
ನವದೆಹಲಿ(ಆ.31): ವೈಯಕ್ತಿಕ ಕಾರಣಗಳಿಂದಾಗಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಬಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ರೌಂಡರ್ ಸುರೇಶ್ ರೈನಾ ಅವರ ಸ್ಥಾನ ತುಂಬಬಲ್ಲ ಆಟಗಾರರ ರೇಸಲ್ಲಿ ಕರ್ನಾಟಕದ ರೋಹನ್ ಕದಂ ಒಬ್ಬರಾಗಿದ್ದಾರೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದಿದ್ದ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ರೋಹನ್ ಯಾವ ತಂಡಕ್ಕೂ ಆಯ್ಕೆಯಾಗಿರಲಿಲ್ಲ. ಈ ಬಾರಿ ರೈನಾ ಸ್ಥಾನಕ್ಕೆ ಚೆನ್ನೈ ತಂಡ ರಾಜ್ಯದ ರೋಹನ್ರನ್ನು ಆಯ್ಕೆ ಮಾಡಿದರೆ, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಆಗಿ ಮಿಂಚಲಿದ್ದಾರೆ.
26 ವರ್ಷದ ರೋಹನ್ ಕದಂ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮುಂಬೈ ತಂಡದ ವಿರುದ್ಧ 71 ರನ್ ಬಾರಿಸಿ ಗಮನ ಸೆಳೆದಿದ್ದರು. ಹೀಗಿದ್ದು ಅವರು ಐಪಿಎಲ್ ಆಟಗಾರರ ಹರಾಜಿನಲ್ಲಿ ಯಾವೊಂದು ಫ್ರಾಂಚೈಸಿಯು ಖರೀದಿಸುವ ಮನಸು ಮಾಡಿರಲಿಲ್ಲ. ಇನ್ನು ಮುಷ್ತಾಕ್ ಅಲಿ ಟ್ರೋಫಿಯ ತಮಿಳುನಾಡು ವಿರುದ್ಧದ ಫೈನಲ್ ಪಂದ್ಯದಲ್ಲೂ ಕದಂ 28 ಎಸೆತಗಳಲ್ಲಿ 35 ರನ್ ಬಾರಿಸಿದ್ದರು. ಆ ಪಂದ್ಯವನ್ನು ಕರ್ನಾಟಕ ತಂಡ 1 ರನ್ಗಳಿಂದ ರೋಚಕವಾಗಿ ಗೆದ್ದು ಕಪ್ ತಮ್ಮದಾಗಿಸಿಕೊಂಡಿತು. ಒತ್ತಡದ ಸಂದರ್ಭದಲ್ಲಿ ಸರಾಗವಾಗಿ ಬ್ಯಾಟ್ ಬೀಸುವುದನ್ನು ಕದಂ ಕರಗತ ಮಾಡಿಕೊಂಡಿದ್ದಾರೆ.
ಸಿಎಸ್ಕೆ ಅಭ್ಯಾಸ ಶಿಬಿರ ವಿಳಂಬ: ಸೆಪ್ಟೆಂಬರ್ 6ರಿಂದ ಶುರು?
ರೋಹನ್ ಸದ್ಯ ಫಾರ್ಮ್ನಲ್ಲಿರುವ ಆಟಗಾರರಾಗಿದ್ದಾರೆ.ಉಳಿದಂತೆ ಯುಸೂಫ್ ಪಠಾಣ್, ಮನೋಜ್ ತಿವಾರಿ ರೇಸ್ನಲ್ಲಿರುವ ಇತರೆ ಆಟಗಾರರಾಗಿದ್ದಾರೆ. ಹೀಗಾಗಿ ಈ ಮೂವರು ಆಟಗಾರರ ಪೈಕಿ ಯಾರಿಗೆ ಸಿಎಸ್ಕೆ ಮಣೆ ಹಾಕುತ್ತೆ? ಅಥವಾ ಈ ಮೂವರು ಆಟಗಾರರನ್ನು ಬಿಟ್ಟು ಬೇರೆ ಆಟಗಾರರನ್ನು ತನ್ನ ತಂಡಕ್ಕೆ ಸೇರಿಸಿಕೊಳ್ಳುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.