ಜಗತ್ತಿಗೆ ಗಾಂಧಿ ಬಗ್ಗೆ ತಿಳಿದಿದ್ದು ಸಿನಿಮಾ ಬಂದ ಬಳಿಕ: ಪ್ರಧಾನಿ ಮೋದಿ

Published : May 30, 2024, 06:43 AM IST
ಜಗತ್ತಿಗೆ ಗಾಂಧಿ ಬಗ್ಗೆ ತಿಳಿದಿದ್ದು ಸಿನಿಮಾ ಬಂದ ಬಳಿಕ: ಪ್ರಧಾನಿ ಮೋದಿ

ಸಾರಾಂಶ

ಮಹಾತ್ಮ ಗಾಂಧೀಜಿಯ ಕುರಿತು ಪ್ರಪಂಚಕ್ಕೆ ತಿಳಿಸುವ ಕಾರ್ಯವನ್ನು ಭಾರತೀಯರು ಮಾಡಬೇಕಿತ್ತು. ಆದರೆ ಆ ಕೆಲಸವನ್ನು ರಿಚರ್ಡ್‌ ಅಟೆನ್‌ಬರೋ ಗಾಂಧಿ ಚಿತ್ರದ ಮೂಲಕ 1982ರಲ್ಲಿ ನೆರವೇರಿಸಿದ ಬಳಿಕ ಜಗತ್ತಿಗೆ ಗಾಂಧೀಜಿಯ ಸಾಧನೆ ತಿಳಿಯಿತು: ಪ್ರಧಾನಿ ನರೇಂದ್ರ ಮೋದಿ 

ನವದೆಹಲಿ(ಮೇ.30): 1982ರಲ್ಲಿ ಮಹಾತ್ಮ ಗಾಂಧೀಜಿಯವರ ಕುರಿತು ಚಲನಚಿತ್ರ ಬರುವವರೆಗೂ ಅವರು ಯಾರೆಂದು ಪ್ರಪಂಚಕ್ಕೆ ಗೊತ್ತಿರಲಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇಂಥ ಹೇಳಿಕೆ ಮೂಲಕ ರಾಷ್ಟ್ರಪಿತ ಗಾಂಧೀಜಿಯ ಪರಂಪರೆಗೆ ಮೋದಿ ಮಸಿ ಬಳಿದಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಕಿಡಿ ಕಾರಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಪ್ರಧಾನಿ ಮೋದಿ, ‘ಮಹಾತ್ಮ ಗಾಂಧೀಜಿಯ ಕುರಿತು ಪ್ರಪಂಚಕ್ಕೆ ತಿಳಿಸುವ ಕಾರ್ಯವನ್ನು ಭಾರತೀಯರು ಮಾಡಬೇಕಿತ್ತು. ಆದರೆ ಆ ಕೆಲಸವನ್ನು ರಿಚರ್ಡ್‌ ಅಟೆನ್‌ಬರೋ ಗಾಂಧಿ ಚಿತ್ರದ ಮೂಲಕ 1982ರಲ್ಲಿ ನೆರವೇರಿಸಿದ ಬಳಿಕ ಜಗತ್ತಿಗೆ ಗಾಂಧೀಜಿಯ ಸಾಧನೆ ತಿಳಿಯಿತು’ ಎಂದು ಹೇಳಿದ್ದರು.

3ನೇ ಮಗು ಹುಟ್ಟಿದ್ದಕ್ಕೆ ಇಬ್ಬರು ಬಿಜೆಪಿ ಕಾರ್ಪರೇಟರ್‌ಗಳು ಅನರ್ಹ: ಮೋದಿ ರೂಪಿಸಿದ್ದ ಕಾನೂನು..!

ಜೊತೆಗೆ ‘ಜಗತ್ತಿಗೆ ಮಾರ್ಟಿನ್‌ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಅವರಂಥ ನಾಯಕರು ಗೊತ್ತಿದ್ದಾರೆ ಎಂದಾದಲ್ಲಿ ಗಾಂಧೀಜಿ ಕೂಡಾ ಅವರಿಗಿಂತ ಏನೂ ಕಡಿಮೆ ಇಲ್ಲ. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ನಮ್ಮ ದೇಶವನ್ನು ಗಾಂಧೀಜಿ ಮತ್ತು ಅವರ ತತ್ವಗಳ ಮೂಲಕ ಗುರುತಿಸುವಂತೆ ಆಗಬೇಕು’ ಎಂದು ಮೋದಿ ಹೇಳಿದ್ದಾರೆ.

ಮೋದಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಜೈರಾಂ, ‘ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಬಗ್ಗೆ ಚಲನಚಿತ್ರ ಬರುವವರೆಗೂ ಆತನ ಬಗ್ಗೆ ಗೊತ್ತೇ ಇರಲಿಲ್ಲ ಎಂದು ಹೇಳುವ ಮೂಲಕ ಅವರ ಸಾಧನೆಗಳಿಗೆ ಅವಮಾನಿಸಿದ್ದಾರೆ. ಆರ್‌ಎಸ್‌ಎಸ್‌ನವರಿಗೆ ಗಾಂಧಿಯನ್ನು ಕೊಂದ ನಾಥೂರಾಮ್‌ ಗೋಡ್ಸೆಯ ಕುರಿತು ತಿಳಿದಿದೆಯೇ ಹೊರತು ಗಾಂಧೀಜಿಯ ರಾಷ್ಟ್ರೀಯತಾ ತತ್ವದ ಕುರಿತು ತಿಳಿದಿಲ್ಲ. ಇದು ಗಾಂಧೀಜಿ ಹಾಗೂ ಗೋಡ್ಸೆ ಬೆಂಬಲಿಗರ ನಡುವಿನ ಚುನಾವಣೆಯಾಗಿದೆ’ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ
ಅನಾರೋಗ್ಯ ಏನಿದ್ದರೂ ವೀಕ್ ಆಫ್‌ನಲ್ಲೇ ಬರಬೇಕು ಸಿಕ್ ಲೀವ್ ಇಲ್ಲ, ನೋವು ತೋಡಿಕೊಂಡ ಉದ್ಯೋಗಿ