
ಜೈಪುರ[ಜ.27]: ‘ನಾನು ಭಾರತದಲ್ಲೇ ವಾಸವಿದ್ದಿದ್ದರೆ ನೊಬೆಲ್ ಪ್ರಶಸ್ತಿ ಸಿಗುತ್ತಿರಲಿಲ್ಲ’ ಎಂದು ಭಾರತೀಯ ಮೂಲದ ಅರ್ಥಶಾಸ್ತ್ರ ನೊಬೆಲ್ ವಿಜೇತ ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ.
ಧೋತಿ-ಕುರ್ತಾ, ಸೀರೆ: ನೊಬೆಲ್ ಸ್ವೀಕರಿಸಿದ ಬ್ಯಾನರ್ಜಿ ದಂಪತಿ!
ಜೈಪುರ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ ಅವರು ಈ ಮಾತುಗಳನ್ನು ಹೇಳಿದರು. ಆದರೆ ತಮ್ಮ ಅಭಿಪ್ರಾಯಕ್ಕೆ ತಕ್ಷಣವೇ ಸ್ಪಷ್ಟನೆ ನೀಡಿದ ಅವರು, ‘ಭಾರತದಲ್ಲಿ ಒಳ್ಳೆಯ ಪ್ರತಿಭೆಗಳು ಇಲ್ಲ ಎಂದಲ್ಲ. ಇದ್ದಾರೆ. ಆದರೆ ಸಾಧನೆ ಮಾಡಲು ವ್ಯವಸ್ಥೆ ಕೂಡ ಪೂರಕವಾಗಿರಬೇಕು’ ಎಂದು ಹೇಳಿದರು.
‘ಒಬ್ಬನಿಂದಲೇ ಸಾಧನೆ ಸಾಧ್ಯವಿಲ್ಲ. ಇತರರು ಪಟ್ಟಶ್ರಮದಿಂದ ಕೂಡ ನನಗೆ ಶ್ರೇಯಸ್ಸು ಬಂದಿದೆ’ ಎಂದರು. ಮುಂಬೈನಲ್ಲಿ ಜನಿಸಿದ್ದ ಬ್ಯಾನರ್ಜಿ ಈಗ ಅಮೆರಿಕ ವಾಸಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ