ಕೊರೋನಾ ಎಫೆಕ್ಟ್: 13ನೇ ಆವೃತ್ತಿ ಐಪಿಎಲ್‌ ಮುಂದೂಡಿಕೆ ಖಚಿತ..!

Suvarna News   | Asianet News
Published : Apr 13, 2020, 10:31 AM IST
ಕೊರೋನಾ ಎಫೆಕ್ಟ್: 13ನೇ ಆವೃತ್ತಿ ಐಪಿಎಲ್‌ ಮುಂದೂಡಿಕೆ  ಖಚಿತ..!

ಸಾರಾಂಶ

13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆಯೋಜನೆ ತೂಗೂಯ್ಯಾಲೆಯಲ್ಲಿದೆ. ಹೀಗಿರುವಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂದೂಡುವುದು ಖಚಿತ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ಮುಂಬೈ(ಏ.13): ಕೊರೋನಾದಿಂದಾಗಿ ದೇಶದೆಲ್ಲೆಡೆ ಲಾಕ್‌ಡೌನ್‌ ವಿಸ್ತರಣೆ ಆಗುತ್ತಿರುವುದರಿಂದ 2020ರ 13ನೇ ಆವೃತ್ತಿ ಐಪಿಎಲ್‌ ಟೂರ್ನಿಯನ್ನು ಮತ್ತೆ ಮುಂದೂಡುವ ಸಾಧ್ಯತೆ ದಟ್ಟವಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಕೇಂದ್ರದ ಆದೇಶ ಬಂದ ಬಳಿಕ ಐಪಿಎಲ್‌ ನಡೆಸುವ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎನ್ನಲಾಗಿದೆ. ಮಾ.29ಕ್ಕೆ ಆರಂಭವಾಗಬೇಕಿದ್ದ ಐಪಿಎಲ್‌ ಅನ್ನು ಏ.15ಕ್ಕೆ ಮುಂದೂಡಲಾಗಿತ್ತು. ಇದೀಗ ಲಾಕ್‌ಡೌನ್‌ ವಿಸ್ತರಣೆಯಾಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ಟೂರ್ನಿ ಮತ್ತೆ ಮುಂದಕ್ಕೆ ಹೋಗಲಿದೆ ಎನ್ನಲಾಗಿದೆ.

ಏಪ್ರಿಲ್ 15ರಿಂದ ಐಪಿಎಲ್ ಸಾಧ್ಯವಿಲ್ಲ ಎಂದ ರಾಜೀವ್ ಶುಕ್ಲಾ

ಈ ನಡುವೆ ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿರುವ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ, ಬದುಕೇ ಅತಂತ್ರವಾಗಿರುವ ಈ ಸಂದರ್ಭದಲ್ಲಿ ಕ್ರೀಡೆಯ ಭವಿಷ್ಯವನ್ನು ಹೇಗೆ ನಿರ್ಧರಿಸಲು ಸಾಧ್ಯ ಎಂದಿದ್ದಾರೆ. ಸೋಮವಾರ ಬಿಸಿಸಿಐ ಪದಾಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ನಿರ್ಧರಿಸಲಾಗುವುದು ಎಂದಿದ್ದಾರೆ.

3 ವಾರ, 3 ಮೈದಾನ, ಖಾಲಿ ಕ್ರೀಡಾಂಗಣ; IPL ಆಯೋಜನೆಗೆ ಹೊಸ ಪ್ಲಾನ್!

ಒಟ್ಟಿನಲ್ಲಿ ಕ್ರಿಕೆಟ್ ಮಾತ್ರವಲ್ಲದೇ ಜಗತ್ತಿನಾದ್ಯಂತ ಎಲ್ಲಾ ಕ್ರೀಡಾ ಚಟುವಟಿಕೆಗಳು ಕೊರೋನಾದಿಂದಾಗಿ ಸ್ಥಗಿತಗೊಂಡಿವೆ. ಇನ್ನು ಟೋಕಿಯೋ ಒಲಿಂಪಿಕ್ಸ್‌ ಕೂಡಾ 2021ಕ್ಕೆ ಮುಂದೂಡಲ್ಪಟ್ಟಿದೆ. ಈ ಹಿಂದೆಯೇ ಟೀಂ ಇಂಡಿಯಾ ಉಪನಾಯಕ ಹಾಗೂ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಕೂಡಾ ಜನರ ಪರಿಸ್ಥಿತಿ ಸರಿದಾರಿಗೆ ಬರಲಿ ಆಮೇಲೆ ಐಪಿಎಲ್ ಬಗ್ಗೆ ಆಲೋಚಿಸಿದರಾಯಿತು ಎಂದಿದ್ದರು. 

"

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರ ಐಪಿಎಲ್ ಟೂರ್ನಿಗೂ ಮುನ್ನ ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ ಸುದ್ದಿ! ಮಹತ್ವದ ಅಪ್‌ಡೇಟ್ಸ್ ಹಂಚಿಕೊಂಡ ಬೆಂಗಳೂರು ಫ್ರಾಂಚೈಸಿ
IPL 2026: ರಾಜಸ್ಥಾನ ರಾಯಲ್ಸ್‌ಗೆ ಅಚ್ಚರಿ ನಾಯಕನ ನೇಮಕ; ರವೀಂದ್ರ ಜಡೇಜಾಗೆ ಭಾರೀ ನಿರಾಸೆ