Bihar Polls: ಸೋಲು ಸಹಿಸದಾದ ಜನನಾಯಕ, ಯುವಕನಿಗೆ ಥಳಿಸಿ ತನ್ನ ಉಗುಳು ಬಲವಂತವಾಗಿ ತಿನ್ನಿಸಿದ!

Published : Dec 13, 2021, 12:12 PM IST
Bihar Polls: ಸೋಲು ಸಹಿಸದಾದ ಜನನಾಯಕ, ಯುವಕನಿಗೆ ಥಳಿಸಿ ತನ್ನ ಉಗುಳು ಬಲವಂತವಾಗಿ ತಿನ್ನಿಸಿದ!

ಸಾರಾಂಶ

* ಬಿಹಾರದಲ್ಲೊಂದು ಅಮಾನವೀಯ ಘಟನೆ * ಸೋಲು ಸಹಿಸದ ಜನ ನಾಯಕ, ದಲಿತರ ಮೇಲೆ ದೌರ್ಜನ್ಯ * ಸೋತ ನಾಯಕನ ಪುಂಡಾಟ ಕ್ಯಾಮೆರಾದಲ್ಲಿ ಸೆರೆ

ಪಾಟ್ನಾ(ಡಿ.13): ಮಾನವೀಯತೆ ಮತ್ತು ಪ್ರಜಾಪ್ರಭುತ್ವವನ್ನು ನಾಚಿಸುವಂತಹ ಘಟನೆಯೊಂದು ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಪ್ರಮುಖ ಅಭ್ಯರ್ಥಿಯೊಬ್ಬರು ಚುನಾವಣಾ ಪೂರ್ವದಲ್ಲಿ ಮತ ಪಡೆಯಲು ಕ್ಷೇತ್ರದ ಅಭಿವೃದ್ಧಿ ಹಾಗೂ ಸಮಾಜ ಸೇವೆ ಮಾಡುವುದಾಗಿ ಮತದಾರರಿಗೆ ಭರವಸೆ ನೀಡಿದರು. ಅಷ್ಟೇ ಅಲ್ಲದೇ, ಮತ ಪಡೆಯಲು ಹಣವನ್ನೂ ಹಂಚಿದ್ದರು. ಆದರೆ ಸೋತಾಗ ಅದೇ ಮತದಾರರ ಮೇಲೆ ದೌರ್ಜನ್ಯವೆಸಗಿದ್ದಾರೆ, ಸಮಾಧಾನವಾಗದಿದ್ದಾಗ ನಡುರಸ್ತೆಯಲ್ಲೇ ತಾನು ಉಗುಳಿದ್ದನ್ನು ತಿನ್ನುವಂತೆ ಒತ್ತಾಯಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ವಾಸ್ತವವಾಗಿ, ಈ ನಾಚಿಕೆಗೇಡಿನ ಘಟನೆ ನಡೆದದ್ದು ಔರಂಗಾಬಾದ್ ಜಿಲ್ಲೆಯ ಕುಟುಂಬ ಬ್ಲಾಕ್‌ನಲ್ಲಿ. ಮುಖ್ಯ ಅಭ್ಯರ್ಥಿ ಬಲವಂತ್ ಕುಮಾರ್ ಅವರು ಸೋಲಿನ ಬಳಿಕ ಇಬ್ಬರು ಯುವಕರಾದ ಅನಿಲ್ ಕುಮಾರ್ ಮತ್ತು ಮಂಜೀತ್ ಅವರ ಮುಂದೆ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ. ಇದಾದ ಬಳಿಕ ಯುವಕನೊಬ್ಬನಿಗೆ ತಾನು ಉಗುಳಿದ್ದನ್ನು ತಿನ್ನಿಸಿದ್ದಾನೆ. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋ ಖರಂತಿ ತೊಲೆ ಭೂಯಾನ್ ಬಿಘಾ ಗ್ರಾಮದಲ್ಲಿ ನಡೆದ ಘಟನೆಯದ್ದೆನ್ನಲಾಗಿದೆ

ಕೃತ್ಯದ ನಂತರ ಪೊಲೀಸರು ಕಾರ್ಯಪ್ರವೃತ್ತ

ವಿಡಿಯೋ ವೈರಲ್ ಆದ ತಕ್ಷಣ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಔರಂಗಾಬಾದ್ ಎಸ್ಪಿ ಕಾಂತೇಶ್ ಕುಮಾರ್ ಮಿಶ್ರಾ ಸೂಚನೆ ಮೇರೆಗೆ ಅಂಬಾ ಪೊಲೀಸರು ಆರೋಪಿ ಬಲ್ವಂತ್ ಸಿಂಗ್ ನನ್ನು ಬಂಧಿಸಿದ್ದಾರೆ. ಇದೇ ವೇಳೆ ಸಂತ್ರಸ್ತ ಯುವಕರ ವಿಚಾರಣೆ ನಡೆಸಲಾಗುತ್ತಿದೆ.

ಆರೋಪಿ ಹೇಳೋದೇ ಬೇರೆ ಕಥೆ

ಮತ್ತೊಂದೆಡೆ ಆರೋಪಿ ಬಲವಂತ್ ತನ್ನ ಪರ ಹೇಳಿಕೆ ನೀಡಿ ಯುವಕರಿಬ್ಬರೂ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದರು ಎಂದು ಸ್ಪಷ್ಟಪಡಿಸಿದ್ದಾರೆ. ಗ್ರಾಮದ ಜನರು ತಮ್ಮ ದೂರುಗಳೊಂದಿಗೆ ನನ್ನ ಬಳಿಗೆ ಬಂದಿದ್ದರು, ಆದ್ದರಿಂದ ಈ ಜನರ ಅಮಲು ತೊಡೆದುಹಾಕಲು ಧರಣಿಗಳನ್ನು ಆಯೋಜಿಸಲಾಗಿದೆ. ಏಕೆಂದರೆ ಈ ಜನರು ಪ್ರತಿದಿನ ಮದ್ಯ ಸೇವಿಸುತ್ತಾರೆ ಮತ್ತು ಜನರನ್ನು ನಿಂದಿಸುತ್ತಾರೆ. ಆದರೆ, ವೈರಲ್ ಆಗಿರುವ ವಿಡಿಯೋದಲ್ಲಿ ಮಾತ್ರ ಆರೋಪಿಯ ವರ್ತನೆ ಸ್[ಪಷ್ಟವಾಘಿ ಗೋಚರಿಸುತ್ತದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..