
ನವದೆಹಲಿ(ಜೂ.16): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ವರ್ಷ ಐಪಿಎಲ್ ಟೂರ್ನಿಯನ್ನು ನಡೆಸಿಯೇ ತೀರಲು ನಿರ್ಧರಿಸಿದೆ. ಇದೇ ಸೆಪ್ಟೆಂಬರ್ 26ರಿಂದ ನವೆಂಬರ್ 08ರ ವರೆಗೂ ಟೂರ್ನಿ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.
ಈ ಅವಧಿಯಲ್ಲಿ ದಿನಕ್ಕೆ 2 ಪಂದ್ಯಗಳಂತೆ 60 ಪಂದ್ಯಗಳನ್ನು ನಡೆಸಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಸೆಪ್ಟೆಂಬರ್ ವೇಳೆಗೆ ದೇಶದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ಟೂರ್ನಿಯನ್ನು ಸ್ಥಳಾಂತರಗೊಳಿಸಲು ಸಹ ಸಿದ್ಧತೆ ಆರಂಭಿಸಲಾಗಿದೆ ಎನ್ನಲಾಗಿದೆ. ಈ ಬಾರಿ ಪ್ಲೇ-ಆಫ್ ಮಾದರಿ ಬದಲಿಗೆ ಅಗ್ರ 4 ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ ಎಂದು ವರದಿಯಲ್ಲಿ ಹೇಳಲಾಗಿದೆ.
ಸೆಪ್ಟೆಂಬರ್ ಅಂತ್ಯದ ವೇಳೆಗೆ ಮಾನ್ಸೂನ್ ಮುಗಿಯಲಿರುವುದರಿಂದ ಹೆಚ್ಚಿನ ಪಂದ್ಯಾವಳಿಗಳನ್ನು ದಕ್ಷಿಣ ಭಾರತದಲ್ಲಿ ಆಯೋಜಿಸಲು ಬಿಸಿಸಿಐ ಚಿಂತನೆ ಮಾಡಿದೆ ಎನ್ನಲಾಗಿದೆ. ಹೀಗಾದಲ್ಲಿ ಬೆಂಗಳೂರು ಹಾಗೂ ಚೆನ್ನೈನಲ್ಲಿ ಅರ್ಧ ಭಾಗದ ಐಪಿಎಲ್ ನಡೆಯುವ ಸಾಧ್ಯತೆಯಿದೆ. ಇನ್ನು ಮುಂಬೈನಲ್ಲಿ ಪರಿಸ್ಥಿತಿ ಕೈ ಮೀರುತ್ತಿರುವುದರಿಂದ ವಾಂಖೆಡೆ ಮೈದಾನದಲ್ಲಿ ಟೂರ್ನಿ ಆಯೋಜನೆ ಕಷ್ಟಸಾಧ್ಯ ಎನಿಸಿದೆ.
ಕೇವಲ 7 ನಿಮಿಷದಲ್ಲಿ ಭಾರತದ ಕೋಚ್ ಆಗಿದ್ದ ಕರ್ಸ್ಟನ್
ಕೆಲವು ದಿನಗಳ ಹಿಂದಷ್ಟೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಖಾಲಿ ಮೈದಾನದಲ್ಲಾದರೂ ಸರಿ, ಐಪಿಎಲ್ ಈ ವರ್ಷ ನಡಿಸಿಯೇ ಸಿದ್ದ ಎಂದು ಹೇಳಿದ್ದರು. ಇದರ ಜೊತೆಗೆ ಎಲ್ಲಾ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಸಿದ್ದವಾಗಿರುವಂತೆ ಇ-ಮೇಲ್ ಕಳಿಸಿದ್ದರು. ಒಂದು ವೇಳೆ ಈ ವರ್ಷ ಟಿ20 ವಿಶ್ವಕಪ್ ನಡೆಯದೇ ಹೋದರೆ ಐಪಿಎಲ್ ಟೂರ್ನಿ ಆಯೋಜಿಸುವ ಲೆಕ್ಕಾಚಾರ ಹಾಕಿಕೊಂಡಿದೆ ಬಿಸಿಸಿಐ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.