ಸೋತ್ರೆ ಟೂರ್ನಿಯಿಂದ ಔಟ್, ಗೆದ್ರೆ ಫ್ಲೇ ಆಫ್ ಚಾನ್ಸ್; KXIP vs RR ನಿರ್ಣಾಯಕ ಫೈಟ್!

Published : Oct 30, 2020, 01:01 PM IST
ಸೋತ್ರೆ ಟೂರ್ನಿಯಿಂದ ಔಟ್, ಗೆದ್ರೆ ಫ್ಲೇ ಆಫ್ ಚಾನ್ಸ್; KXIP vs RR ನಿರ್ಣಾಯಕ ಫೈಟ್!

ಸಾರಾಂಶ

ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ರಾಜಸ್ಥಾನ ರಾಯಲ್ಸ್ ಇಂದು ಮುಖಾಮುಖಿಯಾಗುತ್ತಿದೆ. ಉಭಯ ತಂಡಗಳಿಗೆ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಜಿದ್ದಾ ಜಿದ್ದಿನ ಹೋರಾಟ ನಡೆಯಲಿದೆ. 

ಅಬುಧಾಬಿ(ಅ.30): : ಸತತ 5 ಪಂದ್ಯ ಗೆದ್ದಿರುವ ಕಿಂಗ್ಸ್‌ ಇಲೆವೆನ್‌ ಪಂಜಾಬ್‌, ರಾಜಸ್ಥಾನ ರಾಯಲ್ಸ್‌ ವಿರುದ್ಧ ಇಲ್ಲಿ ಶುಕ್ರವಾರ ನಡೆಯಲಿರುವ ಐಪಿಎಲ್‌ ಪಂದ್ಯದಲ್ಲಿ ಎದುರಾಗಲಿದೆ. 13ನೇ ಆವೃತ್ತಿಯಲ್ಲಿ ಪ್ಲೇ ಆಫ್‌ ಹಂತಕ್ಕೇರಲು ಉಭಯ ತಂಡಗಳಿಗೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಪಂದ್ಯದಲ್ಲಿ ಸೋತ ತಂಡ ಟೂರ್ನಿಯಿಂದ ಬಹುತೇಕ ಹೊರಬೀಳಲಿದೆ. 

ಕ್ರಿಸ್ ಗೇಲ್ ಮಡದಿ ನತಾಶಾ ಬೆರಿಡ್ಜ್ ಸೂಪರ್ ಮಾಡೆಲ್‌ಗಿಂತ ಕಡಿಮೆಯಿಲ್ಲ!..

ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಪಂಜಾಬ್‌ ಸತತ ಗೆಲುವು ಪಡೆಯುವ ಮೂಲಕ 4ನೇ ಸ್ಥಾನಕ್ಕೇರಿದೆ. 12 ಪಂದ್ಯಗಳಲ್ಲಿ ಪಂಜಾಬ್‌ 6ರಲ್ಲಿ ಗೆದ್ದಿದ್ದು 12 ಅಂಕಗಳಿಸಿದೆ. ಉಳಿದ 2 ಪಂದ್ಯಗಳಲ್ಲಿ ಪಂಜಾಬ್‌ ಗೆಲುವು ಸಾಧಿಸಲೇಬೇಕಿದೆ. ಇನ್ನೊಂದೆಡೆ ರಾಜಸ್ಥಾನ 12 ಪಂದ್ಯಗಳಿಂದ 7 ಸೋಲು ಅನುಭವಿಸಿದ್ದು, 5ರಲ್ಲಿ ಗೆದ್ದು 10 ಅಂಕಗಳಿಂದ 7ನೇ ಸ್ಥಾನದಲ್ಲಿದೆ. ಇದೀಗ ಪಂಜಾಬ್‌ ವಿರುದ್ಧ ಗೆದ್ದು ಪ್ಲೇ ಆಫ್‌ ರೇಸ್‌ನಲ್ಲಿ ಉಳಿಯುವ ವಿಶ್ವಾಸದಲ್ಲಿ ಸ್ಮಿತ್‌ ಪಡೆ ಇದೆ. ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ ರಾಜಸ್ಥಾನ 8 ವಿಕೆಟ್‌ಗಳಿಂದ ಜಯಿಸಿದ್ದು, ಅದೇ ಲಯವನ್ನು ಮುಂದುವರಿಸುವ ಉತ್ಸಾಹದಲ್ಲಿದೆ.

ಗಂಗೂಲಿ To ಧೋನಿ: ಬಾಲ್ಯದ ಗೆಳೆತಿಯರ ಮದುವೆಯಾದ ಕ್ರಿಕೆಟಿಗರು!.

ಮುಖಾಮುಖಿ: 20
ಪಂಜಾಬ್‌: 09
ರಾಜಸ್ಥಾನ: 11

ಪಿಚ್‌ ರಿಪೋರ್ಟ್‌:
ಅಬುಧಾಬಿ ಪಿಚ್‌ ಸ್ಪರ್ಧಾತ್ಮಕವಾಗಿದೆ. ಮೊದಲು ಬ್ಯಾಟ್‌ ಮಾಡುವ ತಂಡ 170 ರಿಂದ 180 ರನ್‌ ಕಲೆಹಾಕಬೇಕಿದೆ. ಕಳೆದೆರಡು ಪಂದ್ಯಗಳಲ್ಲಿ 2ನೇ ಬ್ಯಾಟಿಂಗ್‌ ನಡೆಸಿದ ತಂಡವೇ ಗೆದ್ದಿದೆ.

ಸ್ಥಳ: ಅಬುಧಾಬಿ, ಆರಂಭ: ರಾತ್ರಿ 7.30ಕ್ಕೆ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಸಿಬಿ ಮ್ಯಾಚ್ ಬೆಂಗಳೂರು ಬಿಟ್ ಎಲ್ಲಿಗೂ ಶಿಫ್ಟ್ ಆಗೊಲ್ಲ! ಮಹತ್ವದ ಅಪ್‌ಡೇಟ್ಸ್‌ ಕೊಟ್ಟ ಬೆಂಗಳೂರು ಫ್ರಾಂಚೈಸಿ
ಸಂಜು ಸ್ಯಾಮ್ಸನ್ ಬ್ಯಾಟರ್‌ ಆಗಿ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಅಗತ್ಯವೇ ಇರಲಿಲ್ಲ ಎಂದ ಮಾಜಿ ಕ್ರಿಕೆಟಿಗ! ಹೀಗೆ ಹೇಳಲು ಕಾರಣವೂ ಇದೆ