ಜಮ್ಮು ಕಾಶ್ಮೀರದ ಝಡ್‌ ಮೇಡ್‌ ಸುರಂಗಕ್ಕೆ ಇಂದು ಮೋದಿ ಚಾಲನೆ

Published : Jan 13, 2025, 09:04 AM IST
 ಜಮ್ಮು ಕಾಶ್ಮೀರದ ಝಡ್‌ ಮೇಡ್‌ ಸುರಂಗಕ್ಕೆ ಇಂದು ಮೋದಿ ಚಾಲನೆ

ಸಾರಾಂಶ

ಜಮ್ಮು ಕಾಶ್ಮೀರದ ಶ್ರೀನಗರ ಮತ್ತು ಸೋನ್‌ಮಾರ್ಗ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿರುವ 6.5 ಕಿ.ಮೀ ಉದ್ದದ ಝಡ್‌ ಮೇಡ್‌ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಸುರಂಗವು ಸೋನ್‌ಮಾರ್ಗ್‌ನಿಂದ ಗಂದರ್ಬಲ್‌ ಜಿಲ್ಲೆಗೆ ಸಂಪರ್ಕ ಕಲ್ಪಿಸಲಿದ್ದು, ಸರ್ವಋತು ಸಂಪರ್ಕ ಸಾಧ್ಯವಾಗಲಿದೆ.

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರ ಮತ್ತು ಸೋನ್‌ಮಾರ್ಗ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿರುವ 6.5 ಕಿ.ಮೀ ಉದ್ದದ ಝಡ್‌ ಮೇಡ್‌ ಸುರಂಗವನ್ನು ಪ್ರಧಾನಿ ನರೇಂದ್ರ ಸೋಮವಾರ ಉದ್ಘಾಟಿಸಲಿದ್ದಾರೆ. ಸೋನ್‌ಮಾರ್ಗ್‌ನಿಂದ ಗಂದರ್ಬಲ್‌ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ದ್ವಿಪಥದ ಈ ಮಾರ್ಗ ಝಡ್‌ ಅಕ್ಷರದ ಮಾದರಿಯಲ್ಲಿ ಇರುವ ಕಾರಣ ಅದನ್ನುಝಡ್‌ ಮೇಡ್‌ ಸುರಂಗ ಎಂದು ಕರೆಯಲಾಗಿದೆ. ಈ ಮೊದಲು ಈ ಎರಡು ನಗರಗಳ ನಡುವೆ ಕಡಿದಾದ ರಸ್ತೆಯಲ್ಲಿ ಕೇವಲ 30 ಕಿ.ಮೀ ಮಾರ್ಗದಲ್ಲಿ ವಾಹನ ಸಂಚರಿಸಬಹುದಿತ್ತು. ಜೊತೆಗೆ ಮಳೆಗಾಲ, ಹಿಮಪಾತದ ವೇಳೆ ಈ ಮಾರ್ಗ ಕಡಿತವಾಗುತ್ತಿದ್ದ ಸಾಧ್ಯತೆ ಹೆಚ್ಚುತ್ತಿತ್ತು.

ಆದರೆ ಸುರಂಗ ಮಾರ್ಗದ ನಿರ್ಮಾಣದ ಕಾರಣ ಗಂಟೆಗೆ 70 ಕಿ.ಮೀ ವೇಗದಲ್ಲಿ ವಾಹನ ಸಂಚರಿಸಬಹುದು. ಜೊತೆಗೆ ಎರಡು ಪ್ರದೇಶಗಳ ನಡುವೆ ಸರ್ವಋತು ಸಂಪರ್ಕ ಸಾಧ್ಯವಾಗಲಿದೆ. 

ಸುರಂಗದ ಮಹತ್ವ: 2,400 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ 6.5 ಕಿ.ಮೀ. ಉದ್ದದ ಝಡ್‌ ಮೋಡ್‌ ಸುರಂಗದಲ್ಲಿ ಗಂಟೆಗೆ 70 ಕಿ.ಮೀ. ವೇಗದಲ್ಲಿ ಚಲಿಸುವ ಅವಕಾಶವಿದ್ದು, ಇದು ಶ್ರೀನಗರ ಹಾಗೂ ಸೋನ್‌ಮಾರ್ಗ್‌ ನಡುವಿನ ಸಂಚಾರ ಸಮಯವನ್ನು ತಗ್ಗಿಸಲಿದೆ. ಸುರಂಗವು ಪ್ರತಿ ಗಂಟೆಗೆ 1000 ವಾಹನಗಳನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ. ಎಲ್ಲಾ ಹವಾಮಾನಗಳಲ್ಲಿಯೂ ಸಂಚಾರಕ್ಕೆ ಯೋಗ್ಯವಾಗಿರುವ ಈ ಸುರಂಗವು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೂ ಸಂಪರ್ಕ ಕಲ್ಪಿಸಲಿದೆ. ಜತೆಗೆ, ಇದರಿಂದ ಸೇನೆಯ ಓಡಾಟಕ್ಕೂ ಅನುಕೂಲವಾಗಲಿದೆ.

ಶ್ರೀನಗರದಲ್ಲಿ 50 ವರ್ಷದಲ್ಲೇ ಅತ್ಯಂತ ಕನಿಷ್ಠ ತಾಪಮಾನ: ಹೆಪ್ಪುಗಟ್ಟಿದ ದಾಲ್ ಸರೋವರದ ಮೇಲ್ಮೈ

ಇಂಜಿನಿಯರಿಂಗ್ ಅದ್ಭುತ ವಿಶ್ವದ ಅತೀ ಎತ್ತರದ ಚೀನಾಬ್ ರೈಲ್ವೆ ಬ್ರಿಡ್ಜ್ ಶೀಘ್ರದಲ್ಲೇ ಸಂಚಾರಕ್ಕೆ ಮುಕ್ತ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ