
ದುಬೈ(ಅ.07): ನಾನ್ ಸ್ಟ್ರೈಕ್ನಲ್ಲಿರುವ ಬ್ಯಾಟ್ಸ್ಮನ್ಗಳು ಬೌಲ್ ಮಾಡುವ ಮೊದಲೇ ಕ್ರೀಸ್ ಬಿಡದಂತೆ ಡೆಲ್ಲಿ ಕ್ಯಾಪಿಟಲ್ಸ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮತ್ತೊಮ್ಮೆ ಎಚ್ಚರಿಸಿದ್ದಾರೆ.
"
ಸೋಮವಾರ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ಮನ್ ಆ್ಯರೋನ್ ಫಿಂಚ್ ಮುಂಚಿತವಾಗಿಯೇ ಕ್ರೀಸ್ ಬಿಟ್ಟಾಗ ಅಶ್ವಿನ್, ಮಂಕಡಿಂಗ್ ಮೂಲಕ ರನೌಟ್ ಮಾಡಲಿಲ್ಲ. ಪಂದ್ಯದ ಬಳಿಕ ಅಶ್ವಿನ್, ‘ಇದು ಮೊದಲ ಹಾಗೂ ಕೊನೆ ಎಚ್ಚರಿಕೆ. ಆನಂತರ ನನ್ನನ್ನು ದೂರಬೇಡಿ’ ಎಂದು ಟ್ವೀಟ್ ಮಾಡಿದ್ದಾರೆ. ಅಶ್ವಿನ್ರ ಈ ಟ್ವೀಟ್ ವೈರಲ್ ಆಗಿದೆ.
IPL 2020: ಡೆಲ್ಲಿ ದಾಳಿಗೆ ತತ್ತರಿಸಿದ RCB,ಕೊಹ್ಲಿ ಪಡೆಗೆ ಸೋಲಿನ ಶಾಕ್!
ಕಳೆದ ವರ್ಷ ನಡೆದ ಐಪಿಎಲ್ ಟೂರ್ನಿಯ ವೇಳೆ ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಅವರನ್ನು ಆರ್. ಅಶ್ವಿನ್ ಮಂಕಡ್ ರನೌಟ್ ಮಾಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವರ್ಷ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡಿಕೊಂಡ ಬಳಿಕ ತಂಡದ ಕೋಚ್ ರಿಕಿ ಪಾಂಟಿಂಗ್ ಹಾಗೂ ಸ್ಪಿನ್ನರ್ ಅಶ್ವಿನ್ ನಡುವೆ ಈ ಬಗ್ಗೆ ಚರ್ಚೆಯೂ ನಡೆದಿತ್ತು. ಈ ವೇಳೆ ಪಾಂಟಿಂಗ್, ಮಂಕಡಿಂಗ್ ಮಾಡದಂತೆ ಅಶ್ವಿನ್ಗೆ ತಿಳಿ ಹೇಳಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.