ದುಬೈನಲ್ಲಿ RCB ತಂಡ ಸೇರಿಕೊಂಡ ABD ಸೇರಿದಂತೆ ಸೌತ್ ಆಫ್ರಿಕಾ ಕ್ರಿಕೆಟರ್ಸ್!

Published : Aug 22, 2020, 03:11 PM IST
ದುಬೈನಲ್ಲಿ RCB ತಂಡ ಸೇರಿಕೊಂಡ  ABD ಸೇರಿದಂತೆ ಸೌತ್ ಆಫ್ರಿಕಾ ಕ್ರಿಕೆಟರ್ಸ್!

ಸಾರಾಂಶ

IPL ಟೂರ್ನಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ದುಬೈನಲ್ಲಿ ಬೀಡು ಬಿಟ್ಟಿದೆ. ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಭಾರತೀಯ ಕ್ರಿಕೆಟಿಗರು ನೇರವಾಗಿ ದುಬೈ ತೆರಳಿದ್ದರೆ, RCB ತಂಡ ವಿದೇಶಿ ಕ್ರಿಕೆಟಿಗರು ತಮ್ಮ ತಮ್ಮ ದೇಶಗಳಿಂದ ನೇರವಾಗಿ ದುಬೈಗೆ ಆಗಮಿಸುತ್ತಿದ್ದಾರೆ. ಇದೀಗ ಅಭಿಮಾನಿಗಳ ನೆಚ್ಚಿನ ಕ್ರಿಕೆಟಿಗ AB ಡಿವಿಲಿಯರ್ಸ್ ಹಾಗೂ ಡೇಲ್ ಸ್ಟೇನ್ RCB ತಂಡ ಸೇರಿಕೊಂಡಿದ್ದಾರೆ.

ದುಬೈ(ಆ.22):  IPL ಟೂರ್ನಿ ರಂಗು ಕಳೆಗಟ್ಟಿದೆ. ಭಾರತದಲ್ಲಿ 13ನೇ ಆವೃತ್ತಿ IPL ಟೂರ್ನಿ ನಡೆಯದಿದ್ದರೂ ಭಾರತೀಯರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕೊರೋನಾ ವೈರಸ್ ಕಾರಣ ಸೆಪ್ಟೆಂಬರ್ 19 ರಿಂದ ದುಬೈನಲ್ಲಿ ಆರಂಭವಾಗುತ್ತಿರುವ ಐಪಿಎಲ್ ಟೂರ್ನಿಗಾಗಿ ಇದೀಗ 8 ತಂಡಗಳು ದುಬೈಗೆ ತೆರಳಿದೆ. RCB ಕೂಡ ದುಬೈನ ಹೋಟೆಲ್ ಒಂದರಲ್ಲಿ ಕ್ವಾರಂಟೈನ್ ಆಗಿದೆ. ಇದೀಗ ದುಬೈನಲ್ಲಿರುವ RCB ತಂಡದ ಜೊತೆಗೆ ಫೇವರಿಟ್ ಕ್ರಿಕೆಟಿಗರಾದ ಎಬಿ ಡಿವಿಲಿಯರ್ಸ್ ಹಾಗೂ ,ಡೇಲ್ ಸ್ಟೇನ್ ಹಾಗೂ ಕ್ರಿಸ್ ಮಾರಿಸ್ ಸೇರಿಕೊಂಡಿದ್ದಾರೆ.

ಪ್ರತ್ಯೇಕ ವಿಮಾನದಲ್ಲಿ ದುಬೈಗೆ ಹಾರಿದ ಕೊಹ್ಲಿ: RCB ತಂಡ ಸೇರಿಕೊಂಡ ನಾಯಕ!

ಶುಕ್ರವಾರ(ಆ.21) ನಾಯಕ ವಿರಾಟ್ ಕೊಹ್ಲಿ ದುಬೈ ತಲುಪಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಇದೀಗ ಸೌತ್ ಆಫ್ರಿಕಾದಿಂದ ಆಗಮಿಸಿದ ಎಬಿ ಡಿವಿಲಿಯರ್ಸ್, ಡೇಲ್ ಸ್ಟೇನ್ ಹಾಗೂ ಕ್ರಿಸ್ ಮಾರಿಸ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. 7 ದಿನಗಳ ಕಾಲ ಐಪಿಎಲ್ ತಂಡದ ಕ್ರಿಕೆಟಿಗರು ಕ್ವಾರಂಟೈನ್‌ಗೆ ಒಳಪಡಲಿದ್ದಾರೆ.

ನಾಯಕನಿಲ್ಲದೇ ದುಬೈ ವಿಮಾನವೇರಿದ RCB ಪಡೆ..! ಈಗ ಶುರುವಾಯ್ತು ಧೋನಿ-ಕೊಹ್ಲಿ ಅಭಿಮಾನಿಗಳ ಕಿತ್ತಾಟ

ಹೊಸ ಮಾರ್ಗಸೂಚಿ, ನಿಯಮ ಹಾಗೂ ಮುಂಜಾಗ್ರತೆಗಳಿಂದ ಹಿಂದಿನ ಐಪಿಎಲ್ ಟೂರ್ನಿಗಳಲ್ಲಿ ಪ್ರಯಾಣ ಮಾಡಿದಂತೆ ಸಾಧ್ಯವಿಲ್ಲ. ಕೊರೋನಾ ವೈರಸ್ ಕಾರಣ ಎಚ್ಚರ ವಹಿಸಬೇಕಿದೆ. ಸದ್ಯ ಐಪಿಲ್ ಟೂರ್ನಿಗಾಗಿ ದುಬೈಗೆ ಆಗಮಿಸಿರುವುದು ಸಂತಸ ತಂದಿದೆ. ಉತ್ತಮ ಟೂರ್ನಿಯನ್ನು ಎದುರನೋಡುತ್ತಿದ್ದೇನೆ. ಜೊತೆಗೆ ತಂಡ ಸೇರಿಕೊಂಡಿರುವ ಹೊಸ ಮುಖಗಳನ್ನು ನೋಡಲು, ಅವರ ಜೊತೆ ಒಟ್ಟಾಗಿ ಆಡಲು ಉತ್ಸುಕನಾಗಿದ್ದೇನೆ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

ತಂಡದ ವೇಗಿ ಡೇಲ್ ಸ್ಟೇನ್ ಕೂಡ ಮತ್ತೆ ಆರ್‌ಸಿಬಿ ಸೇರಿಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ತೀವ್ರ ಉಷ್ಣತೆ ಇದೆ. ಈ ಬಿಸಿ ವಾತಾವರಣದಲ್ಲಿ ಪ್ರದರ್ಶನ ಸವಾಲಿನ ಕೆಲಸ ಎಂದಿದ್ದಾರೆ.

ಭಾರತದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಬಿಸಿಸಿಐ, ಐಪಿಎಲ್ ಟೂರ್ನಿಯನ್ನು ದುಬೈಗೆ ಸ್ಥಳಾಂತರ ಮಾಡಿದೆ. ಸೆಪ್ಟೆಂಬರ್ 19 ರಿಂದ ಟೂರ್ನಿ ಆರಂಭಗೊಳ್ಳಲಿದೆ. ನವೆಂಬರ್ 10 ರಂದು ಫೈನಲ್ ಪಂದ್ಯ ನಡೆಯಲಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026 ಐಪಿಎಲ್ ಹರಾಜಿನಿಂದ ಹಿಂದೆ ಸರಿದ ಮತ್ತಿಬ್ಬರು ಸ್ಟಾರ್ ಆಲ್ರೌಂಡರ್ಸ್!
IPL 2026 ಆಟಗಾರರ ಹರಾಜಿನ ಲಿಸ್ಟ್‌ ಫೈನಲ್: 2 ಕೋಟಿ ಮೂಲ ಬೆಲೆ ಹೊಂದಿರುವ ಆಟಗಾರ ಪಟ್ಟಿ ಔಟ್, ಕೇವಲ 2 ಭಾರತೀಯರಿಗೆ ಸ್ಥಾನ!