ವಿಶ್ವ ಅಂತರ್ಜಾಲದಿಂದ, ನಮ್ಮ ಮನಸ್ಸು ಭಾರತದೊಂದಿಗೆ ಕನೆಕ್ಟ್; ಅನಿವಾಸಿ ಭಾರತೀಯರನ್ನುದ್ದೇಶಿ ಮೋದಿ ಭಾಷಣ!

Published : Jan 09, 2021, 05:30 PM ISTUpdated : Jan 09, 2021, 05:32 PM IST
ವಿಶ್ವ ಅಂತರ್ಜಾಲದಿಂದ, ನಮ್ಮ ಮನಸ್ಸು ಭಾರತದೊಂದಿಗೆ ಕನೆಕ್ಟ್; ಅನಿವಾಸಿ ಭಾರತೀಯರನ್ನುದ್ದೇಶಿ ಮೋದಿ ಭಾಷಣ!

ಸಾರಾಂಶ

16ನೇ ಪ್ರವಾಸಿ ದಿವಸ್ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಮೋದಿ ಭಾಷಣದ ಪ್ರಮುಖ ಅಂಶ ಇಲ್ಲಿದೆ.

ನವದೆಹಲಿ(ಜ.09): ಇಡೀ ವಿಶ್ವವೇ ಅಂತರ್ಜಾಲದಿಂದ ಕನೆಕ್ಟ್ ಆಗಿದೆ. ಆದರೆ ನಮ್ಮ ಮನಸ್ಸು ಮಾ ಭಾರತಿಯೊಂದಿಗೆ ಸಂಪರ್ಕ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅನಿವಾಸಿ ಭಾರತೀಯರನ್ನುದ್ದೇಶಿ ಹೇಳಿದ್ದಾರೆ. 16ನೇ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫೆರನ್ಸ್ ಮೂಲಕ ಮಾತನಾಡಿದ ಮೋದಿ, ತಾಯ್ನಾಡಿನಿಂದ ನಾವೆಷ್ಟೋ ದೂರವಿದ್ದರೂ, ನಿರಂತರ ಸಂಪರ್ಕದಲ್ಲಿರುುತ್ತೆವೆ. ಇದು ಭಾರತದ ಶಕ್ತಿ ಎಂದು ಮೋದಿ ಹೇಳಿದ್ದಾರೆ.

ಕೊರೋನಾ ಲಸಿಕೆ ವಿತರಣೆ; ಜ.11ಕ್ಕೆ BSY ಸೇರಿ ಎಲ್ಲಾ ರಾಜ್ಯ ಸಿಎಂ ಜೊತೆ ಮೋದಿ ಸಭೆ!

ಸತತ ಪರಿಶ್ರಮ, ಪ್ರಯತ್ನ, ಸಾಧನೆಗಳಿಂದ ಅನಿವಾಸಿ ಭಾರತೀಯರು ತಮ್ಮ ತಮ್ಮ ಕೆಲಸ ಹಾಗೂ ಇತರ ದೇಶಗಳಲ್ಲಿ ಹೆಮ್ಮೆಯ ಭಾರತೀಯರಾಗಿ ಗುರುತಿಸಿಕೊಂಡಿದ್ದಾರೆ.  ಬಡವರ ಸಬಲೀಕರಣಕ್ಕಾಗಿ ಭಾರತದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ವಿಶ್ವದಾದ್ಯಂತ ಚರ್ಚಿಸಲಾಗುತ್ತಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ, ಅಭಿವೃದ್ಧಿ ಹೊಂದುತ್ತಿರುವ ದೇಶವೂ ಸಹ ಮುನ್ನಡೆ ಸಾಧಿಸಬಹುದು ಎಂದು  ಭಾರತ ಜಗತ್ತಿಗೆ ತೋರಿಸಿದೆ ಎಂದು ಮೋದಿ ಹೇಳಿದರು.

ಭಾರತ ಭಯೋತ್ಪಾದನೆ ವಿರುದ್ಧ ನಿರಂತರ ಹೋರಾಟ ಮಾಡುತ್ತಾ ಬರುತ್ತಿದೆ. ಭಾರತದ ಹೋರಾಟದಿಂದ ಇದೀಗ ವಿಶ್ವವೇ ಭಯೋತ್ಪಾದನೆ ವಿರುದ್ಧ ಹೋರಾಟ ಕೈಜೋಡಿಸಿದೆ. ಇನ್ನು ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಡಿಜಿಟಲೀಕರಣ ಮಾಡಲಾಗಿದೆ. ಈ ಮೂಲಕ ಕೋಟಿ ಕೋಟಿ ರೂಪಾಯಿ ಹಣಕಾಸು ನೆರವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುತ್ತಿದೆ ಎಂದು ಮೋದಿ ಹೇಳಿದರು.

ನಾವು ಪಿಪಿಇ ಕಿಟ್, ವೆಂಟಿಲೇಟರ್, ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳನ್ನು ಆಮದು ಮಾಡಿಕೊಳ್ಳುತ್ತಿದ್ದೆವು. ಆದರೆ ಇದೀಗ ಈ ಎಲ್ಲಾ ಉಪಕರಣಗಳು ಭಾರತದಲ್ಲಿ ಉತ್ಪಾದನೆಯಾಗುತ್ತಿದೆ. ವಿದೇಶಕ್ಕೂ ರಫ್ತಾಗುತ್ತಿದೆ. ಭಾರತ ಸ್ವಾಲಂಬಿಯಾಗುತ್ತಿದೆ. ಇತರ ದೇಶಗಳಿಂದ ಆಮದು ಪ್ರಮಾಣ ಕಡಿಮಯಾಗುತ್ತಿದೆ ಎಂದು ಮೋದಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ
ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು