
ಚಿತ್ತೂರು(ಫೆ.22): ಆಂಧ್ರಪ್ರದೇಶದಲ್ಲಿ ಪಂಚಾಯತ್ ಚುನಾವಣೆ ಘೋಷಣೆ ಆಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಸರ್ಕಾರ ಜನಕ್ಕೆ ತಿರುಪತಿಯ ಪ್ರಸಾದದ ಲಡ್ಡುಗಳನ್ನು ಆಮಿಷದ ರೂಪದಲ್ಲಿ ವಿತರಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ಗೆಲುವಿಗಾಗಿ ಜಗನ್ ಸರ್ಕಾರವು ಇಡೀ ಆಡಳಿತ ಯಂತ್ರವನ್ನೇ ದುರುಪಯೋಗಪಡಿಸಿಕೊಳ್ಳುತ್ತಿದೆ. ಮತದಾರರಿಗೆ ಬೇಕಾಬಿಟ್ಟಿಯಾಗಿ ತಿರುಪತಿ ಲಡ್ಡು ಹಂಚುತ್ತಿದೆ ಎಂದು ವಿಪಕ್ಷ ತೆಲುಗುದೇಶಂ ದೂರಿದೆ.
ಪಡಿತರ ಪೂರೈಸುವ ವಾಹನಗಳಲ್ಲೇ ಲಡ್ಡುಗಳನ್ನು ವಿತರಿಸಲಾಗುತ್ತಿದ್ದು, ವೈಎಸ್ಆರ್ಪಿ ಪಕ್ಷಕ್ಕೆ ಮತ ಹಾಕುವಂತೆ ಸೂಚಿಸಲಾಗುತ್ತಿದೆ ಎಂದು ಟಿಡಿಪಿ ದೂರಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ