
ಗೋರಖ್ಪುರ(ಡಿ. 11) ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವನ್ನು ನೋಡುತ್ತಿದ್ದ ವಿಶ್ವದ ದೃಷ್ಟಿಕೋನವೇ ಬದಲಾಗಿದ್ದು ಮತ್ತೊಮ್ಮೆ ಭಾರತ ಏನು ಮಾಡುತ್ತದೆ ಎಂಬುದನ್ನು ಎಲ್ಲರೂ ನೋಡುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮಹಾರಾಣಾ ಪ್ರತಾಪ್ ಶಿಕ್ಷಾ ಪರಿಷತ್ ಸಂಸ್ಥಾಪನಾ ಸಪ್ತಾಹದಲ್ಲಿ ಮಾತನಾಡಿದ ಯೋಗಿ, ಕೊರೊನಾ ವೈರಸ್ ಗೆ ಲಸಿಕೆ ಮುಂದಿನ ವರ್ಷದ ಜನವರಿಯಲ್ಲಿ ಸಿದ್ಧವಾಗಲಿದೆ. ನಾಗರಿಕರು ಸರ್ಕಾರದ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಬೇಕು ಎಂದರು.
ಲವ್ ಜಿಹಾದ್ ವಿರುದ್ಧ ಎಂಥ ಕಾನೂನು ತಂದ ಯೋಗಿ ಸರ್ಕಾರ
ಆರೇಳು ವರ್ಷ ಹಿಂದಕ್ಕೆ ಹೋದರೆ ಭಾರತ ವಿಶ್ವದ ಉಳಿದ ರಾಷ್ಟ್ರಗಳನ್ನು ನೋಡುತ್ತಿತ್ತು. ಆದರೆ ಮೋದಿ ನಾಯಕತ್ವದ ನಂತರ ಯುರೋಪ್, ಅಮೇರಿಕಾ ಭಾರತ ಏನು ಮಾಡುತ್ತಿದೆ ಎಂಬುದನ್ನು ನೋಡುತ್ತಿವೆ ಎಂದರು.
ಭಾರತದಲ್ಲಿನ ಚಿಕ್ಕ ಮಗುವಿಗೂ ತಂತ್ರಜ್ಞಾನ ಲಭ್ಯವಾಗುತ್ತದೆ. ಮಗು ಆನ್ ಲೈನ್ ಕ್ಲಾಸ್ ಅಟೆಂಡ್ ಮಾಡುವ ಪರಿಸ್ಥಿತಿಗೆ ಬಂದು ತಲುಪಿದ್ದೇವೆ. ತಂತ್ರಜ್ಞಾನದ ನೆರವಿನಿಂದಲೇ 135 ಕೋಟಿ ಜನಸಂಖ್ಯೆಯ ದೊಡ್ಡ ರಾಷ್ಟ್ರ ಕೊರೊನಾದಂತಹ ಮಹಾಮಾರಿ ವಿರುದ್ಧ ಹೊರಾಟ ಮಾಡಲು ಸಾಧ್ಯವಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ