
ಅಬು ಧಾಬಿ(ಅ.19): ಅಂಕಪಟ್ಟಿಯಲ್ಲಿ ಅಂತಿಮ 2 ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಹೋರಾಟಕ್ಕೆ ಅಬು ಧಾಬಿ ಕ್ರೀಡಾಂಗಣ ಸಜ್ಜಾಗಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
"
ಚೆನ್ನೈ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಜೋಶ್ ಹೇಜಲ್ವುಡ್ ಹಾಗೂ ಪಿಯೂಷ್ ಚಾವ್ಲಾ ತಂಡ ಸೇರಿಕೊಂಡಿದ್ದಾರೆ. ರಾಜಸ್ಥಾನ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ಜಯದೇವ್ ಉನಾದ್ಕಟ್ ಬದಲು ಅಂಕಿತ್ ರಜಪೂತ್ ತಂಡ ಸೇರಿಕೊಂಡಿದ್ದಾರೆ.
ಚೆನ್ನೈ ಹಾಗೂ ರಾಜಸ್ಥಾನ ತಂಡಗಳು 6 ಪಂದ್ಯಗಳನ್ನು ಸೋತಿದೆ. ಆದರೆ ಇನ್ನುಳಿದ ಎಲ್ಲಾ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಪ್ಲೇ ಆಫ್ ಅವಕಾಶವಿದೆ. ಹೀಗಾಗಿ ಉಭಯ ತಂಡಗಳಿಗೆ ಇಂದು ಮಹತ್ವದ ಪಂದ್ಯವಾಗಿದೆ.
ಆಡಿದ 9 ಪಂದ್ಯದಲ್ಲಿ ಕೇವಲ 3 ಗೆಲುವು ದಾಖಲಿಸಿರುವ ಚೆನ್ನೈ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರೆ, ಇತ್ತ ರಾಜಸ್ಥಾನ ರಾಯಲ್ಸ್ ಕೂಡ 3 ಗೆಲುವು ದಾಖಲಿಸಿದೆ. ಆದರೆ ನೆಟ್ ರನ್ರೇಟ್ನಿಂದ ರಾಜಸ್ಥಾನ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.