
ಲಖನೌ(ಜೂ.13): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬದಲಾವಣೆಗೆ ಸಂಬಂಧಿಸಿದಂತೆ ಎದ್ದಿದ್ದ ಊಹಾಪೋಹಗಳಿಗೆ ಕೊನೆಗೂ ತೆರೆಬಿದ್ದಿದೆ. ಬಿಜೆಪಿ ಹೈಕಮಾಂಡ್ ಯೋಗಿ ಆದಿತ್ಯನಾಥ್ ಅವರ ನಾಯಕತ್ವದ ಮೇಲೆ ಸಂಪೂರ್ಣ ವಿಶ್ವಾಸ ಇಟ್ಟಿದ್ದು, 2022ರ ವಿಧಾನಸಭೆ ಚುನಾವಣೆಯನ್ನು ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲೇ ಎದುರಿಸಲು ಒಲುವು ತೋರಿದೆ ಎಂದು ಮೂಲಗಳು ತಿಳಿಸಿವೆ.
ಕುತೂಹಲ ಕೆರಳಿಸಿದ ಸಿಎಂ ಯೋಗಿ ದೆಹಲಿ ಭೇಟಿ
ಉತ್ತರ ಪ್ರದೇಶದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹದ ಮಧ್ಯೆ ಯೋಗಿ ಅದಿತ್ಯನಾಥ್ ಅವರ ದೆಹಲಿ ಭೇಟಿ ತೀವ್ರ ಕುತೂಹಲ ಕೆರಳಿಸಿತ್ತು. ಚುನಾವಣೆಗೂ ಮುನ್ನ ಯೋಗಿ ಅಧಿತ್ಯನಾಥ್ ಅವನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲಾಗುತ್ತದೆ ಎನ್ನಲಾಗಿತ್ತು. ಆದರೆ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬಳಿಕ ಯೋಗಿ ಅದಿತ್ಯನಾಥ್ ಅವರ ಸ್ಥಾನ ಅಬಾಧಿತವಾಗಿದೆ. ಉತ್ಸಾಹದಿಂದ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶಕ್ಕೆ ವಾಪಸ್ ಆಗಿದ್ದಾರೆ.
ಯೋಗಿ ಆದಿತ್ಯನಾಥ್ ಹುಟ್ಟುಹಬ್ಬಕ್ಕೆ ಮೋದಿ ಶುಭಾಶಯದ ಟ್ವೀಟ್ ಮಿಸ್; ಇಲ್ಲಿದೆ ಕಾರಣ!
ಭೇಟಿಯ ವೇಳೆ ಮೋದಿ ಹಾಗೂ ಅಮಿತ್ ಶಾ ಯೋಗಿ ಆದಿತ್ಯನಾಥ್ ಸರ್ಕಾರದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚಿಸಿದ್ದಾರೆ. ಆದರೆ, ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಿ ದಕ್ಷ ಆಡಳಿತಕ್ಕೆ ಒತ್ತು ನೀಡುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ