IPL 2020; ಕ್ರೀಡಾಂಗಣ ಪ್ರವೇಶಿಸಲು ಫ್ಯಾನ್ಸ್‌ಗೆ ಇದೆಯಾ ಅವಕಾಶ? ECB ಪ್ರತಿಕ್ರಿಯೆ !

Published : Aug 22, 2020, 08:56 PM ISTUpdated : Aug 22, 2020, 08:58 PM IST
IPL 2020; ಕ್ರೀಡಾಂಗಣ ಪ್ರವೇಶಿಸಲು ಫ್ಯಾನ್ಸ್‌ಗೆ ಇದೆಯಾ ಅವಕಾಶ? ECB ಪ್ರತಿಕ್ರಿಯೆ !

ಸಾರಾಂಶ

ಕೊರೋನಾ ವೈರಸ್ ಕಾರಣ ಭಾರತದಿಂದ ಐಪಿಎಲ್ ಟೂರ್ನಿಯನ್ನು ದುಬೈಗೆ ಶಿಫ್ಟ್ ಮಾಡಲಾಗಿದೆ. ದುಬೈನಲ್ಲಿ ಕೊರೋನಾ ವೈರಸ್ ನಿಯಂತ್ರಣದಲ್ಲಿದೆ. ಇದರ ನಡುವೆ ಐಪಿಎಲ್ ಟೂರ್ನಿ ಪಂದ್ಯ ವೀಕ್ಷಿಸಲು ಅಭಿಮಾನಿಗಳಿಗೆ ಅವಕಾಶವಿದೆಯಾ? ಈ ಕುತೂಹಲಕ್ಕೆ ಎಮಿರೈಟ್ಸ್ ಕ್ರಿಕೆಟ್ ಬೋರ್ಡ್ ಮಹತ್ವದ ಮಾಹಿತಿ ಬಹಿರಂಗ ಪಡಿಸಿದೆ.

ದುಬೈ(ಆ.22):  13ನೇ ಆವೃತ್ತಿ ಐಪಿಎಲ್ ಟೂರ್ನಿ ಸೆಪ್ಟೆಂಬರ್ 19 ರಿಂದ ದುಬೈನಲ್ಲಿ ಆರಂಭಗೊಳ್ಳುತ್ತಿದೆ. ಕೊರೋನಾ ವೈರಸ್ ಕಾರಣ ಸದ್ಯ ದುಬೈನಲ್ಲಿ ಬೀಡುಬಿಟ್ಟಿರುವ ಕ್ರಿಕೆಟಿಗರು ಕ್ವಾರಂಟೈನ್‌ನಲ್ಲಿದ್ದಾರೆ. ಭಾರತದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಆದರೆ ದುಬೈನಲ್ಲಿ ವೈರಸ್ ನಿಯಂತ್ರಣದಲ್ಲಿದೆ. ಹೀಗಾಗಿ ಐಪಿಎಲ್ ಪಂದ್ಯದ ವೇಳೆ ಅಭಿಮಾನಿಗಳಿಗೆ ಕ್ರೀಡಾಂಗಣ ಪ್ರವೇಶಿಸಲು ಅವಕಾಶವಿದೆಯಾ ಅನ್ನೋ ಹಲವರ ಪ್ರಶ್ನೆಗೆ, ಎಮಿರೈಟ್ಸ್ ಕ್ರಿಕೆಟ್ ಬೋರ್ಡ್(ECB) ಉತ್ತರಿಸಿದೆ.

 ಪ್ರತ್ಯೇಕ ವಿಮಾನದಲ್ಲಿ ದುಬೈಗೆ ಹಾರಿದ ಕೊಹ್ಲಿ: RCB ತಂಡ ಸೇರಿಕೊಂಡ ನಾಯಕ!

ಸದ್ಯ ದುಬೈನಲ್ಲಿ ಕೊರೋನಾ ನಿಯಂತ್ರಣದಲ್ಲಿ. ಐಪಿಎಲ್ ಟೂರ್ನಿ ಆಯೋಜನೆಗೆ ಹಲವು ಮುಂಜಾಗ್ರತ ಕ್ರಮ ಕೈಗೊಂಡಿದ್ದೇವೆ. ಟೂರ್ನಿ ಆರಂಭದ ವೇಳೆ ಕೊರೋನಾ ಪರಿಸ್ಥಿತಿ ಅವಲೋಕರಿಸಲಿದ್ದೇವೆ. ಐಪಿಎಲ್ ಟೂರ್ನಿಯಿಂದ ಕೊರೋನಾ ಹರಡುವಿಕೆ ಅಂಕಿ ಅಂಶ ಪರಿಶೀಲಿಸಲಿದ್ದೇವೆ. ಇದರ ಆಧಾರದಲ್ಲಿ ಅಭಿಮಾನಿಗಳಿಗೆ ಅವಕಾಶ ಮಾಡಿಕೊಡಲಾಗುವುದು.  ಆದರೆ ಕೆಲವೇ ಕೆಲವು ಅಭಿಮಾನಿಗಳ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುವುದು. ಇದಕ್ಕೆ ದುಬೈ ಸರ್ಕಾರದ ಅನುಮತಿ ಅಗತ್ಯ ಎಂದು ECB ಹೇಳಿದೆ.

IPLಗಾಗಿ ದುಬೈಗೆ ಹಾರೋ ಮೊದಲು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗೆ ಅಚ್ಚರಿ ನೀಡಿದ ಧೋನಿ!

ಅಭಿಮಾನಿಗಳ ಪ್ರವೇಶ ಕುರಿತು ಅಧಿಕಾರಿಗಳಿಂದ ನಿರಂತರ ಸಂಪರ್ಕದಲ್ಲಿದ್ದೇವೆ. ಇದಕ್ಕಾಗಿ ಅನುಸರಿಸಬೇಕಾದ ಮಾರ್ಗಸೂಚಿ ಸೇರಿದಂತೆ ಇತರ ಎಲ್ಲಾ ನಿಯಮಗಳನ್ನು ಪಾಲಿಸಲು ECB ಸಿದ್ಧವಿದೆ. ಮುಂದಿನ ತಿಂಗಳು ಈ ಕುರಿತು ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ECB ಹೇಳಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

CSKನೂ ಅಲ್ಲ, KKR ಕೂಡಾ ಅಲ್ಲ ಎರಡೂ ತಂಡ ಬಿಟ್ಟು ಹಾರ್ದಿಕ್ ಪಾಂಡ್ಯ ಈ ತಂಡ ಸೇರಬಹುದು! ಅಚ್ಚರಿ ಭವಿಷ್ಯ ನುಡಿದ ರವಿಚಂದ್ರನ್ ಅಶ್ವಿನ್
ಆ ಒಂದು ಶತಕ ನನ್ನ ವೃತ್ತಿಜೀವನವನ್ನೇ ರೂಪಿಸಿತು; ಆರ್‌ಸಿಬಿ ವಿರುದ್ಧದ ಆಟ ನೆನೆದ 'ಕಿಲ್ಲರ್' ಮಿಲ್ಲರ್