
ಪಿಟಿಐ ನವದೆಹಲಿ (ಫೆ.10): ವಿಶೇಷ ಮತಪಟ್ಟಿ ಪರಿಷ್ಕರಣೆಗೆ (ಎಸ್ಐಆರ್) ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಕಾನೂನು ಸಮರ ಸಾರಿರುವ ಹೊತ್ತಿನಲ್ಲಿ, ‘ಈ ಪ್ರಕ್ರಿಯೆಗೆ ಯಾವುದೇ ಅಡಚಣೆಯಾಗಲು ಬಿಡುವುದಿಲ್ಲ. ಎಲ್ಲ ರಾಜ್ಯಗಳೂ ಇದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಮೂಲಕ ಮಮತಾ ಹಾಗೂ ಇತರ ಎಸ್ಐಆರ್ ವಿರೋಧಿಗಳಿಗೆ ಕೋರ್ಟ್ ಹೋರಾಟದಲ್ಲಿ ಹಿನ್ನಡೆ ಆಗಿದೆ.
ಎಸ್ಐಆರ್ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆಐ ನ್ಯಾ। ಸೂರ್ಯಕಾಂತ್, ನ್ಯಾ। ಎನ್.ವಿ. ಅಂಜಾರಿಯಾ, ಜಯಮಾಲ್ಯ ಬಾಗ್ಚಿ ಅವರ ತ್ರಿಸದಸ್ಯ ಪೀಠ, ‘ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಆದೇಶ ಅಥವಾ ಸ್ಪಷ್ಟನೆಗಳು ಅಗತ್ಯವಿದ್ದಲ್ಲಿ ಅವುಗಳನ್ನು ಒದಗಿಸುತ್ತೇವೆ. ಆದರೆ ಎಸ್ಐಆರ್ಗೆ ಅಡ್ಡಿ ಉಂಟಾಗಲು ಬಿಡುವುದಿಲ್ಲ. ಇದನ್ನು ಎಲ್ಲಾ ರಾಜ್ಯಗಳು ಅರ್ಥಮಾಡಿಕೊಳ್ಳಬೇಕು’ ಎಂದಿತು.
ಇದೇ ವೇಳೆ, ‘ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ 8,505 ಗ್ರೂಪ್ ಬಿ ನೌಕರರ ಪಟ್ಟಿಯನ್ನು ನಾವು ಪರಿಗಣಿಸಿದ್ದು, ಅವರಿಗೆ ತರಬೇತಿ ನೀಡಿ ಎಸ್ಐಆರ್ಗೆ ಬಳಸಿಕೊಳ್ಳಬಹುದು’ ಎಂದು ಸೂಚಿಸಿತು. ಜತೆಗೆ, ಮತಪಟ್ಟಿ ಪರಿಷ್ಕರಣೆಯ ಅಂತಿಮ ನಿರ್ಧಾರವನ್ನು ಅಧಿಕಾರಿಗಳೇ ತೆಗೆದುಕೊಳ್ಳುತ್ತಾರೆ ಎಂದು ಕೋರ್ಟ್ ಹೇಳಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ