
ಅಬು ಧಾಬಿ(ಅ.19): ರಾಜಸ್ಥಾನ ರಾಯಲ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಎಂ.ಎಸ್.ಧೋನಿ ಹಾಗೂ ರವೀಂದ್ರ ಜಡೇಜಾ ಜೊತೆಯಾಟದಿಂದ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ನಷ್ಟಕ್ಕೆ 125 ರನ್ ಸಿಡಿಸಿದೆ
ಟಾಸ್ ಗೆದ್ದ ಬ್ಯಾಟಿಂಗ್ ಇಳಿದ ಚೆನ್ನೈ ಸೂಪರ್ ಕಿಂಗ್ಸ್, ಉತ್ತಮ ಆರಂಭ ಪಡೆಯಲು ಸಾಧ್ಯವಾಗಿಲ್ಲ. ಫಾಫ್ ಡುಪ್ಲೆಸಿಸ್ ಕೇವಲ 10 ರನ್ ಸಿಡಿಸಿ ಔಟಾದರು. ಶೇನ್ ವ್ಯಾಟ್ಸನ್ ಕೇವಲ 8 ರನ್ ಸಿಡಿಸಿ ನಿರ್ಗಮಿಸಿದರು. ಸ್ಯಾಮ್ ಕುರನ್ 22 ರನ್ ಕಾಣಿಕೆ ನೀಡಿದರು.
ಪ್ರತಿ ಭಾರಿ ತಂಡಕ್ಕೆ ಆಸರೆಯಾಗುತ್ತಿದ್ದ ಅಂಬಾಟಿ ರಾಯುಡು 13 ರನ್ ಸಿಡಿಸಿ ಔಟಾದರು. 56 ರನ್ ಕಲೆಹಾಕುವಷ್ಟರಲ್ಲೇ ಸಿಎಸ್ಕೆ ಪ್ರಮುಖ 4 ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ಎಂ.ಎಸ್.ಧೋನಿ ಹಾಗೂ ರವೀಂದ್ರ ಜಡೇಜಾ ಜೊತೆಯಾಟದಿಂದ ಚೆನ್ನೈ ಚೇತರಿಸಿಕೊಂಡಿತು.
ಧೋನಿ 28 ರನ್ ಸಿಡಿಸಿ ಔಟಾದರು. ಇತ್ತ ರವೀಂದ್ರ ಜಡೇಜಾ ಬ್ಯಾಟಿಂಗ್ ಮುಂದುವರಿಸಿದರು. ಜಡೇಜಾ ಅಜೇಯ 35 ರನ್ ಸಿಡಿಸಿದರು. ಈ ಮೂಲಕ ಸಿಎಸ್ಕೆ 5 ವಿಕೆಟ್ ನಷ್ಟಕ್ಕೆ 125 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.