IPL 2020: ಚೆನ್ನೈ ತೊರೆದ CSK ನಾಯಕ MS ಧೋನಿ..!

Suvarna News   | Asianet News
Published : Mar 16, 2020, 12:31 PM IST
IPL 2020: ಚೆನ್ನೈ ತೊರೆದ CSK ನಾಯಕ MS ಧೋನಿ..!

ಸಾರಾಂಶ

ಐಪಿಎಲ್ ಟೂರ್ನಿಯು ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ತವರಿಗೆ ಮರಳಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

ಚೆನ್ನೈ(ಮಾ.16): ಮಾರಕ ಕೊರೋನಾ ವೈರಸ್‌ ಭಾರತದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾ.29ರಿಂದ ಆರಂಭವಾಗಬೇಕಿದ್ದ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯನ್ನು ಏಪ್ರಿಲ್‌ 15ರವರೆಗೆ ಅಮಾನತು ಮಾಡಿದ್ದರಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ಎಂ.ಎಸ್‌. ಧೋನಿ ಚೆನ್ನೈನಿಂದ ರಾಂಚಿಗೆ ತೆರಳಿದ್ದಾರೆ. 

ಐಪಿಎಲ್ ರದ್ದಾದರೂ ಶತಕದ ಸಿಡಿಸಿ ಅಬ್ಬರಿಸಿದ ಧೋನಿ!

ಐಪಿಎಲ್‌ಗಾಗಿ ಮಾ.1ರಿಂದ ಅಭ್ಯಾಸದಲ್ಲಿ ನಿರತರಾಗಿದ್ದ ಧೋನಿ, ಅಭ್ಯಾಸ ಪಂದ್ಯವೊಂದರಲ್ಲಿ ಶತಕ ಸಹ ಸಿಡಿಸಿದ್ದರು. ರಾಂಚಿಗೆ ತೆರಳುವ ಮೊದಲು ಧೋನಿ ಚೆಪಾಕ್‌ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಕಾಲ ಕಳೆದರು. ಆ ವಿಡಿಯೋವನ್ನು ಚೆನ್ನೈ ತಂಡ ತನ್ನ ಅಧಿಕೃತ ಟ್ವೀಟರ್‌ ಖಾತೆಯಲ್ಲಿ ಪ್ರಕಟಿಸಿದ್ದು, ವಿಡಿಯೋ ವೈರಲ್‌ ಆಗಿದೆ. 

ಧೋನಿ ಕ್ರಿಕೆಟ್ ಭವಿಷ್ಯ ನುಡಿದ ಸುನಿಲ್ ಜೋಶಿ..!

ಧೋನಿ ಪಾಲಿಗೆ 2020ರ ಐಪಿಎಲ್‌ ಅತ್ಯಂತ ಮಹತ್ವದಾಗಿದ್ದು, ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರಷ್ಟೇ ಟಿ20 ವಿಶ್ವಕಪ್‌ಗೆ ಆಯ್ಕೆ ಮಾಡಲಾಗುತ್ತದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ಸ್ಪಷ್ಟಪಡಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026 ಐಪಿಎಲ್ ಹರಾಜಿನಿಂದ ಹಿಂದೆ ಸರಿದ ಮತ್ತಿಬ್ಬರು ಸ್ಟಾರ್ ಆಲ್ರೌಂಡರ್ಸ್!
IPL 2026 ಆಟಗಾರರ ಹರಾಜಿನ ಲಿಸ್ಟ್‌ ಫೈನಲ್: 2 ಕೋಟಿ ಮೂಲ ಬೆಲೆ ಹೊಂದಿರುವ ಆಟಗಾರ ಪಟ್ಟಿ ಔಟ್, ಕೇವಲ 2 ಭಾರತೀಯರಿಗೆ ಸ್ಥಾನ!