IPL
ರಾಜಸ್ಥಾನ ರಾಯಲ್ಸ್ ಎದುರು ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಮಾಡಲು ತೀರ್ಮಾನಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ದುಬೈ(ಅ.14): ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 30ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಇಲ್ಲಿನ ದುಬೈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಹೆಚ್ಚು ಯಶಸ್ಸು ಗಳಿಸಿದ್ದರಿಂದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
win the toss and they will bat first against . pic.twitter.com/kKiNOpgHvP
— IndianPremierLeague (@IPL)ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಹರ್ಷಲ್ ಪಟೇಲ್ ಬದಲಿಗೆ ತುಷಾರ್ ದೇಶ್ಪಾಂಡೆ ಐಪಿಎಲ್ಗೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ಪಂದ್ಯಗಳಲ್ಲಿ 5 ಗೆಲುವು ಹಾಗೂ 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ತಂಡ 7 ಪಂದ್ಯಗಳಲ್ಲಿ 3 ಗೆಲುವು ಹಾಗೂ 4 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿವೆ.
ತಂಡಗಳು ಹೀಗಿವೆ:
ರಾಜಸ್ಥಾನ ರಾಯಲ್ಸ್:
Match 30. Rajasthan Royals XI: B Stokes, J Buttler, S Smith, S Samson, R Uthappa, R Parag, R Tewatia, J Archer, S Gopal, J Unadkat, K Tyagi https://t.co/EQMevHDurJ
— IndianPremierLeague (@IPL)ಡೆಲ್ಲಿ ಕ್ಯಾಪಿಟಲ್ಸ್:
Match 30. Delhi Capitals XI: P Shaw, S Dhawan, A Rahane, S Iyer, M Stoinis, A Carey, A Patel, R Ashwin, K Rabada, T Deshpande, A Nortje https://t.co/EQMevHDurJ
— IndianPremierLeague (@IPL)