Jammu and Kashmir ಪಾಕ್ ಜೊತೆ ಮಾತುಕತೆ ನಡೆಸದೆ ಕಾಶ್ಮೀರದಲ್ಲಿ ಶಾಂತಿ ಸಾಧ್ಯವಿಲ್ಲ, ಫಾರೂಖ್ ಅಬ್ದುಲ್ಲಾ!

Published : May 30, 2022, 06:21 PM IST
Jammu and Kashmir ಪಾಕ್ ಜೊತೆ ಮಾತುಕತೆ ನಡೆಸದೆ ಕಾಶ್ಮೀರದಲ್ಲಿ ಶಾಂತಿ ಸಾಧ್ಯವಿಲ್ಲ, ಫಾರೂಖ್ ಅಬ್ದುಲ್ಲಾ!

ಸಾರಾಂಶ

ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿ ಸೈನಿಕರ ನಿಯೋಜನೆಯಿಂದ ಶಾಂತಿ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಕಾಶ್ಮೀರಿ ಜನರ ಹೃದಯ ಗೆಲ್ಲಬೇಕು, ಕೇಂದ್ರಕ್ಕೆ ಸೂಚನೆ

ನವದೆಹಲಿ(ಮೇ.30): ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಸೈನಿಕರ ಜಮಾವಣೆಯಿಂದ ಸಾಧ್ಯವಿಲ್ಲ. ನೆರೆ ರಾಷ್ಟ್ರಗಳ ಜೊತೆಗೆ ಮಾತುಕತೆ ಮೂಲಕ ಮಾತ್ರ ಶಾಂತಿ ಸ್ಥಾಪಿಸಲು ಸಾಧ್ಯ ಎಂದು  ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ, ನ್ಯಾಷನಲ್ ಕಾನ್ಫೆರೆನ್ಸ್ ನಾಯಕ ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾದ ಬಳಿಕ ಚಿತ್ರಣ ಬದಲಾಗಿದೆ. ಆದರೆ ಇಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆ, ಉಗ್ರರ ದಾಳಿಗೆ ಕಡಿವಾಣ ಬಿದ್ದಿಲ್ಲ. ಇದೀಗ ಇದೇ ವಿಚಾರ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಪಾರೂಖ್ ಅಬ್ದುಲ್ಲಾ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ನಡೆದ ಮುಸ್ಲಿಮ್ ಚಿಂತಕರ ಭೇಟಿ ಸಮಾರಂಭದಲ್ಲಿ ಅಬ್ದುಲ್ಲಾ ಈ ಮಾತುಗಳನ್ನಾಡಿದ್ದಾರೆ.

ಉಗ್ರ ಯಾಸಿನ್‌ಗೆ ಶಿಕ್ಷೆಯಾದರೆ ಭಾರತದ ವಿರುದ್ಧ ಘೋಷಣೆ, ಭಯೋತ್ಪಾದಕರಿಗೆ ಬಹುಪರಾಕ್

ಕಾಶ್ಮೀರದಲ್ಲಿ ಹೆಚ್ಚುವರಿ ಸೇನೆ ನಿಯೋಜನೆ, ಭದ್ರತೆ ಹೆಚ್ಚಿಸುವುದರಿಂದ ಶಾಂತಿ ಸಾಧ್ಯವಿಲ್ಲ, ಕಾಶ್ಮೀರಿ ಜನರ ಹೃದಯ ಗೆಲ್ಲಬೇಕು, ನೆರೆ ರಾಷ್ಟ್ರದ ಜೊತೆ ಮಾತುಕತೆ ನಡೆಸಬೇಕು. ಹೀಗಾದಲ್ಲಿ ಮಾತ್ರ ಶಾಂತಿ ಸ್ಥಾಪಿಸಲು ಸಾಧ್ಯ ಎಂದು ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ.

ಇದರ ನಡುವೆ ನಾವು ಭಾರತೀಯ ಮುಸ್ಲಿಮರು, ನಮ್ಮ ಮೇಲೆ ನಂಬಿಕೆ ಇಡಿ, ನಾವು ರಷ್ಯಾ, ಚೈನಾದಿಂದ ಬಂದಿಲ್ಲ ಎಂದು ಫಾರೂಖ್ ಅಬ್ದುಲ್ಲಾ ಅಲ್ಪಸಂಖ್ಯಾತ ದಾಳ ಉರುಳಿಸಿದ್ದಾರೆ. ಈ ಮೂಲಕ ಅಲ್ಪಸಂಖ್ಯಾತರ ಮೇಲೆ ಕೇಂದ್ರ ಸರ್ಕಾರ ದಾಳಿ ಮಾಡುತ್ತಿದೆ ಎಂದು ತಮ್ಮ ಮೇಲಿನ ಇಡಿ ವಿಚಾರಣೆಯನ್ನು ರಾಜಕೀಯ ಸ್ಪರ್ಶ ನೀಡಿದ್ದಾರೆ. 112 ಕೋಟಿ ರೂಪಾಯಿ ಅಕ್ರಮ ಹಣವ್ಯವಹಾರ ಆರೋಪ ಪಾರೂಖ್ ಅಬ್ದುಲ್ಲಾ ಮೇಲಿದೆ.

ಕ್ರಿಕೆಟ್‌ ಹಣ ದುರ್ಬಳಕೆ: ಫಾರೂಖ್‌ ಅಬ್ದುಲ್ಲಾ ಗೆ ಇ.ಡಿ. ಸಂಕಷ್ಟ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಮ್ಮು-ಕಾಶ್ಮೀರ ಕ್ರಿಕೆಟ್‌ ಸಂಸ್ಥೆ (ಜೆಕೆಸಿಎ) ಅಧ್ಯಕ್ಷರಾಗಿದ್ದ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರುಖ್‌ ಅಬ್ದುಲ್ಲಾಗೆ ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ ಸಮನ್ಸ್‌ ಜಾರಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 31ರಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿದೆ.

ಕಾಶ್ಮೀರಿ ಹಿಂದು ರಾಹುಲ್ ಭಟ್ ಹತ್ಯೆ ಮಾಡಿದ 3 ಭಯೋತ್ಪಾದಕರಿಗೆ ಗುಂಡಿಕ್ಕಿದ ಭಾರತೀಯ ಸೇನೆ!

2011-12ರಲ್ಲಿ ಬಿಸಿಸಿಐ, ಕಾಶ್ಮೀರ ಕ್ರಿಕೆಟ್‌ ಸಂಸ್ಥೆಗೆ 112 ಕೋಟಿ ರು. ನೀಡಿತ್ತು. ಇದರಲ್ಲಿ 46 ಕೋಟಿ ರು. ಅಕ್ರಮ ನಡೆದಿತ್ತು ಎನ್ನಲಾಗಿದೆ. ಆಗ ಅಬ್ದುಲ್ಲಾ ಜೆಕೆಸಿಎ ಅಧ್ಯಕ್ಷರಾಗಿದ್ದರು. ಹೀಗಾಗಿ ಅವರ ವಿಚಾರಣೆಗೆ ಸಮನ್ಸ್‌ ಜಾರಿ ಮಾಡಲಾಗಿದೆ. ಇದೇ ಪ್ರಕರಣದಲ್ಲಿ ಈ ಹಿಂದೆ 2020ರಲ್ಲಿ ಅಬ್ದುಲ್ಲಾ ಅವರ 11.86 ಕೋಟಿ ರು. ಮೌಲ್ಯದ ಆಸ್ತಿಯನ್ನು ಇ.ಡಿ. ಜಪ್ತಿ ಮಾಡಿತ್ತು.

‘ಸಮನ್ಸ್‌ ಹೊಸತೇನಲ್ಲ. ಇದು ಭಾರತದಲ್ಲಿ ಎಲ್ಲಾ ವಿಪಕ್ಷಗಳಿಗೂ ಸಾಮಾನ್ಯವಾದುದಾಗಿದೆ. ಅವರು ಇ.ಡಿ.ಯೊಂದಿಗೆ ವಿಚಾರಣೆಯಲ್ಲಿ ಭಾಗಿಯಾಗಲಿದ್ದಾರೆ’ ಎಂದು ಅಬ್ದುಲ್ಲಾ ಅವರ ಪಕ್ಷ ನ್ಯಾಷನಲ್‌ ಕಾನ್ಫರೆನ್ಸ್‌ ಟ್ವೀಟ್‌ ಮಾಡಿದೆ.

ಕಾಶ್ಮೀರದಲ್ಲಿ 370ನೇ ವಿಧಿ ಮರುಜಾರಿಗೆ ರೈತ ಪ್ರತಿಭಟನೆ ರೀತಿ ಹೋರಾಟ ಮಾಡಬೇಕು ಎಂದು ಇದೇ ಫಾರೂಖ್ ಅಬ್ದುಲ್ಲಾ ಕಳೆದ ವರ್ಷ ಕರೆ ನೀಡಿದ್ದರು.  ಕೃಷಿ ಕಾಯ್ದೆ ವಿರುದ್ಧ ಹೋರಾಡಿ ರೈತಲು ಬಲಿದಾನ ನೀಡಿದ ರೀತಿಯಲ್ಲೇ, ಸಂವಿಧಾನದ 370ನೇ ಮರುಜಾರಿಗಾಗಿ ಕಾಶ್ಮೀರಿಗಳು ಬಲಿದಾನ ಮಾಡಬೇಕಿದೆ ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ಅಧ್ಯಕ್ಷ ಫಾರುಖ್‌ ಅಬ್ದುಲ್ಲಾ ವಿವಾದಿತ ಕರೆ ನೀಡಿದ್ದಾರೆ. ಪಕ್ಷದ ಸಂಸ್ಥಾಪಕ ಶೇಖ್‌ ಮೊಹಮ್ಮದ್‌ ಅಬ್ದುಲ್ಲಾ ಅವರ 116ನೇ ಜಯಂತಿ ಕಾರ್ಯಕ್ರಮದಲ್ಲಿ ಪಕ್ಷದ ಯುವ ಘಟಕವನ್ನುದ್ದೇಶಿಸಿ ಅವರು ಮಾತನಾಡಿದರು. ಈ ವೇಳೆ ರಾಜ್ಯಕ್ಕೆ ಸಂವಿಧಾನದ 370ನೇ ವಿಧಿ ಮತ್ತು 35(ಎ) ಅನುಚ್ಛೇದವನ್ನು ಮರುಸ್ಥಾಪಿಸಲು ನಾವು ಭರವಸೆ ನೀಡಿದ್ದೇವೆ. ಇದಕ್ಕಾಗಿ ನಾವು ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..