ಕೇರಳ ಗಡಿಯಲ್ಲಿ ಸಿಕ್ಕಿಬಿದ್ದ ಬೆಂಗಳೂರಿನಿಂದ ಬರ್ತಿದ್ದ ಯುವಕ: ಬ್ಯಾಗ್‌ನಲ್ಲಿತ್ತು 30 ಲಕ್ಷ ನಗದು

Published : Jan 25, 2026, 12:30 PM IST
Rs 30 Lakh Money Kerala

ಸಾರಾಂಶ

ಕೇರಳ-ಕರ್ನಾಟಕ ಗಡಿಯ ತೋಲ್ಪೆಟ್ಟಿಯಲ್ಲಿ, ದಾಖಲೆಗಳಿಲ್ಲದೆ ಬಸ್‌ನಲ್ಲಿ ಸಾಗಿಸುತ್ತಿದ್ದ ₹30.93 ಲಕ್ಷ ಸಮೇತ ಕೋಯಿಕ್ಕೋಡ್‌ನ ಯುವಕನನ್ನು ಅಬಕಾರಿ ಇಲಾಖೆ ಬಂಧಿಸಿದೆ. ಬೆಂಗಳೂರಿನಿಂದ ಕೋಯಿಕ್ಕೋಡ್‌ಗೆ ತೆರಳುತ್ತಿದ್ದ ಈತನನ್ನು ತಪಾಸಣೆ ವೇಳೆ ಹಿಡಿಯಲಾಗಿದೆ.

ಮಾನಂತವಾಡಿ: ವಯನಾಡಿನ ಕೇರಳ-ಕರ್ನಾಟಕ ಗಡಿಯ ತೋಲ್ಪೆಟ್ಟಿಯಲ್ಲಿ ದಾಖಲೆಗಳಿಲ್ಲದೆ ಲಕ್ಷಾಂತರ ರೂಪಾಯಿ ಸಾಗಿಸುತ್ತಿದ್ದ ಯುವಕನೊಬ್ಬ ಅಬಕಾರಿ ಇಲಾಖೆ ತಂಡದ ಬಲೆಗೆ ಬಿದ್ದಿದ್ದಾನೆ. ಕೋಯಿಕ್ಕೋಡ್‌ನ ಕೊಡುವಳ್ಳಿಯ ಮೊಹಮ್ಮದ್ ಸಾಮಿರ್ ಬಂಧಿತ ಯುವಕ. ಈತ 30,93,900 ರೂಪಾಯಿ ಸಾಗಿಸುತ್ತಿದ್ದ. ಬೆಂಗಳೂರಿನಿಂದ ಕೋಯಿಕ್ಕೋಡ್‌ಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಈತ ಪ್ರಯಾಣಿಸುತ್ತಿದ್ದನು.

ಅಧಿಕಾರಿಗಳನ್ನು ನೋಡುತ್ತಿದ್ದಂತೆ ಭಯಗೊಂಡ ಯುವಕ!

ಬಸ್ ಬೆಳಗಿನ ಜಾವ ಸುಮಾರು ಮೂರು ಗಂಟೆಗೆ ಚೆಕ್‌ಪೋಸ್ಟ್‌ಗೆ ಬಂದಿತ್ತು. ಅಬಕಾರಿ ಇಲಾಖೆ ತಂಡ ಮಾದಕವಸ್ತು ಸಾಗಾಟದ ಬಗ್ಗೆ ತಪಾಸಣೆ ನಡೆಸುತ್ತಿದ್ದಾಗ ಯುವಕ ಗಾಬರಿಗೊಂಡಿದ್ದಾನೆ. ಅನುಮಾನದ ಮೇಲೆ ಆತನನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಿದಾಗ ನೋಟಿನ ಕಂತೆಗಳು ಪತ್ತೆಯಾಗಿವೆ.

ಹಣವನ್ನು ಯಾರಿಗೆ, ಎಲ್ಲಿಗೆ ಕೊಂಡೊಯ್ಯಲಾಗುತ್ತಿದೆ ಎಂಬುದಕ್ಕೆ ದಾಖಲೆಗಳನ್ನು ತೋರಿಸಲು ಕೇಳಿದಾಗ, ಆತನ ಬಳಿ ಯಾವುದೇ ದಾಖಲೆ ಇರಲಿಲ್ಲ. ಹೀಗಾಗಿ, ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡು ಎಣಿಕೆ ಮಾಡಿದರು. ಯುವಕನನ್ನೂ ವಶಕ್ಕೆ ಪಡೆಯಲಾಗಿದೆ. 

ಇದನ್ನೂ ಓದಿ: ಬಿಎಂಎಸ್ ಎಂಜಿನಿಯರಿಂಗ್‌ ಕಾಲೇಜಲ್ಲಿ ನಡೆದ ಗೋಲ್ಮಾಲ್‌, ಖಾಸಗಿ ಸಂಸ್ಥೆ ಟ್ರಸ್ಟಿಗಳ ₹19 ಕೋಟಿ ಆಸ್ತಿ ಜಪ್ತಿ

ಆದಾಯ ತೆರಿಗೆ ಇಲಾಖೆಗೆ ಹಣ ಹಸ್ತಾಂತರ

ರೇಂಜ್ ಇನ್ಸ್‌ಪೆಕ್ಟರ್ ಕೆ. ಶಶಿ, ಪ್ರಿವೆಂಟಿವ್ ಆಫೀಸರ್‌ಗಳಾದ ಕೆ. ಜಾನಿ, ವಿ. ಬಾಬು, ಸಿಕೆ. ರಂಜಿತ್, ಮತ್ತು ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಪಿಎಸ್. ಸುಶಾದ್, ಕೆ. ರಶೀದ್ ಅವರು ಬಸ್‌ನೊಳಗೆ ತಪಾಸಣೆ ನಡೆಸಿದರು. ವಶಪಡಿಸಿಕೊಂಡ ಹಣವನ್ನು ಮುಂದಿನ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ಅಬಕಾರಿ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಚಿನ್ನದ ಸರವನ್ನು ನಂಗೇ ಕೊಟ್ಟಿದ್ದು ಅಂದ್ಕೊಂಡುಬಿಟ್ಟಿದ್ದೆ, ಆದ್ರೆ ಆಗಿದ್ದೇ ಬೇರೆ: ಗಿಲ್ಲಿ ನಟನ ಬೇಸರ ನುಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬ್ಯಾಂಕ್ ಉದ್ಯೋಗ ಹುಡುಕುತ್ತಿರುವವರಿಗೆ ನಬಾರ್ಡ್ ಭರ್ಜರಿ ನೇಮಕಾತಿ: ಪದವೀಧರರ ಭವಿಷ್ಯದ ಬಾಗಿಲು ತೆರೆಯಲಿದೆ!
10 ವರ್ಷ ಹಳೆಯದಾದ 30 ಟನ್‌ ತೂಕವಿರುವ ಕಬ್ಬಿಣದ ಸೇತುವೆಯೇ ರಾತ್ರೋರಾತ್ರಿ ಕಳ್ಳತನ