ಐಪಿಎಲ್‌ ತಂಡಕ್ಕೆ ಕೋಚ್‌ ಆಗೋದು ನನ್ನ ಕನಸು; ವಿನೋದ್ ಕಾಂಬ್ಳಿ

Suvarna News   | Asianet News
Published : Nov 24, 2020, 11:32 AM IST
ಐಪಿಎಲ್‌ ತಂಡಕ್ಕೆ ಕೋಚ್‌ ಆಗೋದು ನನ್ನ ಕನಸು; ವಿನೋದ್ ಕಾಂಬ್ಳಿ

ಸಾರಾಂಶ

ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಯಾವುದಾದರೊಂದು ತಂಡಕ್ಕೆ ಬ್ಯಾಟಿಂಗ್ ಕೋಚ್ ಆಗುವ ಇಂಗಿತವನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಮುಂಬೈ(ನ.14): 14ನೇ ಆವೃತ್ತಿ ಐಪಿಎಲ್‌ ಟೂರ್ನಿಯಲ್ಲಿ ತಂಡವೊಂದಕ್ಕೆ ಬ್ಯಾಟಿಂಗ್‌ ಕೋಚ್‌ ಆಗಿ ಕಾರ‍್ಯನಿರ್ವಹಿಸುವ ಇಚ್ಛೆ ಇರುವುದಾಗಿ ಟೀಂ ಇಂಡಿಯಾ ಮಾಜಿ ಆಟಗಾರ ವಿನೋದ್‌ ಕಾಂಬ್ಳಿ ಹೇಳಿದ್ದಾರೆ. 

ಯಾವುದಾದರೂ ತಂಡವೊಂದಕ್ಕೆ ಬ್ಯಾಟಿಂಗ್‌ ಸಲಹೆಗಾರನಾಗಲು ನಾನು ಲಭ್ಯವಿದ್ದೇನೆ. ಗಾಯಗೊಂಡಿದ್ದ ಕಾರಣದಿಂದ 2008ರ ಮೊದಲ ಆವೃತ್ತಿಯ ಐಪಿಎಲ್‌ನಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಆ ಬಳಿಕ ಮುಂಬೈ ರಣಜಿ ತಂಡದಿಂದ ಹೊರಬಿದ್ದು, ನಂತರ ನಿವೃತ್ತಿಯಾದೆ. ನನ್ನ ಎಡಗಾಲಿಗೆ ಕಬ್ಬಿಣದ ರಾಡ್‌ನ್ನು ಹಾಕಲಾಗಿದೆ. ಐಪಿಎಲ್‌ನಲ್ಲಿ ತಂಡವೊಂದಕ್ಕೆ ಬ್ಯಾಟಿಂಗ್‌ ಕೋಚ್‌ ಆಗುವುದು ನನ್ನ ಕನಸು ಎಂದು ಕಾಂಬ್ಳಿ ಹೇಳಿದ್ದಾರೆ. 

13ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ನಾನು ಅತಿ ಹತ್ತಿರದಿಂದ ಗಮನಿಸಿದ್ದೇನೆ. ಯುಎಇನಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಎಲ್ಲಾ ಲೆಗ್‌ಸ್ಪಿನ್ನರ್‌ಗಳು ಬಹುತೇಕ ಗೂಗ್ಲಿ ಎಸೆತಗಳನ್ನು ಹಾಕಿದ್ದಾರೆ. ಸಾಮಾನ್ಯವಾಗಿ ಗೂಗ್ಲಿ ಎಸೆತಗಳನ್ನು ಎದುರಿಸುವುದು ಬ್ಯಾಟ್ಸ್‌ಮನ್‌ಗಳಿಗೆ ಸವಾಲಾಗಿ ಪರಿಣಮಿಸಲಿದೆ. ಈ ವಿಚಾರದಲ್ಲಿ ನಾನು ಬ್ಯಾಟ್ಸ್‌ಮನ್‌ಗಳಿಗೆ ನೆರವಾಗಲು ಸದಾಸಿದ್ದನಿದ್ದೇನೆ ಎಂದು ವಿನೋದ್ ಕಾಂಬ್ಳಿ ಹೇಳಿದ್ದಾರೆ.

ಐಪಿಎಲ್ ‌2021: ತಂಡದಲ್ಲಿ 5 ವಿದೇಶಿ ಆಟಗಾರನ್ನು ಸೇರಿಸಲು ಫ್ರಾಂಚೈಸಿ ಒತ್ತಾಯ

48 ವರ್ಷದ ವಿನೋದ್‌ ಕಾಂಬ್ಳಿ 1991ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಕಾಂಬ್ಳಿ ಭಾರತ ಪರ 17 ಟೆಸ್ಟ್‌, 104 ಏಕದಿನ ಪಂದ್ಯವನ್ನಾಡಿದ್ದಾರೆ. ಸದ್ಯ ಕಾಂಬ್ಳಿ ಸಚಿನ್‌ ಅಕಾಡೆಮಿಯಲ್ಲಿ ಬ್ಯಾಟಿಂಗ್‌ ಸಲಹೆಗಾರರಾಗಿ ಕಾರ‍್ಯನಿರ್ವಹಿಸುತ್ತಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026 ಐಪಿಎಲ್ ಹರಾಜಿನಿಂದ ಹಿಂದೆ ಸರಿದ ಮತ್ತಿಬ್ಬರು ಸ್ಟಾರ್ ಆಲ್ರೌಂಡರ್ಸ್!
IPL 2026 ಆಟಗಾರರ ಹರಾಜಿನ ಲಿಸ್ಟ್‌ ಫೈನಲ್: 2 ಕೋಟಿ ಮೂಲ ಬೆಲೆ ಹೊಂದಿರುವ ಆಟಗಾರ ಪಟ್ಟಿ ಔಟ್, ಕೇವಲ 2 ಭಾರತೀಯರಿಗೆ ಸ್ಥಾನ!