
ದುಬೈ(ಅ.14): ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 30ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಇಲ್ಲಿನ ದುಬೈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಹೆಚ್ಚು ಯಶಸ್ಸು ಗಳಿಸಿದ್ದರಿಂದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಹರ್ಷಲ್ ಪಟೇಲ್ ಬದಲಿಗೆ ತುಷಾರ್ ದೇಶ್ಪಾಂಡೆ ಐಪಿಎಲ್ಗೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ಪಂದ್ಯಗಳಲ್ಲಿ 5 ಗೆಲುವು ಹಾಗೂ 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ತಂಡ 7 ಪಂದ್ಯಗಳಲ್ಲಿ 3 ಗೆಲುವು ಹಾಗೂ 4 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿವೆ.
ತಂಡಗಳು ಹೀಗಿವೆ:
ರಾಜಸ್ಥಾನ ರಾಯಲ್ಸ್:
ಡೆಲ್ಲಿ ಕ್ಯಾಪಿಟಲ್ಸ್:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.