳು ಮಾಡುತ್ತಾರೆ, ಅವರು (ಬಿಜೆಪಿ) ಮಾನಸಿಕ ಅರೋಗ್ಯ ಸರಿಯಿಲ್ಲ, ಅವರು ನನಗೆ ಕಪ್ಪು ಬಾವುಟ ತೋರಿಸಿದರು ಆದರೆ ನಾನು ನಮಸ್ತೆ ಹೇಳಿದೆ," ಎಂದು ಮಮತಾ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಅವರ ಭೇಟಿಗೆ ಮುನ್ನ ಗೋವಾದಲ್ಲಿ ಅವರ ಚಿತ್ರಗಳನ್ನು ಹೊಂದಿರುವ ಹಲವಾರು ಹೋರ್ಡಿಂಗ್‌ಗಳನ್ನು ವಿರೂಪಗೊಳಿಸಲಾಗಿತ್ತು. ಇದು ಬಿಜೆಪಿ ಮತ್ತು ಟಿಎಂಸಿ  ಕಾರ್ಯಕರ್ತರ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು.

ಬಿಜೆಪಿ ಸರ್ಕಾರದಲ್ಲಿ ಹೆಜ್ಜೆ ಹೆಜ್ಜೆಗೂ ಭ್ರಷ್ಟಾಚಾರ: ಮಾಜಿ ರಾಜ್ಯಪಾಲರ ಆರೋಪ

ಮಮತಾ ಬ್ಯಾನರ್ಜಿ ಅವರೊಂದಿಗೆ ಗೋವಾದ ಮಾಜಿ ಮುಖ್ಯಮಂತ್ರಿ  ಲುಯಿಜಿನೊ ಫಲೆರೊ, ಟಿಎಂಸಿ ಸಂಸದ ಡೆರೆಕ್ ಒಬ್ರೇನ್ ಮತ್ತು ಸ್ಥಳೀಯ ನಾಯಕರು ಮಮತಾ ಜತೆಯಾಗಿದ್ದಾರೆ. ಶನಿವಾರ, ಮಮತಾ ಬ್ಯಾನರ್ಜಿ ಅವರು ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ, ನಂತರ ಓಲ್ಡ್ ಗೋವಾದ ಬಾಮ್ ಜೀಸಸ್ ಬೆಸಿಲಿಕಾ ಮತ್ತು ಮಾಪುಸಾದ ಬೋಡ್ಗೇಶ್ವರ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಮುಂದಿನ ವರ್ಷ ಮಾರ್ಚ್‌ನಲ್ಲಿ ಗೋವಾದಲ್ಲಿ 40 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಟಿ ನಫೀಸಾ ಅಲಿ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರ್ಪಡೆ ಗೋವಾದಲ್ಲಿ ಮುಂದಿನ ವರ್ಷದ ಚುನಾವಣೆಗೆ ಮುನ್ನ ಪಕ್ಷಕ್ಕೆ ಉತ್ತಮ ಬೆಳವಣಿಯಾಗಿದೆ. ಈ ಬಗ್ಗೆ ತೃಣಮೂಲ ಕಾಂಗ್ರೇಸ್‌ ಟ್ವೀಟ್‌ ಕೂಡ ಮಾಡಿದೆ.

 

 

ರಾಗಾಗೆ ಮೋದಿ ಶಕ್ತಿಯ ಅಂದಾಜಿಲ್ಲ!

ಇತ್ತೀಚೆಗೆ ರಾಜಕೀಯ ತಂತ್ರಜ್ಞ ಪ್ರಶಾಂತ್‌ ಕಿಶೋರ್‌ ಬಿಜೆಪಿಯ ಬಗ್ಗೆ ಗೋವಾದಲ್ಲಿ ಮಾತನಾಡಿದ್ದರು. ಭಾರತೀಯ ಜನತಾ ಪಕ್ಷ (BJP) ಮುಂದಿನ ದಶಕಗಳವರೆಗೆ (Decade) ಭಾರತದ ರಾಜಕೀಯದಲ್ಲಿ ಪ್ರಬಲ ಶಕ್ತಿಯಾಗಿ ಉಳಿಯಲಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಹೇಳಿದ್ದರು. ಬಿಜೆಪಿಯು ಹಲವಾರು ದಶಕಗಳ ಕಾಲ ಹೋರಾಡಬೇಕಾಗುತ್ತದೆ ಎಂದು ಕಿಶೋರ್ ನಂಬಿದ್ದಾರೆ. ಕಿಶೋರ್ ಮಾತನಾಡಿ, 40 ವರ್ಷಗಳ ಹಿಂದೆ ಕಾಂಗ್ರೆಸ್ (Congress) ಹೇಗೆ ಅಧಿಕಾರದ ಕೇಂದ್ರವಾಗಿತ್ತು, ಅದೇ ರೀತಿ ಬಿಜೆಪಿ ಸೋತರೂ ಗೆದ್ದರೂ ಅಧಿಕಾರದ ಕೇಂದ್ರದಲ್ಲಿ ಉಳಿಯುತ್ತದೆ. ಒಮ್ಮೆ ರಾಷ್ಟ್ರಮಟ್ಟದಲ್ಲಿ ಶೇ.30ರಷ್ಟು ಮತ ಪಡೆದರೆ ರಾಜಕೀಯ ಚಿತ್ರಣದಿಂದ ಅಷ್ಟು ಬೇಗ ದೂರ ಸರಿಯಲು ಆಗುವುದಿಲ್ಲ ಎಂದಿದ್ದರು.

ಸ್ವಯಂಪೂರ್ಣ ಗೋವಾ ಕಾರ್ಯಕ್ರಮದ ಫಲಾನುಭವಿಗಳ ಜೊತೆ ಅ.23ಕ್ಕೆ ಮೋದಿ ಸಂವಾದ!

ಗೋವಾ ಮ್ಯೂಸಿಯಂನಲ್ಲಿ (Goa Musium) ಮಾತನಾಡಿದ ಪ್ರಶಾಂತ್ ಕಿಶೋರ್ "ಜನರು ಮೋದಿ (ಪ್ರಧಾನಿ ನರೇಂದ್ರ ಮೋದಿ) ಮೇಲೆ ಕೋಪಗೊಂಡಿದ್ದಾರೆ ಮತ್ತು ಅವರನ್ನು ಅಧಿಕಾರದಿಂದ ಹೊರಹಾಕುತ್ತಾರೆ ಎಂಬ ಬಲೆಗೆ ಬೀಳಬೇಡಿ" ಎಂದಿದ್ದರು. ಜನರು ಮೋದಿಯನ್ನು ಅಧಿಕಾರದಿಂದ ಹೊರಹಾಕಬಹುದು ಆದರೆ ಬಿಜೆಪಿ ಎಲ್ಲಿಯೂ ಹೋಗುವುದಿಲ್ಲ. ಮುಂದಿನ ಹಲವಾರು ದಶಕಗಳವರೆಗೆ ನೀವು ಈ ಪಕ್ಷದ ವಿರುದ್ಧ ಹೋರಾಡಬೇಕಾಗುತ್ತದೆ ಎಂದು ಪ್ರಶಾಂತ್‌ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!