ಐಪಿಎಲ್ 2020: ಡೆಲ್ಲಿಗೆ ಸವಾಲಿನ ಗುರಿ ನೀಡಿದ ಕೆಕೆಆರ್

Suvarna News   | Asianet News
Published : Oct 24, 2020, 05:19 PM ISTUpdated : Oct 24, 2020, 05:23 PM IST
ಐಪಿಎಲ್ 2020: ಡೆಲ್ಲಿಗೆ ಸವಾಲಿನ ಗುರಿ ನೀಡಿದ ಕೆಕೆಆರ್

ಸಾರಾಂಶ

ಕೆಕೆಆರ್ ತಂಡದ ನರೈನ್ ಹಾಗೂ ರಾಣಾ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಕೆಕೆಆರ್ ತಂಡ 6 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಅಬುಧಾಬಿ(ಅ.24): ನಿತೀಶ್ ರಾಣಾ() ಹಾಗೂ ಸುನಿಲ್ ನರೈನ್(64) ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಕೋಲ್ಕತ ನೈಟ್‌ ರೈಡರ್ಸ್ 6 ವಿಕೆಟ್ ಕಳೆದಕೊಂಡು 194 ರನ್ ಬಾರಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸವಾಲಿನ ಗುರಿ ನೀಡಿದೆ.
ಹೌದು, ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಕೋಲ್ಕತ ನೈಟ್‌ ರೈಡರ್ಸ್ ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಶುಭ್‌ಮನ್ ಗಿಲ್ 9 ರನ್ ಬಾರಿಸಿ ನೊಕಿಯೆಗೆ ವಿಕೆಟ್‌ ಒಪ್ಪಿಸಿದರೆ, ರಾಹುಲ್ ತ್ರಿಪಾಠಿ(13) ಹಾಗೂ ದಿನೇಶ್ ಕೂಡಾ(03) ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನೆಲೆಯೂರಲಿಲ್ಲ. 42 ರನ್‌ ಗಳಿಸುವಷ್ಟರಲ್ಲೇ ಕೆಕೆಆರ್‌ನ ಮೂರು ಪ್ರಮುಖ ಆಟಗಾರರು ಪೆವಿಲಿಯನ್ ಸೇರಿದ್ದರು.

ತಂಡಕ್ಕೆ ಆಸರೆಯಾದ ನರೈನ್-ರಾಣಾ: ಟೂರ್ನಿಯಲ್ಲಿ ರನ್‌ ಬರ ಅನುಭವಿಸಿದ್ದ ನಿತೀಶ್ ರಾಣಾ ಇಂದು ಆರಂಭಿಕನಾಗಿ ಕಣಕ್ಕಿಳಿದು ಕಮಾಲ್ ಮಾಡಿದರು. ತಂಡ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ರಾಣಾ ಹಾಗೂ ಸುನಿಲ್ ನರೈನ್ 4ನೇ ವಿಕೆಟ್‌ಗೆ  115 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ನರೈನ್ 32 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 64 ರನ್ ಬಾರಿಸಿದರೆ, ರಾಣಾ 53 ಎಸೆತಗಳಲ್ಲಿ 13 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 81 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ನಾಯಕ ಇಯಾನ್ ಮಾರ್ಗನ್ 17 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 190ರ ಗಡಿ ದಾಟಿಸಿದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ನೊಕಿಯೆ, ರಬಾಡ ಹಾಗೂ ಸ್ಟೋಯ್ನಿಸ್ ತಲಾ 2  ವಿಕೆಟ್ ಪಡೆದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಿಂದ ಆರ್‌ಸಿಬಿ ಮ್ಯಾಚ್ ಪುಣೆಗೆ ಶಿಫ್ಟ್ ಮಾಡಲು ಬಿಸಿಸಿಐ ಮೇಲೆ ಮಹಾರಾಷ್ಟ್ರ ಒತ್ತಡ!
ಮುಸ್ತಾಫಿಜುರ್‌ ರಹಮಾನ್ ಕೆಕೆಆರ್‌ ತಂಡದಿಂದ ಗೇಟ್‌ಪಾಸ್; ಮೊದಲ ಸಲ ಮೌನ ಮುರಿದ ಬಾಂಗ್ಲಾದೇಶ ವೇಗಿ!