ಗುಡುಗಿದ ಸರ್‌ ಜಡೇಜಾ; ಕೆಕೆಆರ್‌ ಮಣಿಸಿ ಮುಂಬೈಗೆ ಲಾಭ ಮಾಡಿದ ಸಿಎಸ್‌ಕೆ

Published : Oct 29, 2020, 11:40 PM ISTUpdated : Oct 29, 2020, 11:50 PM IST
ಗುಡುಗಿದ ಸರ್‌ ಜಡೇಜಾ; ಕೆಕೆಆರ್‌ ಮಣಿಸಿ ಮುಂಬೈಗೆ ಲಾಭ ಮಾಡಿದ ಸಿಎಸ್‌ಕೆ

ಸಾರಾಂಶ

ಸಿಎಸ್‌ಕೆಗೆ ಆರು ವಿಕೆಟ್ ಗೆಲುವು/ ಕೋಲ್ಕತ್ತಾ ನೈಟ್ ರೈಡರ್ಸ್ ಮಣಿಸಿದ ಚೆನ್ನೈ/ ಕೊನೆಯ ಓವರ್ ಕೊನೆ ಎಸೆತದಲ್ಲಿ ಗೆಲುವು ದಾಖಲಿಸಿದ ಸೂಪರ್ ಕಿಂಗ್ಸ್/  ಕೊನೆಯ ಎರಡು ಓವರ್‌ಗೆ  30 ರನ್ ಬೇಕಿತ್ತು

ಅಬುದಾಬಿ(ಅ. 29)  ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಚೇಸಿಂಗ್ ಮಾಡಿ ಮುಗಿಸಿದೆ. ಕೋಲ್ಕತ್ತಾ ನೀಡಿದ್ದ 173  ರನ್ ಚೇಸ್ ಮಾಡಿ ಗೆಲುವು ಸಾಧಿಸಿದೆ.

ಚೆನ್ನೈ ಪ್ಲೇ ಆಪ್ ಅವಕಾಶ ಕಳೆದುಕೊಂಡಿದೆ. ಆದರೆ ಈ ಗೆಲುವಿನೊಂದಿಗೆ ಟಾಪ್ ಸ್ಥಾನದಲ್ಲಿದ್ದ ಮುಂಬೈ ಪ್ಲೇ ಅಪ್ ಗೆ ಪ್ರವೇಶ ಪಡೆದುಕೊಂಡಿದೆ.  ಕೊನೆಯಲ್ಲಿ ಮಿಂಚಿದ ರವೀಂದ್ರ ಜಡೇಜಾ ಪಂದ್ಯದ ಹೀರೋ ಆದರು.

ಚೆನ್ನೈ ವಿರುದ್ಧ ಸೋತರೂ ಕೆಕೆಆರ್‌ಗೆ ಪ್ಲೇ ಆಪ್ ಅವಕಾಶ ಇದೇಯಾ?

ಕೆಕೆಆರ್ ಪರ ಬ್ಯಾಟ್ ಬೀಸಿದ ನೀತಿಶ್ ರಾಣಾ 87 ರನ್ ಗಳಿಸಿ ಕೋಲ್ಕತ್ತಾ ಮೊತ್ತ ಹೆಚ್ಚಲು ಕಾರಣವಾದರು. ಚೆಸಿಂಗ್ ಗೆ ಇಳಿದ ಸಿಎಸ್‌ಕೆಗೆ ರುತುರಾಜ್ ಗಾಯಕ್ವಾಡ್ ನೆರವಾಗಿ ನಿಂತರು. ಅಂತಿಮ ಹಂತದಲ್ಲಿ ಪಂದ್ಯ ಕೆಕೆಆರ್ ಪರ ವಾಲಿದಂತೆ  ಕಂಡರೂ ಕೇವಲ ಹನ್ನೊಂದು ಎಸೆತದಲ್ಲಿ  31 ರನ್ ಚಚ್ಚಿದ ರವೀಂದ್ರ ಜಡೇಜಾ ಸಿಎಸ್‌ಕೆಗೆ ಗೆಲವು ತಂದುಕೊಟ್ಟರು. ರುತುರಾಜ್ ಪಂದ್ಯ ಪುರುಷರಾದರು.  ಆರ್ ಸಿಬಿ ವಿರುದ್ಧವೂ ರುತುರಾಜ್ ಅರ್ಧ ಶತಕ ದಾಖಲಿಸಿ ಪಂದ್ಯ ಪುರುಷ ಪ್ರಶಸ್ತಿ ಪಡೆದುಕೊಂಡಿದ್ದರು.

ಈ ಸೋಲಿನ ಬಳೀಕ ಕೆಕೆಆರ್‌ಗೆ ಪ್ಲೇ ಅಪ್ ಆಸೆ ಬಹುತೇಕ್ ಅಂತ್ಯವಾಗಿದೆ. ಇನ್ನೊಂದು ಕಡೆ ಕೊನೆಯ ಸ್ಥಾನದಲ್ಲಿರುವ ಸಿಎಸ್‌ಕೆ ಗೆಲುವಿನ ಮೂಲಕ ಅಭಿಮಾನಿಗಳನ್ನು ರಂಜಿಸಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಸಿಬಿ ಮ್ಯಾಚ್ ಬೆಂಗಳೂರು ಬಿಟ್ ಎಲ್ಲಿಗೂ ಶಿಫ್ಟ್ ಆಗೊಲ್ಲ! ಮಹತ್ವದ ಅಪ್‌ಡೇಟ್ಸ್‌ ಕೊಟ್ಟ ಬೆಂಗಳೂರು ಫ್ರಾಂಚೈಸಿ
ಸಂಜು ಸ್ಯಾಮ್ಸನ್ ಬ್ಯಾಟರ್‌ ಆಗಿ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಅಗತ್ಯವೇ ಇರಲಿಲ್ಲ ಎಂದ ಮಾಜಿ ಕ್ರಿಕೆಟಿಗ! ಹೀಗೆ ಹೇಳಲು ಕಾರಣವೂ ಇದೆ